
<p>ಚಿತ್ರದುರ್ಗದ ಭರಮಸಾಗರ ಗ್ರಾಮದ ಡಿವಿಎಸ್ ಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿ ಕೊಟ್ರೇಶ್, ಹಾಸ್ಟೆಲ್ ವಾರ್ಡನ್ ಕಿರುಕುಳದಿಂದ ನೊಂದು ಶಾಲಾ ಕಟ್ಟಡದ ಎರಡನೇ ಮಹಡಿಯಿಂದ ಜಿಗಿದು ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.</p><img><p>ಚಿತ್ರದುರ್ಗ ಭರಮಸಾಗರ ಗ್ರಾಮದ ಡಿವಿಎಸ್ ಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿ ಎರಡನೇ ಮಹಡಿಯಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾನೆ. ಕೊಟ್ರೇಶ್ (16) ಮೃತ ವಿದ್ಯಾರ್ಥಿ. ಇಂದು ಬೆಳಗ್ಗೆ ಘಟನೆ ನಡೆದಿದ್ದು, ವಿದ್ಯಾರ್ಥಿ ಕಟ್ಟಡದಿಂದ ಜಿಗಿಯುತ್ತಿರುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.</p><img><p>ಕರಿಯಮ್ಮನಹಳ್ಳಿಯ ಗುರುಲಿಂಗಯ್ಯ ಎಂಬವರ ಮಗ ಕೊಟ್ರೇಶ್, ಭ್ರಮಸಾಗರದ ಡಿವಿಎಸ್ ವಸತಿ ಶಾಲೆಯಲ್ಲಿ ಓದುತ್ತಿದ್ದನು. ಮಗನ ಸಾವಿಗೆ ಹಾಸ್ಟೆಲ್ ವಾರ್ಡನ್ ದೀಪಾ, ನಾಗರಾಜ್, ಪ್ರಿನ್ಸಿಪಾಲ್ ಸುಶ್ಮಿತಾ ಮತ್ತು ಆಡಳಿತ ಮಂಡಳಿಯೇ ಕಾರಣ ಎಂದು ಗುರುಲಿಂಗಯ್ಯ ಆರೋಪಿಸಿದ್ದಾರೆ. ಈ ಸಂಬಂಧ ಗುರುಲಿಂಗಯ್ಯ ಅವರು ಭರಮಸಾಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p><img><p>ಭಾನುವಾರವಷ್ಟೇ ಶಾಲೆಗೆ ಬಂದು ಮಗನನ್ನು ನೋಡಿಕೊಂಡು ಗುರುಲಿಂಗಯ್ಯ ಹೇಳಿದ್ದರು. ಹಾಸ್ಟೆಲ್ ವಾರ್ಡನ್ಗಳಾದ ದೀಪಾ ಮತ್ತು ನಾಗರಾಜ್ ತನಗೆ ಕಿರುಕುಳ ನೀಡುತ್ತಿರುವ ವಿಷಯವನ್ನು ತಂದೆಗೆ ಕೊಟ್ರೇಶ್ ಹೇಳಿಕೊಂಡಿದ್ದನು. ಗುರುಲಿಂಗಯ್ಯ ಅವರು ಈ ವಿಷಯವನ್ನು ಪ್ರಿನ್ಸಿಪಾಲ್ ಸುಶ್ಮಿತಾ ಗಮನಕ್ಕೆ ತಂದಿದ್ದರು.</p><img><p>ದೂರು ನೀಡಿದ ಬಳಿಕವೂ ವಾರ್ಡನ್ಗಳ ವಿರುದ್ಧ ಪ್ರಿನ್ಸಿಪಾಲ್ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಇದರಿಂದ ಮಗ ಮಾನಸಿಕವಾಗಿ ನೊಂದು ಪ್ರಾಣ ಕಳೆದುಕೊಂಡಿದ್ದಾನೆ. ಹಾಗಾಗಿ ಮೂವರು ಸಿಬ್ಬಂದಿ ಮತ್ತು ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಗುರುಲಿಂಗಯ್ಯ ಆಗ್ರಹಿಸಿದ್ದಾರೆ.</p><p><strong>ಇದನ್ನೂ ಓದಿ: </strong><strong>ಬೇಲೂರು To ಕುಣಿಗಲ್ To ಬಿಹಾರ: ರಿವೀಲ್ ಆಯ್ತು ಆಂಟಿ ಪ್ರಿಯಾಂಕಾ ಖತರ್ನಾಕ್ ಪ್ಲಾನ್</strong></p><img><p>ಕಟ್ಟಡದಿಂದ ಜಿಗಿದ ಕೊಟ್ರೇಶ್ ಸಾವು ಸ್ಥಳದಲ್ಲಿಯೇ ಸಂಭವಿಸಿದೆಯಾ ಅಥವಾ ಆಸ್ಪತ್ರೆಯಲ್ಲಿ ಆಯ್ತಾ ಎಂಬುದರ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಇತ್ತ ಡಿವಿಎಸ್ ಶಾಲೆ ಆಡಳಿತ ಮಂಡಳಿಯಿಂದ ಯಾವುದೇ ಹೇಳಿಕೆ ಬಂದಿಲ್ಲ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.</p><p><strong>ಇದನ್ನೂ ಓದಿ: </strong><strong>ಹಾಸನ ನಿವೇಶನ ಒತ್ತುವರಿ ಪ್ರಕರಣ: ಪುಷ್ಪಾ ಅರುಣ್ಕುಮಾರ್ಗೆ ಮೊದಲ ಹಂತದ ಗೆಲುವು</strong></p>
Source link
2ನೇ ಮಹಡಿಯಿಂದ ಜಿಗಿದ SSLC ವಿದ್ಯಾರ್ಥಿ; ನಿನ್ನೆಯೇ ಅಪ್ಪನಿಗೆ ವಿಷಯ ಹೇಳಿದ್ದ ಮಗ; ಸಿಸಿಟಿವಿಯಲ್ಲಿ ದೃಶ್ಯ ಸೆರೆ