ರಣವೀರ್ ಸಿಂಗ್ (ರಣವೀರ್ ಸಿಂಗ್) ನಟನೆಯ ‘ಧುರಂಧರ’ ಸಿನಿಮಾ ಭಾರತೀಯ ಬಾಕ್ಸ್ ಆಫೀಸ್ನಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾ ಆದ ‘ಧುರಂಧರ’ ಅತಿ ಹೆಚ್ಚು ಗಳಿಕೆ ಮಾಡಿದ ಭಾರತೀಯ ಸಿನಿಮಾಗಳಲ್ಲಿ ಒಂದೆನೆಸಿದೆ. ಸಿನಿಮಾದ ಕತೆ ನಡೆಯುವುದು ಪಾಕಿಸ್ತಾನದಲ್ಲಿ, ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವೇಷದ ಯುದ್ಧ, ಪಾಕಿಸ್ತಾನದ ಭಯೋತ್ಪಾದನೆ, ಎರಡೂ ದೇಶಗಳ ನಡುವಿನ ವೈಮನಸ್ಯ ಮತ್ತಿತರ ವಿಷಯಗಳ ಬಗ್ಗೆ ಸಾಕಷ್ಟು ಸಂಭಾಷಣೆಗಳು ಸಿನಿಮಾದಲ್ಲಿವೆ. ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆಯಾದಾಗ ಕೆಲವರ ಸಂಭಾಷಣೆಗಳನ್ನು ಮ್ಯೂಟ್ ಮಾಡಲಾಗಿದೆ. ಇದೀಗ ಓಟಿಗೆ ಬಂದಿದ್ದು, ಇಲ್ಲಿಯೂ ಸಹ ಸಿನಿಮಾ ಪ್ರೇಮಿಗಳಿಗೆ ಸಿನಿಮಾ ನಿರಾಸೆ ಎದುರಾಗಿದೆ.
ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗುವಾಗ ಯಾವುದೇ ಸೆನ್ಸಾರ್ ಇಲ್ಲದೆ ಆಗುತ್ತದೆ ಎಂಬ ನಿರೀಕ್ಷೆ ಅಭಿಮಾನಿಗಳಿತ್ತು, ಇದೀಗ ‘ಧುರಂಧರ’ ಸಿನಿಮಾ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿದೆ, ಆದರೆ ಚಿತ್ರಮಂದಿರದಲ್ಲಿ ಸೆನ್ಸಾರ್ ಆಗುತ್ತಿದೆ ಎಂದು ಸಿನಿಮಾ ಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಚಿತ್ರಮಂದಿರದಲ್ಲಿ ಬಿಡುಗಡೆಯಾದ ಆವೃತ್ತಿಯಲ್ಲಿ ಹತ್ತು ನಿಮಿಷ ಕಡಿಮೆ ಅವಧಿಯ ಆವೃತ್ತಿಯನ್ನು ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಮಾಡಲಾಗಿದೆ. ಜೊತೆಗೆ ಹಲವಾರು ದೃಶ್ಯಗಳು, ಸಂಭಾಷಣೆಗಳನ್ನು ಮ್ಯೂಟ್ ಮಾಡಲಾಗಿದೆ. ‘ಸಿನಿಮಾಕ್ಕೆ ‘ಎ’ ಪ್ರಮಾಣ ಪತ್ರ ನೀಡಿದ ಸಿನಿಮಾದ ದೃಶ್ಯಗಳು, ಸಂಭಾಷಣೆಗಳನ್ನು ಸೆನ್ಸಾರ್ ಮಾಡುವ ಅವಶ್ಯಕತೆ ಏನಿತ್ತು’ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ:’ಧುರಂಧರ್ 2′ ಚಿತ್ರಕ್ಕಾಗಿ ಮತ್ತೆ ಶೂಟಿಂಗ್ ಮಾಡಿಲ್ಲ ಅರ್ಜುನ್ ರಾಮ್ಪಾಲ್
‘ಧುರಂಧರ’ ಸಿನಿಮಾ ಒಟಿಟಿಯಲ್ಲಿ ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಮಾತ್ರವೇ ಬಿಡುಗಡೆ ಆಗಿದೆ. ಇದು ಕನ್ನಡದಲ್ಲಿ ಸಿನಿಮಾ ವೀಕ್ಷಿಸಲು ಕಾಯುತ್ತಿದ್ದವರಿಗೆ ನಿರಾಸೆ ಉಂಟು ಮಾಡಿದೆ. ಸಿನಿಮಾ ಮಲಯಾಳಂ ಭಾಷೆಯಲ್ಲಿಯೂ ವೀಕ್ಷಣೆಗೆ ಲಭ್ಯವಿಲ್ಲ. ಗಮನಿಸಬೇಕಾದ ಪ್ರದರ್ಶನದ ಅಂಶವೆಂದರೆ ‘ಧುರಂಧರ’ ಸಿನಿಮಾ ಬೆಂಗಳೂರಿನಲ್ಲಿ ಉತ್ತಮವಾದುದನ್ನು ಕಂಡಿತ್ತು, ಅದು ಸಹ ನಗರದ ಕೆಲವು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಲೇ ಇದೆ.
‘ಧುರಂಧರ’ ಸಿನಿಮಾದಲ್ಲಿ ರಣ್ವೀರ್ ಸಿಂಗ್, ಅಕ್ಷಯ್ ಖನ್ನ, ಅರ್ಜುನ್ ರಾಮ್ ಪಾಲ್, ಸಂಜಯ್ ದತ್, ಆರ್ ಮಾಧವನ್ ಇನ್ನೂ ನಟಿಸಿದ್ದಾರೆ. ಸಿನಿಮಾವನ್ನು ಆದಿತ್ಯ ಧರ್ ನಿರ್ದೇಶನ ಮಾಡಿದ್ದಾರೆ. ‘ಧುರಂಧರ್ 2’ ಸಿನಿಮಾದ ಘೋಷಣೆ ಮಾಡಲು ಸಾಧ್ಯವಿಲ್ಲ, ಸಿನಿಮಾ ಇದೇ ವರ್ಷ ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ