
ಗದಗ, (ಫೆಬ್ರವರಿ 18): ವಾಮಾಚಾರ ಪ್ರಯೋಗ ಎಂಬ ಪದವೇ ದಿಗಿಲು ಹುಟ್ಟಿಸುವಂಥದ್ದು. ಏಕೆಂದರೆ ಹೀಗೆ ವಾಮಾಚಾರ ಮಾಡಿದರೆ ಸಮಸ್ಯೆಗಳು ಹೇಗಾಗುತ್ತವೆ ಅಂದರೆ, ಕೆನ್ನೆ ಮೇಲೆ ಪೆಟ್ಟು ಬಿದ್ದ ಅನುಭವವಾಗುತ್ತದೆ. ಆದರೆ ಹೊಡೆದವರು ಯಾರು ಎಂಬುದು ಕಣ್ಣಿಗೆ ಕಾಣಲ್ಲ. ಅದರಂತೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಹುಡ್ಕೋ ಕಾಲೋನಿಯ ಬಸ್ ನಿಲ್ದಾಣದಲ್ಲಿ ವಾಮಾಚಾರ ಮಾಡಿದ್ದಾನೆ, ಜನರು ಬೆಚ್ಚಿಬಿದ್ದಿದ್ದಾರೆ. ಹೋದ ವರ್ಷ ನಾ ಬಯಸಿದು ಸಿಕ್ಕಿಲ್ಲ. ಆದರೆ ಈ ವರ್ಷ ತೊಗೊಳದೆ ಬಿಡಲ್ಲ ಎಂದು ನಕ್ಷತ್ರ ಆಕಾರದಲ್ಲಿ ಬಿಡಿಸಿ ಕಪ್ಪು ಬಣ್ಣದ ಗೊಂಬೆ, ಮೊಟ್ಟೆ, ಎಲೆ ಅಡಿಕೆ, ನಿಂಬೆಹಣ್ಣು ಇಟ್ಟು ವಾಮಾಚಾರ ಮಾಡಲಾಗುತ್ತದೆ. ಇದನ್ನು ಕಂಡು ಹೆದರಿದ ಸ್ಥಳೀಯರು, ದುಷ್ಕರ್ಮಿಗಳನ್ನು ಪತ್ತೆ ಮಾಡುವಂತೆ ಇದ್ದಾರೆ.