Headlines

ತಲುಪದ ಆಸ್ತಿ ತೆರಿಗೆ ಸಂಗ್ರಹದ ಗುರಿ; ಆಯುಕ್ತರ ಖಡಕ್ ಎಚ್ಚರಿಕೆ; ಎಷ್ಟಿದೆ ಬಾಕಿ ಮೊತ್ತ?

ತಲುಪದ ಆಸ್ತಿ ತೆರಿಗೆ ಸಂಗ್ರಹದ ಗುರಿ; ಆಯುಕ್ತರ ಖಡಕ್ ಎಚ್ಚರಿಕೆ; ಎಷ್ಟಿದೆ ಬಾಕಿ ಮೊತ್ತ?



ತಲುಪದ ಆಸ್ತಿ ತೆರಿಗೆ ಸಂಗ್ರಹದ ಗುರಿ; ಆಯುಕ್ತರ ಖಡಕ್ ಎಚ್ಚರಿಕೆ; ಎಷ್ಟಿದೆ ಬಾಕಿ ಮೊತ್ತ?
<p>ಬಿಬಿಎಂಪಿ ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹದ ಗುರಿ ತಲುಪದ ಹಿನ್ನೆಲೆಯಲ್ಲಿ, ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳ ಸಭೆ ನಡೆಸಿದರು. ರಸ್ತೆ ಅಗಲೀಕರಣಕ್ಕೆ ಜಾಗ ವಶ ಅನಾಥ ವಾಹನಗಳ ತೆರವಿಗೆ ಖಡಕ್ ಸೂಚನೆಗಳನ್ನು ನೀಡಿದ್ದಾರೆ.</p><img><p>ಜಿಬಿಎ ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 1,242 ಕೋಟಿ ರು. ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಇದ್ದರೂ, ಇದುವರೆಗೂ 640 ಕೋಟಿ ರು. ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ. ಬಾಕಿ ಇರುವ 602 ಕೋಟಿ ರು. ಸಂಗ್ರಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p><img><p>ಉತ್ತರ ಪಾಲಿಕೆ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಯಲಹಂಕದಲ್ಲಿ ಶನಿವಾರ ಸಭೆ ನಡೆಸಿದ ಪಾಲಿಕೆ ಆಯುಕ್ತ ಮಹೇಶ್ವರ್ ರಾವ್ ಅವರು, ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹದ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಗುರಿ ಸಾಧಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.</p><img><p>ಇನ್ನು ಪರಿತ್ಯಾಜ್ಯನಾ ಪತ್ರಗಳನ್ನು ನೀಡಲಾಗಿರುವ ಜಾಗಗಳನ್ನು ಪಾಲಿಕೆ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಬೇಕು. ವಶಪಡಿಸಿಕೊಳ್ಳದಿರುವ ಆಸ್ತಿ ವಿವರಗಳನ್ನು ಪಟ್ಟಿ ಮಾಡಿಕೊಳ್ಳಬೇಕು. ನಂತರ ಎಲ್ಲಾ ಜಾಗಗಳನ್ನು ಪಾಲಿಕೆ ವಶಕ್ಕೆ ಪಡೆದು ರಸ್ತೆ ಅಗಲೀಕರಣ ಸೇರಿದಂತೆ ಅಗತ್ಯ ಅಭಿವೃದ್ಧಿ ಕಾರ್ಯಗಳಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮಹೇಶ್ವರ್ ರಾವ್ ಸೂಚನೆ ನೀಡಿದರು.</p><p><strong>ಇದನ್ನೂ ಓದಿ: </strong><strong>Bengaluru: ಮಾಗಡಿ ರಸ್ತೆಯಲ್ಲಿರುವ ಟ್ರಸ್ಟ್‌ಗೆ ಸೇರಿದ 172 ಎಕರೆ ಸರ್ಕಾರದ ವಶಕ್ಕೆ</strong></p><img><p>ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದುಕೊಂಡಿರುವ ಕಟ್ಟಡ ನಿರ್ಮಾಣ ಸ್ಥಳಗಳಿಗೆ ಭೇಟಿ ನೀಡಿ, ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ನಕ್ಷೆ ಉಲ್ಲಂಘನೆ ಕಂಡುಬಂದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಕಟ್ಟಡ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಸಂಚಾರ ಪೊಲೀಸರ ಸಹಯೋಗದಲ್ಲಿ ಎಲ್ಲೆಂದರಲ್ಲೇ ನಿಲ್ಲಿಸಿರುವ ಅನಾಥ ವಾಹನಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಆಯುಕ್ತರು ನಿರ್ದೇಶನ ನೀಡಿದರು.</p><p><strong>ಇದನ್ನೂ ಓದಿ: </strong><strong>Union Budget 2026: ಬೆಂಗಳೂರು ಸೇರಿದಂತೆ ಏಳು ಹೈ ಸ್ಪೀಡ್‌ ರೈಲು ಕಾರಿಡಾರ್‌ ಯೋಜನೆ ಘೋಷಣೆ</strong></p>



Source link

Leave a Reply

Your email address will not be published. Required fields are marked *