ಸಿಎಂ ಸಿದ್ದರಾಮಯ್ಯ, ಆರ್ ಅಶೋಕ್ಚಿತ್ರ ಕ್ರೆಡಿಟ್ ಮೂಲ: ಡೆಕ್ಕನ್ಹೆರಾಲ್ಡ್
ಬೆಂಗಳೂರು, ಫೆಬ್ರವರಿ 14: ರಾಜ್ಯ ಕಾಂಗ್ರೆಸ್ (ಕಾಂಗ್ರೆಸ್) ಸರ್ಕಾರ ಒಂದು ಸಾವಿರ ದಿನ ಪೂರೈಸಿದ ಸಂಭ್ರಮದಲ್ಲಿದೆ. ಸರ್ಕಾರದ ಘಟಾನುಘಟಿಗಳು ಇಂದು ಹಾವೇರಿಯಲ್ಲಿ ಅಬ್ಬರಿಸಿದರು. ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದ ಹೆಸರಿನಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಗಿದೆ. ಈ ಮಧ್ಯೆ ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ರಾಮಯ್ಯನವರ ಕುಟುಂಬಸ್ಥರಿಗೆ ಬಿಲ್ ಎಂಬ ಸುದ್ದಿ ಹರಿದಾಡುತ್ತಿದೆ. ಇದು ನಿಜವೇ ಆದರೆ, ಕಾಂಗ್ರೆಸ್ ಸರ್ಕಾರದಂತಹ ಲಜ್ಜೆಗೇಡಿ ಸರ್ಕಾರ ಮತ್ತೊಂದಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ (ಆರ್ ಅಶೋಕ) ವಾಗ್ದಾಳಿ ಮಾಡಿದ್ದಾರೆ.
ದಿವಂಗತ ರಾಮಯ್ಯನವರ ಕುಟುಂಬಕ್ಕೆ ಬಿಲ್?
ಈ ಬಗ್ಗೆ ಟ್ವೀಟ್ ಮಾಡಿರುವ ಆರ್. ಅಶೋಕ್, ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತರು, ಮಾಜಿ ಮಾಜಿ ಸದಸ್ಯರಾದ ಶ್ರೀ ರಾಮಯ್ಯನವರ ಸಕಲ ಸಂಸ್ಕಾರದ ವಿಧಾನವಾಗಿದೆ ಎಂದು ಘೋಷಿಸಿದರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್, ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚವನ್ನು ದಿವಂಗತ ಸರ್ಕಾರಕ್ಕೆ ಪಾವತಿಸಿದ ಘಟನೆ ನಾಡಿನ ಹಿರಿಯ ಪತ್ರಕರ್ತರಿಗೆ ನೀಡಿರುವ ಅಪಮಾನದ ಜೊತೆಗೆ ರಾಜ್ಯ ಕಾಂಗ್ರೆಸ್ ಮಟ್ಟಕ್ಕೆ ಎಷ್ಟು ದಿನ ಕಿತ್ತಾಡುತ್ತಿದೆ.
ಆರ್ ಅಶೋಕ್ ಟ್ವೀಟ್
ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶ್ರೀ ರಾಮಯ್ಯನವರ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಘೋಷಿಸಿರುವುದಾಗಿ ಘೋಷಿಸಿದರು. @ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚವನ್ನು ಪಾವತಿಸುವಂತೆ ದಿವಂಗತ ರಾಮಯ್ಯನವರ ಕುಟುಂಬಕ್ಕೆ ಬಿಲ್… pic.twitter.com/IbXCVuPZzb
– ಆರ್. ಅಶೋಕ (@RAshokaBJP) ಫೆಬ್ರವರಿ 14, 2026
ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೇ, ಶ್ರೀ ರಾಮಯ್ಯನವರ ಅಂತ್ಯಸಂಸ್ಕಾರದ ವೇಳೆ ಗಣ್ಯ ವ್ಯಕ್ತಿಗಳ ಭೇಟಿಗೆ ಸಿದ್ಧತೆಗಳು, ಬ್ಯಾರಿಕೇಡ್ ಅಳವಡಿಕೆ, ಭದ್ರತಾ ವ್ಯವಸ್ಥೆ ಮತ್ತು ಇತರ ಲಾಜಿಸ್ಟಿಕ್ ಸಿದ್ಧತೆಗಳಿಗೆ ಹಣ ಪಡೆಯಲು ನಿಮ್ಮ ಪೊಲೀಸ್ ಇಲಾಖೆ ವ್ಯಾಪಾರಿಗಳ ಮೂಲಕ ರಾಮಯ್ಯನವರ ಕುಟುಂಬಸ್ಥರಿಗೆ ಬಿಲ್ ನೀಡಿದ ಸುದ್ದಿ ಹರಿದಾಡುತ್ತಿದೆ. ಇದು ನಿಜವೇ ಆದರೆ, ನಿಮ್ಮ ಕಾಂಗ್ರೆಸ್ ಸರ್ಕಾರದಂತಹ ಲಜ್ಜೆಗೇಡಿ ಸರ್ಕಾರ ಮತ್ತೊಂದಿಲ್ಲ.
ಸಾವಿನಲ್ಲೂ ಕಾಸು ಕೇಳುವ ನೀಚತನಕ್ಕೆ ಇಳಿದಿದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ
ಬಿಜೆಪಿ ಕೂಡ ಟ್ವೀಟ್ ಮಾಡಿದ್ದು, ಸಾವಿರ ದಿನದ ಕಾಂಗ್ರೆಸ್ ಸರ್ಕಾರ ಸಾವಿನಲ್ಲೂ ಕಾಸು ಕೇಳುವ ನೀಚತನಕ್ಕೆ ಇಳಿದಿದೆ. ಹಿರಿಯ ಪತ್ರಕರ್ತ, ವಿಧಾನ ಪರಿಷತ್ ಮಾಜಿ ಸದಸ್ಯ ಪಿ.ರಾಮಯ್ಯನವರ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಿ ಬರುಡೆ ಬಿಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ ಇದೀಗ ಹಿಂಬಾಗಿಲಿನಿಂದ ಅವರ ಕುಟುಂಬಸ್ಥರಿಗೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿರುವುದಕ್ಕೆ ಪೊಲೀಸ್ ಇಲಾಖೆ ಬಿಲ್ ಕಳುಹಿಸಿದೆ.
ಇದನ್ನೂ ಓದಿ: ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರದಿಂದ ಭ್ರಷ್ಟಾಚಾರದ ಸಾಧನೆಯ ಸಮಾವೇಶ; ಬಸವರಾಜ ಬೊಮ್ಮಾಯಿ ವ್ಯಂಗ್ಯ
ಮಿಸ್ಟರ್ ಗೊತ್ತಿಲ್ಲ ಹೋಮ್ ಮಿನಿಸ್ಟರ್ ಡಾ. ಜಿ ಪರಮೇಶ್ವರ್ ಅವರೇ, ಇದು ನಿಮಗೆ ಗೊತ್ತಿಲ್ಲವೇ? ಅಥವಾ ನಿಮ್ಮ ಸರ್ಕಾರ ಸಾವಿರದ ದಿನಕ್ಕೆ ಇಷ್ಟೊಂದು ಪಾಪರ್ ಆಗಿದೆಯೇ? ಎಂದು ಕಿಡಿಕಾರಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.