ಡ್ರಗ್ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ಫೇಲ್; ಅಧಿಕಾರಿ, ಸಿಬ್ಬಂದಿಗೆ ಬಿಗ್ ಶಾಕ್ ಕೊಟ್ಟ ಮೈಸೂರು ಕಮಿಷನರ್ !
ಮೈಸೂರು, ಫೆಬ್ರವರಿ 06: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚೆಗೆ ಡ್ರಗ್ ತಯಾರಿಕೆ (ಮೈಸೂರು ಡ್ರಗ್ ಲ್ಯಾಬ್ ಭರಾಟೆ) ಮತ್ತು ಮಾರಾಟದ ಜಾಲ ಹೆಚ್ಚುತ್ತಿದೆ. ಆದರೆ ನಗರದ ಸಿಸಿಬಿ ಮಾತ್ರ ಮಾದಕ ವಸ್ತು ಹಾವಳಿ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಪೊಲೀಸರು ಈ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಮೈಸೂರು ಸಿಸಿಬಿ ಪೊಲೀಸ್ ವಿಂಗ್ಗೆ ಮೇಜರ್ ಸರ್ಜರಿ.
ಒಂದೇ ಬಾರಿಗೆ 10 ಸಿಬ್ಬಂದಿಯ ವರ್ಗಾವಣೆ
ಇತ್ತೀಚೆಗಷ್ಟೇ ನಗರದ ಹೆಬ್ಬಾಳದಲ್ಲಿ ಫಿನಾಯಿಲ್ ಫ್ಯಾಕ್ಟರಿಯ ಸೋಗಿನಲ್ಲಿ ನಡೆಸುತ್ತಿದ್ದ ಡ್ರಗ್ಸ್ ತಯಾರಕ ಘಟಕವನ್ನು ದೆಹಲಿಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಭೇದಿಸಿತ್ತು. ಯಾವುದೇ ಮಾದಕ ವಸ್ತು ಸಿಕ್ಕಿಲ್ಲವೆಂಬ ಸುದ್ದಿ ಹರಿದಾಡಿದರೂ, ಎನ್ಸಿಬಿ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ ನಂತರ ಡ್ರಗ್ಸ್ ಇರುವುದನ್ನು ಖಚಿತಪಡಿಸಿತ್ತು. ಈ ಪ್ರಕರಣ ಸಿಬಿಯ ನಿರ್ಲಕ್ಷ್ಯವನ್ನು ತೋರಿಸಿದ್ದು, ಇದರಿಂದ ಮುಖಬಂಗವಾದ ಒಂದೇ ಬಾರಿ ಪೊಲೀಸ್ ಕಮಿಷನರ್ ಲಾಟ್ಕರ್, ಸಿಸಿಬಿಯ ಸುಮಾರು 10 ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.
ಸೂಕ್ತ ಕ್ರಮ ಕೈಗೊಂಡ ಅಧಿಕಾರಿಗಳು
ಸಾಕಷ್ಟು ವರ್ಷಗಳಿಂದ ಸಿಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನ್ ಟೇಬಲ್ ಮತ್ತು ಹೆಡ್ ಕಾನ್ ಟೇಬಲ್ ಗಳನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಮೂಲ ಠಾಣೆಗಳಿಗೆ ಕಳುಹಿಸುವಂತೆ ಆದೇಶ ಹೊರಡಿಸಲಾಗಿದೆ. ಈ ಅಧಿಕಾರಿಗಳು ಮಾದಕ ವಸ್ತು ಮಾರಾಟ ಮತ್ತು ಪೂರೈಕೆ ಜಾಲವನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ, ಡ್ರಗ್ ಮಾರಾಟಗಾರರ ಕುರಿತಾಗಿ ಲಭ್ಯವಾಗುವಂತೆ ಸುಳಿವುಗಳ ಮೇಲೂ ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಸಿಸಿಬಿಯನ್ನು ಇನ್ನಷ್ಟು ಕಾರ್ಯಗತಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ. ಔಷಧ ಜಾಲ ಸಂಪೂರ್ಣ ನಿರ್ಮೂಲನೆಗೆ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಜರುಗಲಿದೆ.
ಇದನ್ನೂ ಓದಿ ಮೈಸೂರಿನಲ್ಲಿ ಡ್ರಗ್ಸ್ ಲ್ಯಾಬ್ ಶಂಕೆ? ಎನ್ಸಿಬಿ ದಿಧೀರ್ ದಾಳಿ
ನಗರದ ಕೆಫೆ ಬಳಿ ಡ್ರಗ್ಸ್ ಮಾರುತ್ತಿದ್ದ ಮೂವರ ಬಂಧನ
ಮೈಸೂರು ನಗರ ಸಿಸಿಬಿ ಪೊಲೀಸರು ನಿನ್ನೆ (ಫೆ.05) ನಡೆಸಿದ ಕಾರ್ಯಾಚರಣೆಯಲ್ಲಿ ಸಾತಗಳ್ಳಿಯ ಮೂನ್ ಬಕ್ಸ್ ಕೆಫೆ ಬಳಿ ಮೂವರು ಮಾದಕ ದ್ರವ್ಯ ಮಾರಾಟಗಾರರನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಮೀರ್ ಖಾನ್, ಸೈಯದ್ ಇಮ್ರಾನ್ ಹಾಗೂ ಮಹಮ್ಮದ್ ನಬೀಲ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 1,20,000 ರೂ ಮೌಲ್ಯದ 11 ಗ್ರಾಂ 90 ಮಿಲಿಗ್ರಾಂ ಎಂ.ಡಿ.ಎಂ.ಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.