
ವಿಜಯಪುರ ಜಿಲ್ಲೆಯ ಸಿಂದಗಿ, ಆಲಮೇಲ ಹಾಗೂ ದೇವರಹಿಪ್ಪರಗಿ ತಾಲೂಕುಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆ ವಿದ್ಯಾರ್ಥಿಗಳು ಸಂಪೂರ್ಣ ಗಮನವನ್ನು ಓದಿಗೆ ಕೇಂದ್ರೀಕರಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಈ ಮೂರು ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ, ಬಿಇಒ ಮಹಾಂತೇಶ ಯಡ್ರಾವಿ ಅವರು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಡಂಗೂರ ಸಾರುವ ಮೂಲಕ ಪೋಷಕರಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದ್ದು, “ಯಾರ ಮನೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿದ್ದಾರೋ, ಅವರು ಸಾಯಂಕಾಲ 7ರಿಂದ 9ರವರೆಗೆ ಟಿವಿ ಹಾಗೂ ಮೊಬೈಲ್ ಬಳಕೆ ಮಾಡದೇ ಮಕ್ಕಳಿಗೆ ಓದಲು ಸಹಕರಿಸಬೇಕು” ಎಂಬ ಸಂದೇಶವನ್ನು ಸಾರಲಾಗುತ್ತಿದೆ.