ವಿಜಯನಗರ, (ಫೆಬ್ರವರಿ 16): ನಟಿ ರಚಿತಾ ರಾಮ್ ಅವರ ಕಾರು ಚಾಲಕ, ನಿರ್ಮಿತಿ ಕೇಂದ್ರದ ಯೋಜನೆಯ ನಿರ್ದೇಶಕರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆದಿದೆ. ಹಂಪಿ ಉತ್ಸವದ ಕೊನೆಯ ದಿನವಾದ ನಿನ್ನೆ (ಫೆಬ್ರವರಿ 15) ಭದ್ರತಾ ನೆಪದಲ್ಲಿ ರಚಿತಾ ರಾಮ್ ಕಾರು ಚಾಲಕ, ಜನರನ್ನು ದೂರ ಸರಿಸುತ್ತಿರುವಾಗ, ಇದೇ ವೇಳೆ ನಿರ್ಮಾಣ ಕೇಂದ್ರದ ಯೋಜನೆಯ ನಿರ್ದೇಶಕ ರವಿಕುಮಾರ್ ಅವರನ್ನು ಮೊಣಕೈಯಿಂದ ಜೋರಾಗಿ ತಿವಿದು ತಳ್ಳಿದ್ದಾರೆ. ಈ ಅಧಿಕಾರಿ ರವಿಕುಮಾರ್ ಕಣ್ಣಿಗೆ ಗಾಯವಾಗಿದ್ದು, ಘಟನೆಯ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.