Headlines

ಪಾಕ್ ನಾಯಕನಿಗೆ ಶೇಕ್ ಹ್ಯಾಂಡ್ ಕೊಡದ ಸೂರ್ಯಕುಮಾರ್ ಯಾದವ್! ಕಾರಣವೇನು ಗೊತ್ತಾ?

ಪಾಕ್ ನಾಯಕನಿಗೆ ಶೇಕ್ ಹ್ಯಾಂಡ್ ಕೊಡದ ಸೂರ್ಯಕುಮಾರ್ ಯಾದವ್! ಕಾರಣವೇನು ಗೊತ್ತಾ?



ಪಾಕ್ ನಾಯಕನಿಗೆ ಶೇಕ್ ಹ್ಯಾಂಡ್ ಕೊಡದ ಸೂರ್ಯಕುಮಾರ್ ಯಾದವ್! ಕಾರಣವೇನು ಗೊತ್ತಾ?
<p>ಟಿ20 ವಿಶ್ವಕಪ್ 2026ರ ಪಾಕಿಸ್ತಾನ ವಿರುದ್ಧದ ಪಂದ್ಯದ ವೇಳೆ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಶೇಕ್ ಹ್ಯಾಂಡ್ ನೀಡಲು ನಿರಾಕರಿಸಿದ್ದಾರೆ. ಸೂರ್ಯಕುಮಾರ್ ಯಾದವ್ ಹೀಗೆ ಮಾಡಿದ್ದೇಕೆ ಎನ್ನುವುದನ್ನು ನೋಡೋಣ ಬನ್ನಿ.</p><img><p>ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಟಿ20 ವಿಶ್ವಕಪ್ 2026 ಪಂದ್ಯದಲ್ಲಿ ಒಂದು ಕುತೂಹಲಕಾರಿ ಘಟನೆ ನಡೆಯಿತು. ಟಾಸ್ ಗೆದ್ದ ಪಾಕ್ ನಾಯಕ ಸಲ್ಮಾನ್ ಅಲಿ ಆಘಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಈ ವೇಳೆ ಭಾರತದ ನಾಯಕ ಸೂರ್ಯಕುಮಾರ್ ಯಾದವ್, ಶೇಕ್ ಹ್ಯಾಂಡ್ ನೀಡದೆ ದೂರ ಸರಿದರು. ಕಳೆದ ವರ್ಷದ ಏಷ್ಯಾಕಪ್ 2025 ರಿಂದ ಟೀಂ ಇಂಡಿಯಾ ಪಾಲಿಸುತ್ತಿರುವ ‘ನೋ ಶೇಕ್ ಹ್ಯಾಂಡ್’ ನೀತಿಯನ್ನು ಈ ಮೆಗಾ ಟೂರ್ನಿಯಲ್ಲೂ ಮುಂದುವರಿಸಿದೆ.</p><img><p>ಭಾರತ ತಂಡ ಪಾಕಿಸ್ತಾನದ ವಿರುದ್ಧ ಆಡುತ್ತಿದ್ದರೂ, ಮೈದಾನದಲ್ಲಿ ಯಾವುದೇ ಸೌಹಾರ್ದಯುತ ಹಸ್ತಲಾಘವ ಮಾಡದಿರಲು ನಿರ್ಧರಿಸಿದೆ. ಈ ವಿವಾದ 2025ರ ಏಷ್ಯಾಕಪ್ ಸಮಯದಲ್ಲಿ ಶುರುವಾಗಿತ್ತು. ಪಹಲ್ಗಾಮ್ ಉಗ್ರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಅಮಾಯಕ ನಾಗರಿಕರು ಮತ್ತು ಭಾರತೀಯ ಸೇನೆಗೆ ಗೌರವ ವ್ಯಕ್ತಪಡಿಸಲು ನಾಯಕ ಸೂರ್ಯಕುಮಾರ್ ಯಾದವ್ ಈ ನಿರ್ಧಾರವನ್ನು ಜಾರಿಗೆ ತಂದಿದ್ದರು. ಅಂದಿನಿಂದ ಪುರುಷರ, ಜೂನಿಯರ್ ಮತ್ತು ಮಹಿಳಾ ತಂಡಗಳು ಕೂಡ ಪಾಕ್ ಆಟಗಾರರೊಂದಿಗೆ ಹಸ್ತಲಾಘವ ಮಾಡುತ್ತಿಲ್ಲ.</p><img>ಪಹಲ್ಗಾಮ್ ಉಗ್ರ ದಾಳಿಯ ನಂತರ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಕೈಗೊಂಡಿತ್ತು. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಭಾವನಾತ್ಮಕ ವಾತಾವರಣ ನಿರ್ಮಾಣವಾಗಿತ್ತು. ಹುತಾತ್ಮರ ಕುಟುಂಬಗಳಿಗೆ ಗೌರವ ಸಲ್ಲಿಸಲು ಮತ್ತು ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವ ದೇಶದೊಂದಿಗೆ ಸೌಹಾರ್ದಯುತ ಸಂಜ್ಞೆಗಳನ್ನು ಮಾಡಬಾರದೆಂದು ಬಿಸಿಸಿಐ ಮತ್ತು ಭಾರತ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ. ಟಾಸ್ ವೇಳೆ ಇಬ್ಬರೂ ನಾಯಕರು ಒಬ್ಬರನ್ನೊಬ್ಬರು ನೋಡದಿರುವುದು ಗಮನಾರ್ಹ. ಪಂದ್ಯದ ನಂತರವೂ ಆಟಗಾರರು ಅಥವಾ ಸಹಾಯಕ ಸಿಬ್ಬಂದಿ ಯಾರೂ ಹ್ಯಾಂಡ್ ಶೇಕ್ ಮಾಡುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.<img><p>ಈ ಮಹತ್ವದ ಪಂದ್ಯಕ್ಕಾಗಿ ಭಾರತದ ಅಂತಿಮ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಗಾಯದಿಂದ ಚೇತರಿಸಿಕೊಂಡ ಅಭಿಷೇಕ್ ಶರ್ಮಾ ತಂಡಕ್ಕೆ ಮರಳಿದ್ದಾರೆ. ಸಂಜು ಸ್ಯಾಮ್ಸನ್ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಹಾಗೆಯೇ, ಪಿಚ್ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು, ಪೇಸರ್ ಅರ್ಶದೀಪ್ ಸಿಂಗ್ ಬದಲಿಗೆ ಸ್ಪಿನ್ ಮಾಂತ್ರಿಕ ಕುಲದೀಪ್ ಯಾದವ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಪಾಕಿಸ್ತಾನ ತಂಡದಲ್ಲಿ ಯಾವುದೇ ಬದಲಾವಣೆಗಳಿಲ್ಲದೆ ಕಣಕ್ಕಿಳಿಯುತ್ತಿದೆ.</p><img><p>ಸದ್ಯ ಗ್ರೂಪ್-ಎಯಲ್ಲಿ ಭಾರತ ಅಗ್ರಸ್ಥಾನದಲ್ಲಿದೆ. ಆಡಿದ ಎರಡು ಪಂದ್ಯಗಳಲ್ಲಿ (ಅಮೆರಿಕ ಮತ್ತು ನಮೀಬಿಯಾ ವಿರುದ್ಧ) ಗೆದ್ದು +3.050 ನೆಟ್ ರನ್ ರೇಟ್ ಹೊಂದಿದೆ. ಪಾಕಿಸ್ತಾನ ಕೂಡ ಎರಡು ಗೆಲುವುಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ವಿಶ್ವಕಪ್ ಇತಿಹಾಸದಲ್ಲಿ, ಇದುವರೆಗೆ ನಡೆದ 8 ಟಿ20 ವಿಶ್ವಕಪ್ ಪಂದ್ಯಗಳಲ್ಲಿ ಭಾರತ 7 ಬಾರಿ ಗೆದ್ದರೆ, ಪಾಕಿಸ್ತಾನ ಕೇವಲ ಒಂದು ಬಾರಿ ಮಾತ್ರ ಗೆದ್ದಿದೆ. ಒಟ್ಟು 16 ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಭಾರತ 13 ಬಾರಿ ಗೆದ್ದು ಸ್ಪಷ್ಟ ಪ್ರಾಬಲ್ಯ ಮೆರೆದಿದೆ.</p><h2>&nbsp;</h2><img><p>ಪಾಕಿಸ್ತಾನ ಎದುರಿನ ಮೊದಲ ಓವರ್‌ನಲ್ಲಿ ಅಭಿಷೇಕ್ ಶರ್ಮಾ ವಿಕೆಟ್ ಕಳೆದುಕೊಂಡ ಭಾರತಕ್ಕೆ ಇಶಾನ್ ಕಿಶನ್ ಆಸರೆಯಾಗಿದ್ದಾರೆ. ಇಶಾನ್ ಕಿಶನ್ ಸ್ಪೋಟಕ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 16 ಓವರ್ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 136 ರನ್ ಬಾರಿಸಿದ್ದು ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ.</p>



Source link

Leave a Reply

Your email address will not be published. Required fields are marked *