ಮಡಿಕೇರಿ, ಜನವರಿ 30: ಶಾಲಾ ಮಕ್ಕಳನ್ನು ಬಿಟ್ಟು ವಾಪಸ್ ಬರುವಾಗ ಸ್ಕೂಲ್ ಬಸ್ಸೊಂದಕ್ಕೆ ಕಿರಿದಾದ ರಸ್ತೆಯಲ್ಲಿ ಕಾಡಾನೆ ಎದುರಾಗಿ ಆತಂಕದ ಸನ್ನಿವೇಶ ನಿರ್ಮಾಣವಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ನಡೆದಿದೆ. ಒಂಟಿ ಸಲಗ ಎದುರು ಸಿಕ್ಕಾಗ ಚಾಲಕ ಬಸ್ಸನ್ನು ಹಿಂದಕ್ಕೆ ಓಡಿಸಿಕೊಂಡು ಬಂದಿದ್ದಾನೆ. ಆದರೆ, ಆ ಸಂದರ್ಭದಲ್ಲಿ ಆತನನ್ನು ಪ್ರಚೋದಿಸಿ ಮಗಳ ಬಳಿ ವಿಡಿಯೋ ಮಾಡಲು ಹೇಳಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ