Headlines

‘ನಿಮಗೆ ಡಿ ಬಾಸ್, ನನಗೆ ಮಗ; ಇನ್ನೆರಡು ತಿಂಗಳಲ್ಲಿ ಅವನು ಆಚೆ ಬರ್ತಾನೆ’; ರವಿಚಂದ್ರನ್

‘ನಿಮಗೆ ಡಿ ಬಾಸ್, ನನಗೆ ಮಗ; ಇನ್ನೆರಡು ತಿಂಗಳಲ್ಲಿ ಅವನು ಆಚೆ ಬರ್ತಾನೆ’; ರವಿಚಂದ್ರನ್


ನಟ ದರ್ಶನ್ (ದರ್ಶನ್) ಅವರು ಸದ್ಯ ಜೈಲಿನಲ್ಲಿದ್ದಾರೆ. ಅವರು ಯಾವಾಗ ಹೊರ ಬರುತ್ತಾರೆ ಎಂದು ಫ್ಯಾನ್ಸ್ ಕಾಯುತ್ತಾ ಕೂತಿದ್ದಾರೆ. ಜಾಮೀನು ಅರ್ಜಿ ನಮೂನೆಯಲ್ಲಿ ರಿಜೆಕ್ಟ್ ಆಗಿಲ್ಲ ಅವರು ಯಾವುದೇ ಜಾಮೀನು ಅರ್ಜಿ ಸಲ್ಲಿಸಲು ಇಲ್ಲ ಎನ್ನುತ್ತಿದ್ದಾರೆ. ಹೀಗಿರುವಾಗಲೇ ರವಿಚಂದ್ರನ್ ಕಡೆಯಿಂದ ಒಂದು ಗುಡ್ ನ್ಯೂಸ್ ಸಿಕ್ಕಿದೆ. ದರ್ಶನ್ ಹೊರ ಬರೋದು ಯಾವಾಗ ಎಂಬ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ದರ್ಶನ್ ಹಾಗೂ ರವಿಚಂದ್ರನ್ ಮಧ್ಯೆ ಒಳ್ಳೆಯ ಬಾಧವ್ಯ ಇದೆ. 2023ರ ‘ಕ್ರಾಂತಿ’ ಸಿನಿಮಾದಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದಾರೆ. ದರ್ಶನ್ ಅವರಿಗೂ ರವಿಚಂದ್ರನ್ ಎಂದರೆ ಎಲ್ಲಿಲ್ಲದ ಗೌರವ. ಈಗ ರವಿಚಂದ್ರನ್ ಅವರು ಒಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ದರ್ಶನ್ ಹೊರ ಬರೋದು ಯಾವಾಗ ಎಂಬ ಬಗ್ಗೆ ಹಿಂಟ್ ಕೊಟ್ಟಿದ್ದಾರೆ.

ಒಂದರಲ್ಲಿ ರವಿಚಂದ್ರನ್ ಕಾರ್ಯಕ್ರಮ. ಈ ವೇಳೆ ಸಿನಿಮಾ ಡೈಲಾಗ್ ಹೇಳುವಂತೆ ಅವರ ಬಳಿ ಕೋರಲಾಗಿದೆ. ಆದರೆ, ಅಲ್ಲಿದ್ದ ಅಭಿಮಾನಿಗಳು ಡಿಬಾಸ್ ಎಂದು ಕೂಗಿದ್ದಾರೆ. ಆಗ ರವಿಚಂದ್ರನ್ ಅವರು , ‘ಡಿಬಾಸ್ ಎರಡು ತಿಂಗಳಲ್ಲಿ ಆಚೆ ಬರುತ್ತಾರಂತೆ. ಈ ಬಾಯಲ್ಲಿ ಹೇಳಿದೀನಿ ಬರ್ತಾರೆ. ನಿಮಗೆಲ್ಲ ಅವನು ಡಿ ಬಾಸ್, ನನಗೆ ಮಗ, ನೆನಪಿಟ್ಟುಕೊಳ್ಳಿ. ಇದೆಲ್ಲ ಕೆಟ್ಟ ಘಳಿಗೆ ಅಷ್ಟೇ. ಕೆಟ್ಟ ಘಳಿಗೆ ಮನುಷ್ಯನ್ನ ಕುಗ್ಗಿಸುತ್ತದೆ. ಅದೇ ಸಮಯ ಒಂದಲ್ಲ ಒಂದು ದಿನ ಮೇಲಕ್ಕೆ ಎತ್ತಲೇಬೇಕು. ಅವರನ್ನು ಎದೆಯಲ್ಲೇ ಇಟ್ಟು ಪೂಜಿಸಿ’ ಎಂದರು. ಇದೆ ವೇಳೆ ‘ಎಲ್ಲದಕ್ಕೂ ಕಾಯಬೇಕು’ ಎನ್ನುವ ಮಾತನ್ನು ಹೇಳಿದರು.

ದರ್ಶನ್ ಅವರ ಜಾಮೀನು ಪತ್ರದಲ್ಲಿ ರಿಜೆಕ್ಟ್ ಆಗಿದೆ. ಹೀಗಾಗಿ, ಅವರಿಗೆ ಸದ್ಯಕ್ಕೆ ಜಾಮೀನು ಸಿಗೋದು ಅನುಮಾನವೇ ಎಂದೆಲ್ಲ ಮಾತನಾಡಿಕೊಳ್ಳುತ್ತಿದ್ದಾರೆ. ಹೀಗಿರುವಾಗ ರವಿಚಂದ್ರನ್ ಅವರು ಪಾಸಿಟಿವ್ ಆಗಿ ಮಾತನಾಡಿದ್ದು, ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

ಇದನ್ನೂ ಓದಿ: ಪವಿತ್ರಾಗೆ ದೊಡ್ಡ ನಿರಾಸೆ; ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ

ಪವಿತ್ರಾ ಗೌಡ ಅವರು ಮಗಳಿಗೆ ಪರೀಕ್ಷೆ ಸಮಯ ಎಂದು 21 ದಿನಗಳ ಮಧ್ಯಂತರ ಜಾಮೀನು ಕೋರಿದ್ದರು. ಆದರೆ, ಇದನ್ನು ಕೋರ್ಟ್ ನಿರಾಕರಿಸಿದೆ. ದರ್ಶನ್ ಅರ್ಜಿ ಸಲ್ಲಿಸಿದರೂ ತೊಂದರೆ ಎದುರಾಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *