Ajit Pawar Funeral: ಅಜಿತ್ ಪವಾರ್ ಅಂತ್ಯಕ್ರಿಯೆಯಲ್ಲೂ ಕಳ್ಳರ ಕೈಚಳಕ, 15 ಜನರ ಚಿನ್ನದ ಸರ ಕದ್ದ ಕಿಡಿಗೇಡಿಗಳು! | Gold Worth 30 Lakhs Stolen From Mourners At Ajit Pawar Funeral In Baramati Sat

Ajit Pawar Funeral: ಅಜಿತ್ ಪವಾರ್ ಅಂತ್ಯಕ್ರಿಯೆಯಲ್ಲೂ ಕಳ್ಳರ ಕೈಚಳಕ, 15 ಜನರ ಚಿನ್ನದ ಸರ ಕದ್ದ ಕಿಡಿಗೇಡಿಗಳು! | Gold Worth 30 Lakhs Stolen From Mourners At Ajit Pawar Funeral In Baramati Sat



Ajit Pawar Funeral: ಅಜಿತ್ ಪವಾರ್ ಅಂತ್ಯಕ್ರಿಯೆಯಲ್ಲೂ ಕಳ್ಳರ ಕೈಚಳಕ, 15 ಜನರ ಚಿನ್ನದ ಸರ ಕದ್ದ ಕಿಡಿಗೇಡಿಗಳು! | Gold Worth 30 Lakhs Stolen From Mourners At Ajit Pawar Funeral In Baramati Sat

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯ ವೇಳೆ ನಡೆದ ಜನಜಂಗುಳಿಯಲ್ಲಿ ಕಳ್ಳರು ಸುಮಾರು 15 ಜನರ ಚಿನ್ನದ ಸರಗಳನ್ನು ದೋಚಿದ್ದಾರೆ. ಬಿಗಿ ಪೊಲೀಸ್ ಭದ್ರತೆಯ ನಡುವೆಯೂ ನಡೆದ ಈ ಘಟನೆಯಲ್ಲಿ 25-30 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿದ್ದು, ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಮುಂಬೈ (ಫೆ.02): ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ದುಃಖತಪ್ತರಾಗಿ ಅಂತಿಮ ದರ್ಶನಕ್ಕೆ ಬಂದಿದ್ದ ಜನರನ್ನೇ ಗುರಿಯಾಗಿಸಿಕೊಂಡ ಕಳ್ಳರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದಾರೆ. ಅಂತಿಮ ಸಂಸ್ಕಾರದ ಜನಜಂಗುಳಿಯ ಲಾಭ ಪಡೆದ ಖದೀಮರು ಸುಮಾರು 15 ಜನರ ಚಿನ್ನದ ಸರಗಳನ್ನು ಕಿತ್ತೊಯ್ದಿದ್ದು, ಇದರ ಒಟ್ಟು ಮೌಲ್ಯ 25 ರಿಂದ 30 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಘಟನೆಯ ವಿವರ:

ಜನವರಿ 28ರಂದು ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಕಾಲಿಕ ನಿಧನರಾಗಿದ್ದ ಅಜಿತ್ ಪವಾರ್ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರವು ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಬೆಂಬಲಿಗರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಡೆದ ತಳ್ಳಾಟ-ನುಗ್ಗುಾಟದ ಲಾಭ ಪಡೆದ ಕಳ್ಳರು ಜನರ ಕುತ್ತಿಗೆಯಲ್ಲಿದ್ದ ಸರಗಳನ್ನು ಹರಿದು ಪರಾರಿಯಾಗಿದ್ದಾರೆ. ಅಂತ್ಯಕ್ರಿಯೆ ಮುಗಿದ ಬಳಿಕ ಜನರು ತಮ್ಮ ಸರಗಳು ನಾಪತ್ತೆಯಾಗಿರುವುದನ್ನು ಕಂಡು ಆತಂಕಕ್ಕೆ ಒಳಗಾದರು.

ಬಿಗಿ ಭದ್ರತೆಯ ನಡುವೆಯೂ ಕಳ್ಳತನ:

ಅತ್ಯಂತ ಆಶ್ಚರ್ಯದ ಸಂಗತಿಯೆಂದರೆ, ಅಂದು ಬಾರಾಮತಿ ನಗರದಾದ್ಯಂತ ಸುಮಾರು 8,000 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಅಷ್ಟೇ ಅಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ನಿತಿನ್ ಗಡ್ಕರಿ, ಶರದ್ ಪವಾರ್, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹಾಗೂ ಡಿಸಿಎಂ ಏಕನಾಥ್ ಶಿಂಧೆ ಸೇರಿದಂತೆ ದೇಶದ ಪ್ರಮುಖ ಗಣ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇಂತಹ ಹೈ-ಪ್ರೊಫೈಲ್ ಭದ್ರತಾ ವಲಯದಲ್ಲೂ ಕಳ್ಳರು ನುಗ್ಗಿ ಕೈಚಳಕ ತೋರಿಸಿರುವುದು ಪೊಲೀಸರ ಭದ್ರತಾ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ.

ಐವರ ಬಂಧನ, ತನಿಖೆ ಚುರುಕು:

ಸರ ಕಳೆದುಕೊಂಡ ಸಂತ್ರಸ್ತರ ದೂರಿನ ಮೇರೆಗೆ ಬಾರಾಮತಿ ತಾಲೂಕು ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದು, ಮೊಹಮ್ಮದ್ ಯೂನುಸ್, ರಾಜ್‌ಕುಮಾರ್ ಅಠಾವಳೆ, ಇಜಾಜ್ ಮಿರ್ವಾಲೆ, ಮೊಹಮ್ಮದ್ ಸಿರಾಜ್ ಮತ್ತು ಬಾಲು ಬೋತ್ರೆ ಎಂಬ ಐವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಈಗಾಗಲೇ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಕಳುವಾದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ರಾಷ್ಟ್ರಧ್ವಜದಲ್ಲಿ ಸುತ್ತಿದ ಪವಾರ್ ಅವರ ಪಾರ್ಥಿವ ಶರೀರಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿಯುತ್ತಿರುವಾಗ ನಡೆದ ಈ ಕಳ್ಳತನದ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.



Source link

Leave a Reply

Your email address will not be published. Required fields are marked *