ಎಸ್ ಎಸ್ ರಾಜಮೌಳಿ (ಎಸ್ ಎಸ್ ರಾಜಮೌಳಿ) ಪ್ರಸ್ತುತ ಭಾರತ ಚಿತ್ರರಂಗದ ನಂಬರ್ 1 ನಿರ್ದೇಶಕ. ಭಾರಿ ಬಜೆಟ್ನ ‘ವಾರಣಾಸಿ’ ಸಿನಿಮಾವನ್ನು ಅವರು ನಿರ್ದೇಶಿಸುತ್ತಿದ್ದಾರೆ. ಹಾಲಿವುಡ್ ಲೆವೆಲ್ನಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾವನ್ನು ಭಾರತವು ಹಾಲಿವುಡ್ ಮಾರುಕಟ್ಟೆಯನ್ನೂ ಸಹ ಗಮನದಲ್ಲಿರಿಸಿಕೊಂಡೇ ನಿರ್ಮಾಣವಾಗುತ್ತಿದೆ. ಸಿನಿಮಾದಲ್ಲಿ ಮಹೇಶ್ ಬಾಬು ನಾಯಕ, ಪ್ರಿಯಾಂಕಾ ಚೋಪ್ರಾ ನಾಯಕಿ, ಪೃಥ್ವಿರಾಜ್ ಸುಕುಮಾರ್ ವಿಲನ್. ಇವರ ಜೊತೆಗೆ ಇನ್ನೂ ಕೆಲವು ಬೇರೆ ಬೇರೆ ಕಲಾವಿದರು ನಟಿಸುತ್ತಿದ್ದಾರೆ. ಆದರೆ ಇದೇ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟ ಸುದೀಪ್ ಸಹ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಪಿಂಕ್ ವಿಲ್ಲಾ ಸೌಥ್ ಮಾಡಿರುವ ವರದಿಯಂತೆ, ಸುದೀಪ್ ಅವರು ರಾಜಮೌಳಿ ನಿರ್ದೇಶನದ ‘ವಾರಣಾಸಿ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಹಿಂದೆ ರಾಜಮೌಳಿ ನಿರ್ದೇಶನದ ‘ಈಗ’ ಮತ್ತು ‘ಬಾಹುಬಲಿ: ದಿ ಬಿಗಿನಿಂಗ್’ ಸಿನಿಮಾಗಳಲ್ಲಿ ಸುದೀಪ್ ನಟಿಸಿದ್ದರು, ಎರಡೂ ಸಿನಿಮಾಗಳಲ್ಲಿ ಅತ್ಯದ್ಭುತ ಪ್ರದರ್ಶನವನ್ನು ಸುದೀಪ್ ನೀಡಿದ್ದರು. ಇದೀಗ ಮೂರನೇ ಬಾರಿಗೆ ರಾಜಮೌಳಿ ಜೊತೆಗೆ ಸುದೀಪ್ ಜೊತೆ ಆಗುತ್ತಿದ್ದಾರೆ. ‘ವಾರಣಾಸಿ’ ಸಿನಿಮಾದಲ್ಲಿ ಸುದೀಪ್ ಅವರ ಪಾತ್ರವು, ಸಿನಿಮಾದ ಕತೆಗೆ ಮಹತ್ತರವಾದ ತಿರುವು ನೀಡುವ ಪಾತ್ರವಿದೆ.
ಕಾಣಿಸಿಕೊಂಡ ರಾಜಮೌಳಿ ಅವರೇ ಈ ಹಿಂದೆ ಹಲವು ಬಾರಿ ಹೇಳಿಕೊಂಡಿರುವಂತೆ ಸುದೀಪ್, ಅವರ ನೆಚ್ಚಿನ ನಟ. ‘ಈಗ’ ಸಿನಿಮಾದ ಸುದೀಪ್ ನಟನೆ ರಾಜಮೌಳಿಗೆ ಅಚ್ಚುಮೆಚ್ಚಂತೆ, ‘ನನ್ನ ಸಿನಿಮಾಗಳಲ್ಲಿ ನನಗೆ ನಾಯಕನಿಗೆ ವಿಲನ್ ಇಷ್ಟ, ಅದರಲ್ಲೂ ನನ್ನ ಸಿನಿಮಾಗಳಲ್ಲಿ ನನ್ನ ಮೆಚ್ಚಿನ ವಿಲನ್ ಸುದೀಪ್’ ಎಂದು ಈ ಹಿಂದೆ ಹೇಳಿಕೊಂಡಿದ್ದರು. ಇದೇ ಕಾರಣಕ್ಕೆ ಸುದೀಪ್ ಅವರನ್ನು ‘ಬಾಹುಬಲಿ’ ಸಿನಿಮಾದ ಅರೇಬಿಯಾದ ಕತ್ತಿಗಳ ವ್ಯಾಪಾರಿ ಅಸ್ಲಂ ಖಾನ್ ಪಾತ್ರಕ್ಕೆ ಹಾಕಿಕೊಂಡಿದ್ದಾರೆ. ಒಳ್ಳೆಯ ಫೈಟ್ ಸಹ ಆ ಸಿನಿಮಾದಲ್ಲಿ ಸುದೀಪ್ ಅವರಿಗೆ ಇತ್ತು.
ಇದನ್ನೂ ಓದಿ:’ವಾರಣಾಸಿ’ ಚಿತ್ರಕ್ಕಾಗಿ ಅತ್ಯಂತ ವೇಗವಾಗಿ ಕೆಲಸ ಮಾಡುತ್ತಿದ್ದಾರೆ ರಾಜಮೌಳಿ
ರಾಜಮೌಳಿ ಅವರು ಈ ಸಿನಿಮಾಗಳಲ್ಲಿ ಅತ್ಯಂತ ನಿರೀಕ್ಷಿತ ಮತ್ತು ಅತ್ಯಂತ ದುಬಾರಿ ಸಿನಿಮಾ ಆಗಿರುವ ‘ವಾರಣಾಸಿ’ಯಲ್ಲೂ ಸುದೀಪ್ ಅವರಿಗೆ ವಿಶೇಷ ಪಾತ್ರದಲ್ಲಿ ರಾಜಮೌಳಿ ನೀಡುತ್ತಿದ್ದಾರೆ, ಆ ಪಾತ್ರ ಹೇಗಿರಲಿದೆ ಎಂಬ ಕುತೂಹಲ ಸಹಜವಾಗಿಯೇ ಇದೆ. ಸುದೀಪ್ ಅವರು ‘ವಾರಣಾಸಿ’ ಸಿನಿಮಾದಲ್ಲಿ ನಟಿಸಲಿರುವ ಸುದ್ದಿ ಖಾತ್ರಿ ಆಗಿಲ್ಲ. ಆದರೆ ಆದಷ್ಟು ಬೇಗ ಸುದ್ದಿಯನ್ನು ಚಿತ್ರತಂಡವೇ ಹಂಚಿಕೊಳ್ಳಲಿದೆ ಎನ್ನಲಾಗುತ್ತಿದೆ.
‘ವಾರಣಾಸಿ’ ಸಿನಿಮಾವು ಮುಂದಿನ ವರ್ಷ ಏಪ್ರಿಲ್ 07 ರಂದು ಬಿಡುಗಡೆಯಾಗಲಿದೆ. ಸಿನಿಮಾದ ಅರ್ಧಕ್ಕೂ ಹೆಚ್ಚು ಭಾಗದ ಚಿತ್ರವನ್ನು ರಾಜಮೌಳಿ ಮುಗಿಸಿದ್ದಾರೆ. ಈ ಸಿನಿಮಾಕ್ಕೆ ಸುಮಾರು 1000 ಕೋಟಿ ಬಜೆಟ್ ಹೂಡಿದೆ, ಸಿನಿಮಾವನ್ನು ಪಿವಿಆರ್ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಿಸಿರುವುದು ವಿಶೇಷ. ಸಿನಿಮಾಕ್ಕಾಗಿ ಕೆಲವು ಹಾಲಿವುಡ್ ಸಂಸ್ಥೆಗಳು ಸಹ ಕೆಲಸ ಮಾಡಿವೆ. ಸಿನಿಮಾಕ್ಕೆ ಆಸ್ಕರ್ ವಿಜೇತ ಎಂಎಂ ಕೀರವಾಣಿ ಅವರು ಸಂಗೀತ ನೀಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 6:46 pm, ಗುರು, 19 ಫೆಬ್ರವರಿ 26