Headlines

33 ವರ್ಷದ ಸಂಪಾದನೆ ಹೋಯ್ತು: 18 ಕೋಟಿ ರೂ. ಮೌಲ್ಯದ ಚಿನ್ನ ಕಳೆದುಕೊಂಡ ಬೆಂಗಳೂರಿನ ಬಿಲ್ಡರ್​​ನ ಕಣ್ಣೀರಿನ ಕಥೆ

33 ವರ್ಷದ ಸಂಪಾದನೆ ಹೋಯ್ತು: 18 ಕೋಟಿ ರೂ. ಮೌಲ್ಯದ ಚಿನ್ನ ಕಳೆದುಕೊಂಡ ಬೆಂಗಳೂರಿನ ಬಿಲ್ಡರ್​​ನ ಕಣ್ಣೀರಿನ ಕಥೆ


ಚಿನ್ನ ಕಳೆದುಕೊಂಡ ಉದ್ಯಮಿ ಶಿವಕುಮಾರ್

ಬೆಂಗಳೂರು, (ಫೆಬ್ರವರಿ 02): ಮಾರತ್ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಉದ್ಯಮಿ ಶಿವಕುಮಾರ್ ಎಂಬುವರು ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮತ್ತು ಮನೆಗೆಲಸ ನಡೆಸುತ್ತಿರುವ ನೇಪಾಳಿ ದಂಪತಿಯೇ ದೋಚಿಕೊಂಡು ಹೋಗಿದ್ದಾರೆ ಎಂದು ಪೊಲೀಸರ ತನಿಖೆಗೆ ತಿಳಿದುಬಂದಿದ್ದು, ಈ ಸಂಬಂಧ ಪೊಲೀಸರು, ನೇಪಾಳಿ ದಂಪತಿ ಬಂಧನಕ್ಕೆ ಬಲೆ ಬೀಸಿದ್ದಾರೆ. ಇನ್ನು ತಮ್ಮ 33 ವರ್ಷದ ಸಂಪಾದನೆಯನ್ನು ದೋಚಿದ್ದಾರೆ ಎಂದು ಉದ್ಯಮಿ ಕಣ್ಣೀರಿಟ್ಟಿದ್ದಾರೆ. ಕಳವಾದ ಚಿನ್ನ ನಾನು ಹೇಗಾದರೂ ಮತ್ತೆ ಸಂಪಾದನೆ ಮಾಡುತ್ತೇನೆ. ಆದರೆ, ನನ್ನ ತಾಯಿಯ ಕಿವಿಯೋಲೆ ಮತ್ತು ಸರ ಕಳವಾಗುವಂತೆ ಕಂಡುಬಂದಿದೆ ಎಂದು ಅಳಲು ತೋಡಿದ್ದಾಳೆ.

ಕಳವಾದ ಚಿನ್ನ ನೆನೆದು ಬಿಲ್ಡರ್ ಕಣ್ಣೀರು

33 ವರ್ಷದ ನನ್ನ ಸಂಪಾದನೆಯನ್ನ ಕಳ್ಳತನ ಮಾಡಿದ್ದಾರೆ. 1988 ಸೆಪ್ಟೆಂಬರ್ 12 ರಂದು ನನ್ನ ಜೀವನದಲ್ಲಿ ದೊಡ್ಡ ದುರಂತವಾಗಿತ್ತು. ಹೆಮ್ಮಲೂರು ಬಳಿ ನಾವು ವಾಸವಿದ್ದ ಮನೆ ಮಳೆಯಿಂದ ಕುಸಿತವಾಗಿತ್ತು. ಮನೆ ಕುಸಿದ ನನ್ನ ಕುಟುಂಬ ಐದು ಜನ ಮೃತಪಟ್ಟಿದ್ರು. ಮನೆಯಿಲ್ಲದೆ ಕೋಳಿ ಫಾರ್ಮ್ ನಲ್ಲಿ ಮಲಗಿಕೊಂಡಿದ್ವಿ. 1989 ಮೇ 31ಕ್ಕೆ ಮಾಲಿನ ಅವ್ರನ್ನ ನಾನು ಮದುವೆ ಆದೆ. ಆಗ ನನ್ನ ಬಳಿ ಊಟಕ್ಕೂ ದುಡ್ಡಿಲ್ಲದ ಪರಿಸ್ಥಿತಿ. ಆದ್ರೂ ಮಾಲಿನಿ ಅವರ ತಂದೆ ನನಗೆ ಮಗಳನ್ನ ಮದುವೆ ಮಾಡಿ ಕೊಟ್ರು. ಮದುವೆಯಾದ ಮರುದಿನವೇ ಸಾಲಕೊಟ್ಟವರು ಮನೆ ಬಳಿಗೆ ಬಂದಿದ್ರು. ಆಗ ನನ್ನ ಪತ್ನಿ ಬಳಿಯಿದ್ದ ಚಿನ್ನ ಅಡವಿಟ್ಟು ಸಾಲ ತೀರಿಸಿದ್ದಳು.ಆಗ ನನ್ನ ತಾಯಿ 15 ದಿನವಾದ್ರೂ ನಾವು ಸ್ವಂತ ಮನೆಯಲ್ಲಿ ಇರ್ಬೆಕು ಮಗ ಅಂದಿದ್ರು. ನಂತರ ನಾನು ಬಡವರಿಗೆ ಕಂತಿನ ರೂಪದಲ್ಲಿ ಮನೆ ಜಾಗ ನೀಡುವ ಕೆಲಸ ಮಾಡಿದ್ದೆ. ಈಗ ಸಾವಿರಾರು ಜನ ಬಡವರು ಸ್ವಂತ ಮನೆಯಲ್ಲಿ ಜೀವನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ನೇಪಾಳಿ ದಂಪತಿಗೆ ಬಲೆ ಬೀಸಿದ ಪೊಲೀಸರು!

ಕಳವಾದ ಚಿನ್ನ ನಾನು ಹೇಗಾದ್ರೂ ಮತ್ತೆ ಸಂಪಾದನೆ ಮಾಡುತ್ತೇನೆ. ಆದರೆ ನನ್ನ ತಾಯಿಯ ಕಿವಿಯೋಲೆ ಮತ್ತು ಸರ ಕಳವಾಗಲು ಸಾಧ್ಯವಾಗಿದೆ.ನನ್ನ ಮಕ್ಕಳ ಮತ್ತು ಪತ್ನಿಯ ಎಲ್ಲಾ ಚಿನ್ನವನ್ನ ಕಳ್ಳತನ ಮಾಡಿದ್ದಾರೆ. ನಮ್ಮ ಮನೆಯ ಹಿಂದೆ ನೇಪಾಳಿ ಕುಟುಂಬ ಕೆಲಸ ಮಾಡುತ್ತಿತ್ತು. ಹೊಸ ಮನೆ ಗೃಹ ಪ್ರವೇಶ ವೇಳೆ ಎಲ್ಲರನ್ನು ಅವರು ಗಮನಿಸಿದ್ದಾರೆ. ಮನೆಯ ಲಾಕರ್ ಮತ್ತು ಬಳಿಯಿರುವ ಚಿನ್ನದ ಬಗ್ಗೆ ನೋಡಿದ್ದಾರೆ. ನಂತರ ನಾವು ಕೆಲಸ ಬಿಡುತ್ತೇವೆ ಎಂದು ನನ್ನ ಬಳಿ ಹೇಳಿದ್ದರು.ಆಗ ಬೇರೆ ಯಾರನ್ನಾದ್ರೂ ಸೇರಿಸಿ ಹೋಗು ಅಂತ ಹೇಳಿದ್ದೆ. ಆಗ ದಿನೇಶ್ ಮತ್ತು ಕಮಲಾಳನ್ನ ಕರೆತಂದು ಬಿಟ್ಟಿದ್ದ. ಇವರೆಲ್ಲ ಮೊದಲೇ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ನನಗೆ ಗೊತ್ತಾಗಲಿಲ್ಲ ಎಂದು ನೆನೆದು ಬೇಸರ ಹೊರಹಾಕಿದ್ದಾರೆ.

ದಂಪತಿ ದರೋಡೆ ಪ್ಲ್ಯಾನ್ ಬಿಚ್ಚಿಟ್ಟ ಉದ್ಯಮಿ

ನಾನು ದಿನೇಶ್ ಮತ್ತು ಕಮಲಾಳ ಆಧಾರ್ ಕಾರ್ಡ್ ಕೊಡಲು ಹೇಳಿದ್ದೆ. ಒಂದು ತಿಂಗಳು ಬಿಟ್ಟು ಕೊಡುತ್ತೇವೆ ಎಂದು ಹೇಳಿದ್ದರು. 20 ದಿನ ನಮ್ಮ ಮನೆಯಲ್ಲಿ ಹೇಳಿದ ಕೆಲಸ ಮಾಡಿಕೊಂಡಿದ್ದರು. ನಾನು ಸ್ನೇಹಿತರ ಜೊತೆ ಫಾರಿನ್ ಟ್ರಿಪ್ ಹೋದಾಗ ಇವರು ಪ್ಲಾನ್ ಮಾಡಿದ್ದರು. ಬೇರೆಡೆಯಿಂದ ನಾಲ್ಕು ಜನರನ್ನ ಮನೆಗೆ ಕರೆಸಿಕೊಂಡು ನಮ್ಮ ಮನೆಕೆಲಸದವಳನ್ನು ಕಮಲಾ ಬೇಕಂತಲೆ ಅಂಗಡಿಗೆ ಕರೆದೊಯ್ದಿದೆ. ಆಗ 35 ನಿಮಿಷದಲ್ಲಿ ಲಾಕ್ ಒಡೆದು ಚಿನ್ನ ಕಳ್ಳತನ ಮಾಡಿದ್ದಾರೆ. ಮನೆಕೆಲಸದವಳನ್ನು ಅಂಗಡಿಯಲ್ಲೇ ಬಿಟ್ಟು ಕಮಲಾ ಹೋಗಿದ್ದಳು. ಬಿಲ್ ಕೊಡಲು ಹಣವಿಲ್ಲದೆ ಆಕೆ ಅಲ್ಲಿಂದ ನಡೆದು ಮನೆಗೆ ಬಂದಾಗ ಕಳ್ಳತನ ಗೊತ್ತಾಗಿತ್ತು. ನಂತರ ನನಗೆ ಕರೆ ಮಾಡಿ ಕಳ್ಳತನ ಆಗಿರೋ ಬಗ್ಗೆ ಹೇಳಿದ್ದಳು ಎಂದು ಘಟನೆಯ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಕಳವಾದ ಎಲ್ಲಾ ಚಿನ್ನಕ್ಕೂ ಬಿಲ್ ಇದೆ


ಕಳ್ಳತನ ಸುದ್ದಿ ತಿಳಿಯುತ್ತಿದ್ದಂತೆಯೇ ನಾನು ಸಿಟಿ ಡಿಸಿಪಿ ನಾರಾಯಣ ಅವರಿಗೆ ಕರೆ ಮಾಡಿ ತಿಳಿಸಿದ್ದೆ. ಅವರು ಕೂಡಲೇ ವೈಟ್ ಫಿಲ್ಡ್ ಡಿಸಿಪಿ ಎಸ್ಸಿಪಿಯವರಿಗೆ ತಿಳಿಸಿದ್ದರು. ಪೊಲೀಸರು ಮೂರು ಗಂಟೆಗೆ ಮನೆಗೆ ಬಂದು ತನಿಖೆ ನಡೆಸಿದರು. ನನಗೆ ಪೊಲೀಸರ ಮೇಲೆ ಸಂಪೂರ್ಣ ನಂಬಿಕೆ ಇದೆ. ಆದಷ್ಟು ಬೇಗ ಕಳ್ಳರನ್ನ ಪತ್ತೆ ಮಾಡುತ್ತಾರೆ. ಕಳವಾದ ಎಲ್ಲಾ ಚಿನ್ನಕ್ಕೂ ನಮ್ಮ ಬಳಿ ಬಿಲ್ ಇದೆ. ಒಂದಷ್ಟು ಅಮ್ಮನ ಕಾಲದ ಚಿನ್ನಾಭರಣ ಇದೆ. ಹಾಗೇ ಎಲ್ಲದಕ್ಕೂ ನಾನು ಟ್ಯಾಕ್ಸ್ ಕಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *