ಲಕ್ನೋಡ ಏಕಾನಾ ಕ್ರಿಕೆಟ್ ಮೈದಾನದಲ್ಲಿ ನಡೆದ 2025-26ರ ರಣಜಿ ಟ್ರೋಫಿಯ ಸೆಮಿಫೈನಲ್ ಉತ್ತರಾಖಂಡ ತಂಡವನ್ನು ಎದುರಿಸುತ್ತಿರುವ ಕರ್ನಾಟಕ ತಂಡ ಪಂದ್ಯದ ಮೇಲೆ ಭಿಗಿ ಹಿಡಿತ ಸಾಧಿಸಿದೆ. ಮೊದಲ ಇನ್ನಿಂಗ್ಸ್ನಲ್ಲಿ 736 ರನ್ ಕಲೆಹಾಕಿದ ಕರ್ನಾಟಕ ತಂಡ, ಉತ್ತರಾಖಂಡ ತಂಡವನ್ನು ಮೊದಲ ಇನ್ನಿಂಗ್ಸ್ನಲ್ಲಿ 233 ರನ್ಗಳಿಗೆ ಆಲೌಟ್ ಮಾಡಿತು. ಆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ 4ನೇ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 299 ರನ್ ಕಲೆಹಾಕಿದೆ. ಈ ಮೂಲಕ ತನ್ನ ಮುನ್ನಡೆಯನ್ನು 802 ರನ್ಗಳಿಗೆ ಕೊಂಡೊಯ್ದಿದೆ. ಮೊದಲ ಇನ್ನಿಂಗ್ಸ್ನಲ್ಲಿ ಕರ್ನಾಟಕ ಪರ ಅಮೋಘ ಶತಕ ಬಾರಿಸಿದ್ದ ಸ್ಮರಣ್ ರವಿಚಂದ್ರನ್, ಇದೀಗ ಎರಡನೇ ಇನ್ನಿಂಗ್ಸ್ನಲ್ಲಿ ಶತಕ ಬಾರಿಸಿ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ದರು.
ಮೊದಲ ಇನ್ನಿಂಗ್ಸ್ನಲ್ಲಿ 216 ರನ್ಗಳನ್ನು ಎದುರಿಸಿ 12 ಬೌಂಡರಿಗಳ ಸಹಿತ 135 ರನ್ ಬಾರಿಸಿದ್ದ ಸ್ಮರಣ್, ಇದೀಗ ಎರಡನೇ ಇನ್ನಿಂಗ್ಸ್ನಲ್ಲೂ 149 ಪಂದ್ಯಗಳನ್ನು ಎದುರಿಸಿ 12 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 127 ರನ್ ಬಾರಿಸಿದರು. ಇನ್ನು ಕರ್ನಾಟಕ ಪರ ಮೊದಲ ಇನ್ನಿಂಗ್ಸ್ನಲ್ಲಿ ಸ್ಮರಣ್ ಪಾತ್ರ ನಾಯಕ ದೇವದತ್ ಪಡಿಕ್ಕಲ್ ದ್ವಿಶತಕ ಬಾರಿಸಿದರೆ, ಕೆಎಲ್ ರಾಹುಲ್ ಕೂಡ ಶತಕದ ಇನಿಂಗ್ಸ್ ಆಡಿದ್ದರು.