ಬಳ್ಳಾರಿಯ ಆಂಜನೇಯ ದೇಗುಲದಲ್ಲಿ ಮಾಂಸದ ಚೀಲ ಪತ್ತೆ, ನಾಯಿಗಳ ತಂದುಹಾಕಿದ್ದೋ? ಶಾಂತಿ ಕದಡುವ ಸಂಚೋ?

ಬಳ್ಳಾರಿಯ ಆಂಜನೇಯ ದೇಗುಲದಲ್ಲಿ ಮಾಂಸದ ಚೀಲ ಪತ್ತೆ, ನಾಯಿಗಳ ತಂದುಹಾಕಿದ್ದೋ? ಶಾಂತಿ ಕದಡುವ ಸಂಚೋ?



ಬಳ್ಳಾರಿಯ ಆಂಜನೇಯ ದೇಗುಲದಲ್ಲಿ ಮಾಂಸದ ಚೀಲ ಪತ್ತೆ, ನಾಯಿಗಳ ತಂದುಹಾಕಿದ್ದೋ? ಶಾಂತಿ ಕದಡುವ ಸಂಚೋ?
<p>ಬಳ್ಳಾರಿಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಆಘಾತಕಾರಿ ಘಟನೆಯೊಂದು ನಡೆದಿದ್ದು, ನಗರದ ಆಂಜನೇಯ ದೇಗುಲದ ಆವರಣದಲ್ಲಿ ಮಾಂಸದ ಚೀಲ ಪತ್ತೆಯಾಗಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಶಾಕಿಂಗ್ ವರದಿ ಇಲ್ಲಿದೆ.</p><img><p>ದೇವಸ್ಥಾನದ ಆವರಣದಲ್ಲಿ ಮಾಂಸ ಪತ್ತೆ!</p><p>ಬಳ್ಳಾರಿಯ ನಾಗಲಕೇರಿ ಪ್ರದೇಶದಲ್ಲಿರುವ ಸುಪ್ರಸಿದ್ಧ ಆಂಜನೇಯ ದೇವಸ್ಥಾನದ ಆವರಣದಲ್ಲಿ ಇಂದು ಬೆಳಿಗ್ಗೆ ಮಾಂಸದ ಚೀಲವೊಂದು ಪತ್ತೆಯಾಗಿದೆ. ಆಂಜನೇಯ ದೇಗುಲದ ಹಿಂಭಾಗದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಮುಂದಿನ ಗರುಡಗಂಬದ ಬಳಿ ಕಿಡಿಗೇಡಿಗಳು ಪ್ಲಾಸ್ಟಿಕ್ ಕವರ್‌ನಲ್ಲಿ ಮಾಂಸವನ್ನು ತಂದು ಎಸೆದಿದ್ದಾರೆ. ದೇವಸ್ಥಾನದ ಪವಿತ್ರ ಸ್ಥಳದಲ್ಲೇ ಇಂತಹ ನೀಚ ಕೃತ್ಯ ನಡೆದಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.</p><img><p>ಬೆಳಿಗ್ಗೆ ಎಂದಿನಂತೆ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ಆಗಮಿಸಿದ ಅರ್ಚಕರು, ಗರುಡಗಂಬದ ಬಳಿ ಬಿದ್ದಿದ್ದ ಪ್ಲಾಸ್ಟಿಕ್ ಚೀಲವನ್ನು ಕಂಡು ಹೌಹಾರಿದ್ದಾರೆ. ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ಅದರಲ್ಲಿ ಮಾಂಸವಿರುವುದು ಪತ್ತೆಯಾಗಿದೆ. ತಕ್ಷಣವೇ ಎಚ್ಚೆತ್ತ ಅರ್ಚಕರು ಸ್ಥಳೀಯ ನಿವಾಸಿಗಳಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮಾಂಸದ ಚೀಲವನ್ನು ತೆರವುಗೊಳಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.</p><img><p>ಇದು ಉದ್ದೇಶಪೂರ್ವಕವಾಗಿ ಕಿಡಿಗೇಡಿಗಳು ಮಾಡಿದ ಕೃತ್ಯವೋ ಅಥವಾ ನಾಯಿಗಳು ಎಲ್ಲೋ ಇದ್ದ ಮಾಂಸದ ಚೀಲವನ್ನು ತಂದು ಇಲ್ಲಿ ಎಸೆದಿವೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದೇವಸ್ಥಾನದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದ್ದು, ಶಾಂತಿ ಕದಡುವ ಪ್ರಯತ್ನ ನಡೆದಿದೆಯೇ ಎಂಬ ಆಯಾಮದಲ್ಲೂ ವಿಚಾರಣೆ ನಡೆಸಲಾಗುತ್ತಿದೆ.</p>



Source link

Leave a Reply

Your email address will not be published. Required fields are marked *