ಉದ್ಯಮಿ ಸಿ.ಜೆ.ರಾಯ್ ಕೇಸ್; ಕಾರಣ ಮಾತ್ರ ಇನ್ನೂ ನಿಗೂಢ: ಹಿರಿಯ ಅಧಿಕಾರಿಗಳು ಹೇಳಿದ್ದೇನು?

ಉದ್ಯಮಿ ಸಿ.ಜೆ.ರಾಯ್ ಕೇಸ್; ಕಾರಣ ಮಾತ್ರ ಇನ್ನೂ ನಿಗೂಢ: ಹಿರಿಯ ಅಧಿಕಾರಿಗಳು ಹೇಳಿದ್ದೇನು?



ಉದ್ಯಮಿ ಸಿ.ಜೆ.ರಾಯ್ ಕೇಸ್; ಕಾರಣ ಮಾತ್ರ ಇನ್ನೂ ನಿಗೂಢ: ಹಿರಿಯ ಅಧಿಕಾರಿಗಳು ಹೇಳಿದ್ದೇನು?
<p>ಉದ್ಯಮಿ ಸಿ.ಜೆ.ರಾಯ್ ಆತ್ಮ*ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶೀಘ್ರದಲ್ಲೇ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲಿದೆ. ಆರ್ಥಿಕ, ಕೌಟುಂಬಿಕ ಸೇರಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದರೂ, ಆತ್ಮ*ಹತ್ಯೆಗೆ ನಿಖರ ಕಾರಣ ಇನ್ನೂ ನಿಗೂಢವಾಗಿಯೇ ಉಳಿದಿದೆ.</p><img><p>ಉದ್ಯಮಿ ಸಿ.ಜೆ.ರಾಯ್ ಆತ್ಮ*ಹತ್ಯೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ಕೆಲವೇ ದಿನಗಳಲ್ಲಿ ಅಂತಿಮ ವರದಿ ಸಲ್ಲಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಸಿದ್ಧತೆ ನಡೆಸಿದೆ ಎಂದು ತಿಳಿದು ಬಂದಿದೆ.</p><img><p>ಆತ್ಮ*ಹತ್ಯೆ ಸಂಬಂಧ ರಿಯಲ್ ಎಸ್ಟೇಟ್‌, ಇತರೆ ಆರ್ಥಿಕ ವ್ಯವಹಾರ, ಕೌಟುಂಬಿಕ ಹಾಗೂ ಆರೋಗ್ಯ ಸೇರಿ ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ. ಹಲವು ದಾಖಲೆಗಳನ್ನು ಸಹ ಸಂಗ್ರಹಿಸಿ ಅವಲೋಕಿಸಲಾಗಿದೆ. ಆದರೆ ಈವರೆಗೆ ಆತ್ಮ*ಹತ್ಯೆಗೆ ಇಂಥದ್ದೇ ಕಾರಣ ಎಂದು ಹೇಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ತನಿಖೆಯಲ್ಲಿ ಪತ್ತೆಯಾದ ಅಂಶಗಳನ್ನು ಆಧರಿಸಿ ಮತ್ತಷ್ಟು ತನಿಖೆ ಮುಂದುವರೆಸಿದ್ದೇವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><img><p>ಆದಷ್ಟು ಬೇಗ ಪ್ರಕರಣ ಇತ್ಯರ್ಥಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ. ಮೃತ ಉದ್ಯಮಿ ಕುಟುಂಬದವರು, ಕಂಪನಿ ಉದ್ಯೋಗಿಗಳು ಹಾಗೂ ಹೂಡಿಕೆದಾರರನ್ನೂ ವಿಚಾರಣೆ ನಡೆಸಿ ಹೇಳಿಕೆ ಪಡೆಯಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p><strong>ಇದನ್ನೂ ಓದಿ:</strong><strong> ಸಿ.ಜೆ.ರಾಯ್‌ ಕೇಸ್‌ : ಸಚಿವೆ ನಿರ್ಮಲಾಗೆ ಕೇರಳ ಸಿಎಂ ಪತ್ರ</strong></p><img><p>ಇತ್ತೀಚಿಗೆ ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಗುಂಡಿಟ್ಟುಕೊಂಡು ಕಾನ್ಫಿಡೆಂಟ್ ಗ್ರೂಪ್‌ನ ಮಾಲಿಕ ಸಿ.ಜೆ.ರಾಯ್ ಆತ್ಮ*ಹತ್ಯೆ ಮಾಡಿಕೊಂಡಿದ್ದರು. ಈ ಆತ್ಮ*ಹತ್ಯೆಗೆ ಕಾರಣಗಳು ಬೆಳಕಿಗೆ ಬಾರದೆ ನಿಗೂಢವಾಗಿದೆ. ನಿರಂತರ ಐಟಿ ದಾಳಿ ಹೊರತು ರಾಯ್ ಅವರಿಗೆ ಯಾವುದೇ ಒತ್ತಡಗಳು ಇರಲಿಲ್ಲ ಎಂದು ಸೋದರ ಹೇಳಿದ್ದರು.</p><p><strong>ಇದನ್ನೂ ಓದಿ: </strong><strong>ಐಟಿ ದಾಳಿಗೆ ಬೇಸತ್ತು ಗುಂಡು ಹಾರಿಸಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮ**ತ್ಯೆ</strong></p>



Source link

Leave a Reply

Your email address will not be published. Required fields are marked *