ಶ್ರೀಮಂತ ಹುಡುಗರೇ ಈಕೆಯ ಟಾರ್ಗೆಟ್! ಪ್ರೀತಿಯ ನಾಟಕವಾಡಿ ಈಕೆ ಮಾಡಿದ್ದು ಏನು ಗೊತ್ತಾ?
ಧಾರವಾಡ, ಫೆಬ್ರುವರಿ 17: ಪ್ರೀತಿ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಧಾರವಾಡ (ಧಾರವಾಡ) ಉಪನಗರ ಪೊಲೀಸ್ ಠಾಣಾ ಸಂಭವಿಸಿದೆ. ಹಣವಿರುವ ಯುವಕರನ್ನೇ ಟಾರ್ಗೆಟ್ ಮಾಡಿ ಹಣ ಪಡೆದು ವಂಚಿಸುತ್ತಿದ್ದವಳ ವಿರುದ್ಧ ರೊಚ್ಚಿಗೆದ್ದ ಯುವಕನೊಬ್ಬನ ಕುಟುಂಬಸ್ಥರು ನಡುರಸ್ತೆಯಲ್ಲೇ ಆಕೆಗೆ ಧರ್ಮದೇಟು ನೀಡಿದ್ದಾರೆ.
ಐಶ್ವರ್ಯ, ರೇಣುಕಾ, ಆರೋಹಿ ಎಂಬ ಮೂರು ವಿಭಿನ್ನ ಹೆಸರಿನ ಯುವಕರನ್ನು ಪರಿಚಯಿಸಿದ ಯುವತಿ, ಆರ್ಥಿಕವಾಗಿ ಸಹಾಯ ಮಾಡುವ ಯುವಕರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಸಂಜು ದೊಡಮನಿ ಹಾಗೂ ಗುರು ವಕ್ಕುಂದ ಸೇರಿದಂತೆ ಮೂವರು ಯುವಕರಿಗೆ ಮದುವೆಯ ಭರವಸೆ ಹಣ ನೀಡಿದ್ದಾರೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ.
ಇದನ್ನೂ ಓದಿ ಗರ್ಲ್ ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ
ಗುರು ವಕ್ಕುಂದ ಎನ್ನುವವರಿಂದ 7 ಲಕ್ಷ ರೂ. ಹಣ ಸೇರಿದೆ ಎನ್ನಲಾಗ್ತಿದೆ, ಬಳಿಕ ಮದುವೆಗೆ ನಿರಾಕರಿಸಲಾಗಿದೆ ಮನನೊಂದು ಗುರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸಧ್ಯಕ್ಕೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಗುರುನ ಆರೋಗ್ಯ ವಿಚಾರಿಸಲು ಬಂದಿದ್ದ ಐಶ್ವರ್ಯಳನ್ನು ಆತನ ಕುಟುಂಬಸ್ಥರು ಲಾಕ್ ಮಾಡಿ, ಹಣ ಮರಳಿ ಪಡೆದಿದ್ದಾರೆ ಅಥವಾ ಮದುವೆಯಾಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ವೇಳೆ ಜಿಲ್ಲಾಸ್ಪತ್ರೆಯಲ್ಲಿ ಹೈಡ್ರಾಮಾ ನಡೆದಿದ್ದು, ಯುವತಿ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಳು. ಆದರೆ ಕುಟುಂಬಸ್ಥರು ಬೆನ್ನತ್ತಿ ಹಿಡಿದಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.