Headlines

ತುಮಕೂರು: ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

ತುಮಕೂರು: ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ


ತುಮಕೂರು, ಜನವರಿ 31: ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಚುರುಕಿನ ಕಾರ್ಯಾಚರಣೆ ಮುಂದುವರಿದಿದ್ದು, ತುಮಕೂರು (ತುಮಕೂರು) ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಚೇತನ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಒಂದು ಪ್ರಕರಣದಲ್ಲಿ ವಶಪಡಿಸಿಕೊಂಡ ಕಾರನ್ನು ವಾಪಸ್ ನೀಡುವ ನೆಪದಲ್ಲಿ ಪಿಎಸ್‌ಐ ಚೇತನ ಕುಮಾರ್ 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ. ಮೊದಲ ಹಂತವಾಗಿ 40 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ಅವರನ್ನು ಬಂಧಿಸಿದ್ದಾರೆ.

ಲಂಚ ಸ್ವೀಕರಿಸುತ್ತಿದ್ದ ಕ್ಷಣದಲ್ಲೇ ದಾಳಿ ನಡೆಸಿದ ಲೋಕಾಯುಕ್ತ ತಂಡ, ಪಿಎಸ್‌ಐ ವಿರುದ್ಧ ಪ್ರಕರಣ ದಾಖಲಿಸಿದ್ದು, ತನಿಖೆಯನ್ನು ಮುಂದುವರಿಸಿದೆ. ಸರ್ಕಾರಿ ಕಚೇರಿಯಲ್ಲೇ ಲಂಚ ಸ್ವೀಕಾರ ನಡೆದಿರುವುದು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರಿನ ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು ಕೂಡ ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಚೀಟಿ ವ್ಯವಹಾರ ಸಂಬಂಧಿತ ಪ್ರಕರಣದಲ್ಲಿ ವ್ಯಕ್ತಿಯನ್ನು ಕೇಸ್‌ನಲ್ಲಿ ಸಿಲುಕಿಸುವುದಾಗಿ ಬೆದರಿಸಿ ಒಟ್ಟು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅವರ ಆರೋಪ ಮೇಲಿದ್ದು, ಮೈಸೂರು ರಸ್ತೆಯ ಆರ್.ಆರ್.ಗ್ರೌಂಡ್ ಬಳಿ 4 ಲಕ್ಷ ರೂ. ಲಂಚ ಪಡೆಯುವಾಗ ಅವರನ್ನು ಬಂಧಿಸಲಾಯಿತು.

ಪೊಲೀಸ್ ಇಲಾಖೆಯಲ್ಲೇ ಹೆಚ್ಚುತ್ತಿರುವ ಭ್ರಷ್ಟಾಚಾರ

ಸತತವಾಗಿ ಪೊಲೀಸ್ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬೀಳುತ್ತಿರುವ ಘಟನೆಗಳು ಪೊಲೀಸ್ ಇಲಾಖೆ ಪಾರದರ್ಶಕತೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾರ್ವಜನಿಕರ ವಿಶ್ವಾಸ ಕಾಪಾಡಬೇಕಾದ ಅಧಿಕಾರಿಗಳು ಲಂಚದ ದಂಧೆಯಲ್ಲಿ ತೊಡಗಿರುವುದು ಆತಂಕಕಾರಿ ಬೆಳವಣಿಗೆ ಎಂಬ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ಲಂಚಾ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಬಿದ್ದ ಇನ್ಸ್ ಪೆಕ್ಟರ್!

ಲೋಕಾಯುಕ್ತ ತುಮಕೂರು ಗ್ರಾಮಾಂತರ ಪಿಎಸ್‌ಐ ಚೇತನ ಕುಮಾರ್ ವಿರುದ್ಧ ಕಾನೂನು ಕ್ರಮ ಮುಂದುವರಿಸಿದ್ದು, ತನಿಖೆ ಬಳಿಕ ಹೆಚ್ಚಿನ ಮಾಹಿತಿ ದೊರೆಯಲಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *