ಬೆಂಗಳೂರು, (ಜನವರಿ 27): ಕರ್ನಾಟಕದಲ್ಲಿ ದರೋಡೆ ಪ್ರಕರಣಗಳು ಮುಂದುವರೆದಿದೆ. ನಿನ್ನೆ ಅಷ್ಟೇ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಹಲಸಂಗಿ ಗ್ರಾಮದ ಭೂಮಿಕಾ ಜ್ಯೂವೆಲರಿ ನುಗ್ಗಿ ಚಿನ್ನಾಭರಣ ದೋಚಿಕೊಂಡು ಎಸ್ಕೇಪ್ ಆಗಿದ್ದರು. ಇದರಲ್ಲೇ ಇಂದು (ಜನವರಿ 27) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ದರೋಡೆಕೋರರು ಗನ್ ತೋರಿಸಿ ಜ್ಯುವೆಲ್ಲರಿ ಅಂಗಡಿಯಲ್ಲಿ ಚಿನ್ನಾಭರಣ ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ದರೋಡೆಕೋರರು ಗನ್ ತೋರಿಸಿ ರಾಮ್ ದೇವ್ ಜ್ಯುವೆಲ್ಲರಿಗೆ ನುಗ್ಗಿದ್ದು, ಕೈಗೆ ಸಿಕ್ಕ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ. ಖದೀಮರು ಕರಾಮತ್ತು ಸಿಸಿಟಿ ಟಿವಿಯಲ್ಲಿ ಸೆರೆ ಹಿಡಿದ, ಸ್ಥಳಕ್ಕೆ ಬಂದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.