ಬೆಂಗಳೂರು, ಫೆ.10: ಬೆಂಗಳೂರಿಗರಿಗೆ ಕೇಂದ್ರ ಸರ್ಕಾರ ಹೊಸ ಸಿಹಿ ಸುದ್ದಿ ನೀಡಿದೆ. ಈ ಬಗ್ಗೆ ದೆಹಲಿಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ. ಇಷ್ಟು ದಿನ ಆದಾಯ ತೆರಿಗೆ ನಿಯಮಗಳ ಪ್ರಕಾರ, ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ನಗರಗಳು ಮಾತ್ರ ‘ಮೆಟ್ರೋ ನಗರಗಳು’ ಎಂದು ಪರಿಗಣಿಸಿ. 50ರಷ್ಟು HRA (ಮನೆ ಬಾಡಿಗೆ ಭತ್ಯೆ) ವಿನಾಯಿತಿ ನೀಡಲಾಗುವುದು. ಬೆಂಗಳೂರು ವಿಶ್ವಮಟ್ಟದ ನಗರವಾಗಿದ್ದರೂ ತಾಂತ್ರಿಕವಾಗಿ ಇದನ್ನು ‘ಬಾಕಿ ನಗರಗಳ’ ಪಟ್ಟಿಯಲ್ಲಿ ಇರಿಸಲಾಗಿದೆ, ಹೀಗಾಗಿ ಇಲ್ಲಿಯವರಿಗೆ ಕೇವಲ ಶೇ. 40ರಷ್ಟು ಮಾತ್ರ ವಿನಾಯಿತಿ ಸಿಗುತ್ತದೆ. ಆದರೆ ಇದೀಗ ಬೆಂಗಳೂರನ್ನು ಮೆಟ್ರೋ ನಗರಗಳಲ್ಲಿ ಸೇರಿಸಲಾಗಿದೆ. ಈ ಮೂಲಕ ಶೇ. 50ರಷ್ಟು HRA (ಮನೆ ಬಾಡಿಗೆ ಭತ್ಯೆ) ವಿನಾಯಿತಿ ನೀಡುವುದಿಲ್ಲ.
ಸಂಸದ ತೇಜಸ್ವಿ ಸೂರ್ಯ ಅವರು ಎರಡು ವರ್ಷಗಳ ಹಿಂದೆ ಸಂಸತ್ತಿನಲ್ಲಿ ಮತ್ತು ಹಣಕಾಸು ಸಚಿವರ ಬಳಿ ಬೆಂಗಳೂರಿನ ಜೀವನ ವೆಚ್ಚ (ಜೀವನ ವೆಚ್ಚ) ದೆಹಲಿ-ಮುಂಬೈಗೆ ಸಮಾನವಾಗಿದೆ, ಆದ್ದರಿಂದ ಬೆಂಗಳೂರನ್ನು ಮೆಟ್ರೋ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು. ಆ ಬೇಡಿಕೆ ಈಗಿದೆ. ಈ ಮೂಲಕ ಬೆಂಗಳೂರಿಗೆ ಮೆಟ್ರೋ ನಗರಗಳಲ್ಲಿ ಸೇರುವ ಭಾಗ್ಯ ಸಿಕ್ಕಿದೆ.
ಇದನ್ನೂ ಓದಿ: GBA ಗುರುತಿಸಿದ ಕೇಂದ್ರಗಳಲ್ಲಿ ಮಾತ್ರ ಬೀದಿ ನಾಯಿಗಳಿಗೆ ಆಹಾರ ಹಾಕಬೇಕು: ಉಲ್ಲಂಘಿಸಿದರೆ ದಂಡ
ಇದರಿಂದ ಆಗುವ ನೇರ ಲಾಭವೇನು?
ಹೆಚ್ಚುವರಿ ತೆರಿಗೆ ಉಳಿತಾಯ: ಈಗ ನಿಮ್ಮ ಮೂಲ ವೇತನದ ಶೇ. 50ರಷ್ಟು ಮೊತ್ತವನ್ನು HRA ವಿನಾಯಿತಿಯಾಗಿ ಪಡೆಯಬಹುದು. ಇದುವರೆಗೆ ಇದು ಶೇ. 40 ರಷ್ಟಿತ್ತು.
ವೇತನದಾರರಿಗೆ ನೆರವು: ಸಾಫ್ಟ್ವೇರ್ ಉದ್ಯೋಗಿಗಳು ಸೇರಿದಂತೆ ಖಾಸಗಿ ಮತ್ತು ಸರ್ಕಾರಿ ವಲಯದ ಲಕ್ಷಾಂತರ ಉದ್ಯೋಗಿಗಳ ಕೈಗೆ ಸಿಗುವ ವೇತನ ಹೆಚ್ಚಾಗಲಿದೆ.
ತೆರಿಗೆ ಹೊರೆ ಇಳಿಕೆ: ಒಟ್ಟು ತೆರಿಗೆ ವಿಧಿಸಬಹುದಾದ ಆದಾಯದಲ್ಲಿ (ತೆರಿಗೆಗೆ ಒಳಪಡುವ ಆದಾಯ) ಹೆಚ್ಚಿನ ಕಡಿತಕ್ಕೆ ಅವಕಾಶ ಸಿಗುವುದರಿಂದ ತೆರಿಗೆ ಪಾವತಿ ಕಡಿಮೆಯಾಗಲಿದೆ.
ಯಾವ ಆರ್ಥಿಕ ವರ್ಷದಿಂದ ಅನ್ವಯಿಸುತ್ತದೆ?
ಸಂಸದ ತೇಜಸ್ವಿ ಸೂರ್ಯ ಅವರು ಪ್ರಸ್ತಾಪಿಸಿರುವ ಈ ಹೊಸ ಡ್ರಾಫ್ಟ್ ನಿಯಮವು, ಕೇಂದ್ರ ಸರ್ಕಾರದ ಮುಂದಿನ ಅಧಿಸೂಚನೆಯ ಪ್ರಕಾರ ಆರ್ಥಿಕ ವರ್ಷ 2026-27 ರಿಂದ ಜಾರಿಗೆ ಬರುವ ಸಾಧ್ಯತೆಯಿದೆ. ಒಂದು ವೇಳೆ ಸರ್ಕಾರವು ಇದನ್ನು ಪೂರ್ವಾನ್ವಯವಾಗಿ ಜಾರಿಗೊಳಿಸಿದರೆ, ಪ್ರಸಕ್ತ ವರ್ಷದ ತೆರಿಗೆ ರಿಟರ್ನ್ಸ್ನಲ್ಲೂ ಲಾಭ ಸಿಗುವ ಸಾಧ್ಯತೆ ಇರುತ್ತದೆ.
ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ