Headlines

Naa Ninna Bidalaare ರೋಚಕ ಟ್ವಿಸ್ಟ್​: ಭೂತಕಾಲಕ್ಕೆ ಹೋದ ದೆವ್ವ! ಇನ್ನು ನಡೆಯಲ್ಲ ಮಾಳವಿಕಾ ಆಟ

Naa Ninna Bidalaare ರೋಚಕ ಟ್ವಿಸ್ಟ್​: ಭೂತಕಾಲಕ್ಕೆ ಹೋದ ದೆವ್ವ! ಇನ್ನು ನಡೆಯಲ್ಲ ಮಾಳವಿಕಾ ಆಟ



Naa Ninna Bidalaare ರೋಚಕ ಟ್ವಿಸ್ಟ್​: ಭೂತಕಾಲಕ್ಕೆ ಹೋದ ದೆವ್ವ! ಇನ್ನು ನಡೆಯಲ್ಲ ಮಾಳವಿಕಾ ಆಟ
<p>’ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ, ದೆವ್ವವಾಗಿರುವ ಅಂಬಿಕಾ ತನ್ನ ಸಾವಿನ ರಹಸ್ಯವನ್ನು ಭೇದಿಸಲು ಭೂತಕಾಲಕ್ಕೆ ಹೋಗುತ್ತಾಳೆ. ಅಲ್ಲಿ ತನ್ನ ಸಾವಿಗೆ ಮಾಯಾ ಮತ್ತು ಅತ್ತೆ ಮಾಳವಿಕಾ ಕಾರಣ ಎಂದು ತಿಳಿದುಬರುತ್ತದೆ. &nbsp;</p><img><p>ದೆವ್ವ, ಭೂತ, ಪಿಶಾಚಿ ಇರುವ ಸೀರಿಯಲ್​​ಗಳನ್ನು, ಸಿನಿಮಾಗಳನ್ನು ನೋಡಲು ಇಷ್ಟಪಡುವ ದೊಡ್ಡ ವರ್ಗವೇ ಇದೆ. ಇದೇ ಕಾರಣಕ್ಕೆ ಜೀ ಕನ್ನಡದ ನಾ ನಿನ್ನ ಬಿಡಲಾರೆ ಸೀರಿಯಲ್​ ಕೂಡ ಸಕತ್​ ಫೇಮಸ್​ ಆಗುತ್ತಿದೆ. ಇದರಲ್ಲಿ ಇರುವ ಕ್ಯೂಟ್​ ದೆವ್ವ ಅಂಬಿಕಾ ಎಲ್ಲರ ಫೆವರೆಟ್​ ಆಗಿದ್ದಾಳೆ.</p><img><p>ಇದೀಗ ತನ್ನ ಸಾವಿಗೆ ಯಾರು ಕಾರಣ ಎನ್ನುವುದನ್ನು ಕಂಡುಹಿಡಿಯಲು ಅಂಬಿಕಾ ನಿರ್ಧರಿಸಿದ್ದಾಳೆ. ಆ ಶಕ್ತಿಯನ್ನು ಅವಳ ಅಪ್ಪ ಶಂಭು ಅಂಬಿಕಾಗೆ ನೀಡಿದ್ದಾನೆ.</p><img><p>ಈ ಮೂಲಕ, ದೆವ್ವ ಆಗಿರೋ ಅಂಬಿಕಾ, ಈಗ ಭೂತ ಕಾಲಕ್ಕೆ ಹೋಗಿದ್ದಾಳೆ. ತನ್ನ ಸಾವಿಗೆ ಯಾರು ಕಾರಣ ಎಂದು ತಿಳಿದುಕೊಳ್ಳಲು ತಾನು ಬೆಂಕಿಯಲ್ಲಿ ಬೆಂದು ಹೋಗಿರುವ ದಿನಕ್ಕೆ ಸರಿದಿದ್ದಾಳೆ.</p><img><p>ಅಲ್ಲಿ ಅವಳಿಗೆ ಮಾಯಾ ಮತ್ತು ಮಾಳವಿಕಾ ಕುತಂತ್ರದಿಂದ ಸಾಯಿಸಿರುವುದು ತಿಳಿದಿದೆ. ಮಾಯಾ ಬೆಂಕಿ ಕಡ್ಡಿ ಗೀರಿ ಮನೆಯನ್ನು ಭಸ್ಮ ಮಾಡಿದ್ದರೆ, ಮಾಳವಿಕಾ ಅವಳಿಗೆ ನೆರವಾಗ್ತಿರೋದು ಅಂಬಿಕಾಗೆ ಕಂಡಿದೆ.</p><img><p>ಇದೀಗ ಭೂತಕಾಲದಲ್ಲಿಯೇ ಇರುವ ಅಂಬಿಕಾ ಕೊತಕೊತ ಕುದಿಯುತ್ತಿದ್ದಾಳೆ. ಇಷ್ಟು ದಿನ ಅತ್ತೆ ಮಾಳವಿಕಾ ತುಂಬಾ ಒಳ್ಳೆಯವಳು ಅಂದುಕೊಂಡಿದ್ದಳು ಅವಳು. ಅದರೆ ಇದೀಗ ಬಣ್ಣ ಬಯಲಾಗಿದೆ.</p><img><p>ಈಗ ಮಾಳವಿಕಾ ಮತ್ತು ಮಾಯಾಳ ಕಥೆ ಮುಗಿಸಲು ಪಣ ತೊಟ್ಟಿದ್ದಾಳೆ ಅಂಬಿಕಾ, ಭೂತಕಾಲದಲ್ಲಿಯೇ ಮಾಳವಿಕಾಳ ಬ*ಲಿ ತೆಗೆದುಕೊಳ್ಳಲು ನೋಡುತ್ತಿದ್ದಾಳೆ.ಆದರೆ ತಂತ್ರ ಮಂತ್ರ ವಿದ್ಯೆ ಗೊತ್ತಿರೋ ಮಾಳವಿಕಾ ಅಷ್ಟು ಸುಲಭದಲ್ಲಿ ಸಾಯುವವಳು ಅಲ್ಲ, ಆಕೆ ಸತ್ತರೆ ಸೀರಿಯಲ್​ ಮುಗಿಯುವ ಕಾರಣ, ನಿರ್ದೇಶಕರು ಆಕೆಯನ್ನು ಸಾಯಿಸುವುದೂ ಇಲ್ಲ. ಆದ್ದರಿಂದ ಇದೀಗ ಸೀರಿಯಲ್​ ಮತ್ತಷ್ಟು ಕುತೂಹಲ ಕೆರಳಿಸುತ್ತಿದೆ.</p>



Source link

Leave a Reply

Your email address will not be published. Required fields are marked *