ಕುರ್ಚಿ ಗುದ್ದಾಟದ ನಡುವೆ ವಿದೇಶಕ್ಕೆ ಹಾರಲು ಕಾಂಗ್ರೆಸ್ ಶಾಸಕರು ಸಜ್ಜು (ಸಾಂದರ್ಭಿಕ ಚಿತ್ರ)ಚಿತ್ರದ ಕ್ರೆಡಿಟ್ ಮೂಲ: tv9
ಬೆಂಗಳೂರು, ಫೆಬ್ರವರಿ 16: ಕರ್ನಾಟಕ ರಾಜಕೀಯದಲ್ಲಿ, ವಿಶೇಷವಾಗಿ ಕಾಂಗ್ರೆಸ್ ನಲ್ಲಿ (ಕಾಂಗ್ರೆಸ್) ಅಧಿಕಾರ ಹಂಚಿಕೆ ಸಂಘರ್ಷ ತೀವ್ರವಾಗಿರುವ ನಡುವೆಯೇ, ಸಮಾನ ಮನಸ್ಕ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸಕ್ಕೆ ತೆರಳಲು ಸಜ್ಜಾಗಿದ್ದಾರೆ. ಮಂಗಳವಾರ ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಲು ತೀರ್ಮಾನಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಪ್ರವಾಸಕ್ಕೆ ಹೋಗುವವರಲ್ಲಿ ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (ಸಿದ್ದರಾಮಯ್ಯ) ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರೇ ಹೆಚ್ಚು ಸಂಖ್ಯೆಯಲ್ಲಿದ್ದಾರೆ.
ವೀಸಾ ಸಿಗದ ಕಾರಣ ಕೆಲ ಶಾಸಕರು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಇನ್ನೂ ಹಲವಾರು ಕಾರಣಗಳನ್ನು ನೀಡಿ ಈ ಪ್ರವಾಸದಿಂದ ದೂರ ಉಳಿದಿದ್ದಾರೆ. ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಬಹುದೆಂಬ ಆತಂಕವೂ ಕೆಲವರ ನಿರ್ಧಾರಕ್ಕೆ ಸರಿಯಾಗಿ ಎಂಬ ಮಾತುಗಳು ಕಾಂಗ್ರಸ್ ಆಂತರಿಕ ವಲಯದಲ್ಲಿ ಕೇಳಿಬರುತ್ತಿವೆ.
ಕೆಲ ಶಾಸಕರು ಹೋಗುವುದೋ ಬೇಡವೋ ಎಂಬ ಅಂತಿಮ ನಿರ್ಧಾರವನ್ನು ಇಂದು ಕೈಗೊಳ್ಳಲಾಗುವುದು, ಕುಟುಂಬ ಸಹಿತ ಟಿಕೆಟ್ ಬುಕ್ ಮಾಡಿರುವವರು ಪ್ರವಾಸ ರದ್ದುಪಡಿಸಲು ಹಿಂದೇಟು ಹಾಕುತ್ತಿದ್ದಾರೆ. ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಗುರಿಯಾಗಬೇಕಾಗಬಹುದು ಎಂಬ ಕಾರಣದಿಂದ ಅವರು ಪ್ರಯಾಣ ಮುಂದುವರಿಸಲು ಮನಸ್ಸು ಬಯಸಿದ್ದಾರೆ. ಮತ್ತೊಂದೆಡೆ, ಒಬ್ಬರೇ ಟಿಕೆಟ್ ಬುಕ್ ಮಾಡಿದ್ದರೂ ತಮ್ಮ ಪ್ರಯಾಣವನ್ನು ರದ್ದುಗೊಳಿಸಿದ್ದಾರೆ.
ಈ ಎಲ್ಲ ಗೊಂದಲಗಳ ನಡುವೆ ಮಂಗಳವಾರ ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಆಸ್ಟ್ರೇಲಿಯಾ ಕಡೆ ಶಾಸಕರ ಪ್ರಯಾಣ ನಿಗದಿಯಾಗಿದೆ. ಮಾರ್ಚ್ 1 ರಂದು ಅವರು ವಾಪಸ್ಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮತ್ತೊಂದೆಡೆ, ಕಾಂಗ್ರೆಸ್ ಕುರ್ಚಿ ಗುದ್ದಾಟ ತೀವ್ರಗೊಳ್ಳುವ ಸುಳಿವು ಗೋಚರಿಸಿದೆ. ಭಾನುವಾರವಷ್ಟೇ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಭಿನ್ನಾಭಿಪ್ರಾಯ ಬೇಡ. ಹೊಂದಾಣಿಕೆಯ ಮೂಲಕ ಮುಂದುವರಿದರೆ ಒಳ್ಳೆಯದು ಎಂದು ರಾಜ್ಯ ನಾಯಕರಿಗೆ ಕಿವಿ ಮಾತು ಹೇಳಿದ್ದಾರೆ. ಆದರೆ, ಪೂರ್ಣಾವಧಿ ಸಿದ್ದರಾಮಯ್ಯ ಅವರೇ ಸಿಎಂ ಎಂಬ ಎಂಎಲ್ಸಿ ಯತೀಂದ್ರ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್ ಬಣದ ಶಾಸಕರ ಕೌಂಟರ್ ಮುಂದುವರಿದಿದೆ. ಡಿಕೆಶಿ ಸಿಎಂ ಆಗಲೇಬೇಕು. ಅವರಿಗೆ ಯಾವಾಗ ಏನು ಮಾಡಬೇಕು ಎಂಬುದು ಚೆನ್ನಾಗಿಯೇ ಗೊತ್ತಿದೆ ಎಂದು ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಮಾತಿಗೂ ಡಾಂಟ್ ಕೇರ್: ‘ಕೈ’ ಮನೆಯಲ್ಲಿ ನಿಲ್ಲದ ಬಾಣಗಳ ವಾರ್
ಒಟ್ಟಿನಲ್ಲಿ ಕಾಂಗ್ರೆಸ್ ಕುರ್ಚಿ ಗುದ್ದಾಟ ಹಾಗೂ ಒಳರಾಜಕೀಯ ಗೊಂದಲಗಳು ತೀವ್ರವಾಗಿರುವ ಸಂದರ್ಭದಲ್ಲೇ ಶಾಸಕರು ವಿದೇಶ ಪ್ರವಾಸಕ್ಕೆ ಸಿದ್ಧರಾಗಿದ್ದಾರೆ. ಸದ್ಯದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆ ಎಂದು ಹೇಳಲಾಗುತ್ತಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ