ಗದಗ, ಫೆಬ್ರವರಿ 15: ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದಂದು ಅಹಿತಕರ ಘಟನೆ ನಡೆದಿದೆ. ತುಂಗಭದ್ರಾ ನದಿ ದಡದಲ್ಲಿರುವ ಐತಿಹಾಸಿಕ ರಾಮಲಿಂಗೇಶ್ವರ ದೇವಾಲಯದಲ್ಲಿ, ಅದರ ಪಾಣಿಪೀಠ ಮತ್ತು ನಂದಿ ವಿಗ್ರಹವನ್ನು ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ. ಅಹೋರಾತ್ರಿ ಘಟನೆ ನಡೆದಿದೆ. ದೇಶಾದ್ಯಂತ ಶಿವರಾತ್ರಿಯನ್ನು ಭಕ್ತಿ ಭಾವದಿಂದ ಆಚರಿಸುತ್ತಿರುವಾಗ ಈ ರೀತಿಯ ಘಟನೆ ನಡೆದಿರುವುದು ಭಕ್ತರಲ್ಲಿ ತೀವ್ರ ನೋವುಂಟು ಮಾಡಿದೆ. ಸದ್ಯ ಆಕ್ರೋಶ ವ್ಯಕ್ತಪಡಿಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸದಿದ್ದರೆ ಡಿಸಿ ಬಳಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.