ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ: ಮಲೆಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ: ಮಲೆಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ


ಚಾಮರಾಜನಗರ, ಫೆಬ್ರವರಿ 14: ಶಿವರಾತ್ರಿಗೆ ಇನ್ನೊಂದೇ ದಿನ ಬಾಕಿ ಇರುವಾಗ ಮಲೆಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಮತ್ತೆ ಚಿರತೆ ಆತಂಕ ಎದುರಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರಬೆಟ್ಟದ ತಾಳುಬೆಟ್ಟದ 4ನೇ ತಿರುವಿನ ರಸ್ತೆಯಲ್ಲಿ ಯಾತ್ರಿಕರಿಗೆ ಚಿರತೆ ಕಾಣಿಸಿಕೊಂಡಿದೆ. ರಸ್ತೆಯಲ್ಲೇ ಚಿರತೆ ಕಾಣಿಸಿದ ಕಾರಣ ಮಾದಪ್ಪನ ಭಕ್ತರಲ್ಲಿ ಆತಂಕ ಸೃಷ್ಟಿಯಾಗಿದೆ. ವಾಹನಗಳು ಓಡುತ್ತಿದ್ದರೂ ಕ್ಯಾರೇ ಎನ್ನದೆ ಕುಳಿತಿರುವ ಚಿರತೆಯ ದೃಶ್ಯ ವಾಹನ ಸವಾರರೊಬ್ಬರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಿವರಾತ್ರಿ ಹಬ್ಬ ಹಿನ್ನೆಲೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸುತ್ತಿರುವ ಸಂದರ್ಭದಲ್ಲೇ ಚಿರತೆ ಕಾಣಿಸಿ ಆತಂಕ ಉಂಟಾಗುವಂತೆ ಮಾಡಿದೆ. ಇತ್ತೀಚೆಗಷ್ಟೇ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತನೊಬ್ಬನನ್ನು ಚಿರತೆ ಹೊತ್ತೊಯ್ದಿತ್ತು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *