400 ಕೋಟಿ ದರೋಡೆ ಕೇಸ್‌ನಲ್ಲಿ ಬಿಗ್‌ ಟ್ವಿಸ್ಟ್; 35 ಕೋಟಿ ತೋರಿಸಲು ಮುಂದಾಯ್ತಾ SIT?

400 ಕೋಟಿ ದರೋಡೆ ಕೇಸ್‌ನಲ್ಲಿ ಬಿಗ್‌ ಟ್ವಿಸ್ಟ್; 35 ಕೋಟಿ ತೋರಿಸಲು ಮುಂದಾಯ್ತಾ SIT?



400 ಕೋಟಿ ದರೋಡೆ ಕೇಸ್‌ನಲ್ಲಿ ಬಿಗ್‌ ಟ್ವಿಸ್ಟ್; 35 ಕೋಟಿ ತೋರಿಸಲು ಮುಂದಾಯ್ತಾ SIT?
<p>400 ಕೋಟಿ ರೂಪಾಯಿ ದರೋಡೆ ಪ್ರಕರಣವು ರೋಚಕ ತಿರುವು ಪಡೆದುಕೊಂಡಿದೆ. ದೂರುದಾರ ಸಂದೀಪ್ ಪಾಟೀಲ್, ತನಿಖೆ ನಡೆಸುತ್ತಿರುವ ಎಸ್‌ಐಟಿ ವಿರುದ್ಧವೇ ಪ್ರಕರಣವನ್ನು ಮುಚ್ಚಿಹಾಕುವ ಆರೋಪ ಮಾಡಿದ್ದಾರೆ. ಈ ನಡುವೆ, ಹಣದ ಮಾಲೀಕ ಎನ್ನಲಾದ ಬಿಲ್ಡರ್ ಕಿಶೋರ್ ಶೇಠ್ ಪೊಲೀಸರಿಗೆ ಶರಣಾಗಿದ್ದಾರೆ.</p><img><p>ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂಪಾಯಿ ದರೋಡೆ ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ದೂರುದಾರ ಸಂದೀಪ್ ಪಾಟೀಲ್ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ವಿರುದ್ಧವೇ ಗಂಭೀರ ಆರೋಪವನ್ನು ಮಾಡಿದ್ದಾರೆ.</p><img><p>ಸಂದೀಪ್ ಪಾಟೀಲ್ ದೂರಿನ ಮೇರೆಗೆ ಮಹಾರಾಷ್ಟ್ರ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಇದೀಗ ಎಸ್ಐಟಿ 400 ಕೋಟಿ ದರೋಡೆ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯುತ್ನಿಸುತ್ತಿದೆಯಾ ಎಂಬ ಅನುಮಾನವನ್ನು ಸಂದೀಪ್ ಪಾಟೀಲ್ ಅವರ ಪೋಸ್ಟ್ ಮೂಡಿಸುತ್ತಿದೆ.</p><img><p>ಎಸ್‌ಐಟಿ ಪೊಲೀಸರು 400 ಕೋಟಿ ಬದಲಾಗಿ 35 ಕೋಟಿ ದರೋಡೆ ಎಂದು ತೋರಿಸಲು ಮುಂದಾಗಿದ್ದಾರೆ ಎಂದು ಸಂದೀಪ್ ಪಾಟೀಲ್ ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ. ಚೋರ್ಲಾ ಘಾಟ್‌ನಲ್ಲಿ ಮಾಯವಾದ ಎರಡು ಟ್ರಕ್‌ಗಳು ಎಲ್ಲಿವೆ ಎಂಬುದರ ಇದುವರೆಗೂ ತಿಳಿದು ಬಂದಿಲ್ಲ.</p><img><p>ಈ 400 ಕೋಟಿ ಹಣದ ಮಾಲೀಕ ಎನ್ನಲಾಗುತ್ತಿರುವ ಬಿಲ್ಡರ್ ಕಿಶೋರ್ (ಸಾವಳಾ) ಶೇಠ್ ಶನಿವಾರ ಸಂಜೆ ಎಸ್‌ಐಟಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಮಹಾರಾಷ್ಟ್ರದ ನಾಸಿಕ ತಾಲೂಕಿನ ಘೋಟಿ ಪೊಲೀಸ್ ಠಾಣೆಗೆ ಬಂದ ಕಿಶೋರ್‌ನನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.</p><p><strong>ಇದನ್ನೂ ಓದಿ: </strong><strong>ದೇಶದ ಅತಿದೊಡ್ಡ ದರೋಡೆ: ₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವಿಯಲ್ಲಿ ನಾಪತ್ತೆ!</strong></p><img><p>ಸದ್ಯ ಕಿಶೋರ್ ಸೇಠ್ ಸಾವಳಾ ಬಂಧನ ಹಿನ್ನೆಲೆ ಪ್ರಕರಣಕ್ಕೆ ಹೊಸ ತಿರುವು ಸಿಗುವ ಸಾಧ್ಯತೆಗಳಿವೆ. ಶನಿವಾರ ಸಂಜೆಯಿಂದಲೇ ಕಿಶೋರ್‌ನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. 400 ಕೋಟಿ ದರೋಡೆ ಪ್ರಕರಣ ಮೂರು ರಾಜ್ಯಗಳಿಗೆ ಸಂಬಂಧಿಸಿದ್ದು, ದೇಶದ ಅತಿದೊಡ್ಡ ದರೋಡೆ ಪ್ರಕರಣ ಎಂದು ಕರೆಯಲಾಗುತ್ತಿದೆ.</p><p><strong>ಇದನ್ನೂ ಓದಿ:</strong><strong> ₹400 ಕೋಟಿ ದರೋಡೆಗೆ ಚೋರ್ಲಾ ಘಾಟ್ ಆಯ್ಕೆ ಮಾಡಿಕೊಂಡಿದ್ಯಾಕೆ? 15-20 ಕಿಮೀ ನಡುವೆಯೇ ದಾಳಿ?</strong></p>



Source link

Leave a Reply

Your email address will not be published. Required fields are marked *