ಅನಂತ್ ಕುಮಾರ್ ಹೆಗಡೆ ಮತ್ತು ಯತ್ನಾಳ್ಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ
ಉಡುಪಿ, ಫೆಬ್ರವರಿ 13: ಕಳೆದ ಲೋಕಸಭಾ ಚುನಾವಣೆ ಸಮಯದಿಂದಲೇ ರಾಜಕಾರಣದಿಂದ ದೂರ ಉಳಿದಿರುವ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ರಾಜ್ಯ ರಾಜಕಾರಣಕ್ಕೆ ಬರುತ್ತಾರೆಂಬ ಸುದ್ದಿ ಕಳೆದ ಕೆಲ ದಿನಗಳಿಂದ ಹರಿದಾಡ್ತಿದೆ. ಹಿಂದೂ ಪಾಲಿಗೆ ಫೈರ್ ಬ್ರ್ಯಾಂಡ್ ರಾಜಕಾರಣಿ ಎಂದು ಗುರುತಿಸಿಕೊಂಡಿರುವ ಅನಂತ್ ಕುಮಾರ್ ಮತ್ತೆ ರಾಜಕಾರಣಕ್ಕೆ ಬರಲಿ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ. ಈ ಹೊತ್ತಿನಲ್ಲಿ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಯತ್ನಾಳ್ ಹೇಳಿದ್ದೇನು?
ರಾಜ್ಯ ರಾಜಕಾರಣಕ್ಕೆ ಬರುವ ವಿಚಾರ ಸಂಬಂಧ ಅನಂತ್ ಕುಮಾರ್ ಹೆಗಡೆ ವೈಯಕ್ತಿಕವಾಗಿ ಎಲ್ಲೂ ಪ್ರತಿಕ್ರಿಯೆ ಕೊಟ್ಟಿಲ್ಲ. ಸಾಮಾಜಿಕ ಜಾಲತಾಣದಲ್ಲಿ ದೆಹಲಿಗೆ ಬುಲಾವ್ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಆ ಬಗ್ಗೆ ಯಾವುದೇ ದೃಢೀಕರಣವಿಲ್ಲ. ಹೀಗಾಗಿ ರಾಜ್ಯ ರಾಜಕಾರಣಕ್ಕೆ ಬರಲು ಅವರಿಗೆ ಮನಸ್ಸಿದೆಯೋ? ಇಲ್ಲವೋ? ಅವರು ತಿಳಿದಿರಬೇಕು. ಬಿಜೆಪಿಯಲ್ಲಿ ಒಳ್ಳೆಯ ನಾಯಕತ್ವವನ್ನು ಮುಗಿಸುತ್ತಾರೆ. ತಂದೆ ಮಕ್ಕಳ ಸಹವಾಸದಿಂದ ಆಗಿದ್ದು, ಇಂತವರಿಗೆ ಎಂದು ಕೇಂದ್ರ ಸರ್ಕಾರ ನಿರ್ಧರಿಸಬೇಕು ನಾಯಕ.
ಇದನ್ನೂ ಓದಿ: ರಾಹುಲ್ ಗಾಂಧಿ ಕೈಯಲ್ಲಿ ಡಿ.ಕೆ.ಶಿವಕುಮಾರ್ ಭವಿಷ್ಯ? ಸಿಎಂ ಗಾದಿಗೆ ಇನ್ನೊಂದೇ ಮೆಟ್ಟಿಲು?
ವಿಧಾನಸಭೆಯಲ್ಲಿ ಕೂಡ ಬಿಜೆಪಿಗರು ಮಾತನಾಡದೆ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ವಿಜಯೇಂದ್ರ ನಿನ್ನ ಫೈಲ್ ತೆಗೆಯಲಾ ಎಂದು ಡಿ.ಕೆ ಶಿವಕುಮಾರ್ ನೇರವಾಗಿ ಬೆದರಿಸುತ್ತಾರೆ. ಬಿಜೆಪಿ ತನ್ನ ನೈತಿಕ ಶಕ್ತಿಯನ್ನೇ ವಿಧಾನಸಭೆಯಲ್ಲಿ ಕಳೆದುಕೊಂಡಿದೆ. ಹೀಗಿದ್ದರೂ ಕೇಂದ್ರದ ನಾಯಕರಿಗೆ ಯಾಕೆ ವಿಶೇಷ ಮಮಕಾರ ಇದೆಯೋ ಗೊತ್ತಿಲ್ಲ. ಕುಟುಂಬ ರಾಜಕೀಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ಪದೇ ಪದೇ ಹೇಳುತ್ತಾರೆ. ಆದರೆ ಕರ್ನಾಟಕದಲ್ಲಿ ಆ ವಿಚಾರ ಮರೆತು ಹೋಗಿರುವುದು ದುರ್ದೈವ ಎಂದು ಯತ್ನಾಳ್ ಕಿಡಿ ಕಾರಿದ್ದಾರೆ.
ರಾಜಕೀಯದಿಂದ ಕಾಯ್ದುಕೊಂಡಿರುವ ಹೆಗಡೆ
ಒಮ್ಮೆ ಕೇಂದ್ರ ಸಚಿವ ಮತ್ತು ಬರೋಬ್ಬರಿ 6 ಬಾರಿ ಸಂಸದರಾದ ಅನಂತ ಕುಮಾರ ಹೆಗಡೆ ಅವರು 2024 ರ ಲೋಕಸಭೆ ಚುನಾವಣೆ ಸಂದರ್ಭದಿಂದಲೇ ರಾಜಕೀಯದಿಂದ ಬಹಳ ಅಂತರ ಕಾಯ್ದುಕೊಂಡಿದ್ದಾರೆ. ತಮ್ಮ ಉದ್ಯಮದಲ್ಲಿ ಬ್ಯುಸಿ ಆಗಿರುವ ಅವರು, ಎಲ್ಲಿಯೂ ರಾಜಕೀಯ ಸಂಬಂಧಿತ ಹೇಳಿಕೆಗಳನ್ನು ನೀಡುತ್ತಿಲ್ಲ. ಅವರ ಅಭಿಮಾನಿಗಳು ತೀವ್ರ ನಿರಾಸೆಗೆ ಒಳಗಾಗಿದ್ದಾರೆ. ಈ ನಡುವೆ ರಾಜಕೀಯಕ್ಕೆ ಬರುವಂತೆ ಅವರಿಗೆ ಹೈಕಮಾಂಡ್ ಕರೆ ಬಂದಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಸುದ್ದಿಯಾಗಿರೋದೀಗ ಹತ್ತು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.