Headlines

ಜಗತ್ತಿನ ಮುಂದೆ ಬೆತ್ತಲಾದ ಕಾಂಗ್ರೆಸ್; ಎಐ ಸಮಿಟ್​ನಲ್ಲಿ ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಹಲವರ ಅಸಮಾಧಾನ

ಜಗತ್ತಿನ ಮುಂದೆ ಬೆತ್ತಲಾದ ಕಾಂಗ್ರೆಸ್; ಎಐ ಸಮಿಟ್​ನಲ್ಲಿ ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಹಲವರ ಅಸಮಾಧಾನ


ನವದೆಹಲಿ, ಫೆಬ್ರುವರಿ 20: ದೆಹಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಮಿಟ್ (AI ಇಂಪ್ಯಾಕ್ಟ್ ಶೃಂಗಸಭೆ) ಇಡೀ ಪ್ರಪಂಚದ ಗಮನ ಸೆಳೆದಿದೆ. ಶೃಂಗಸಭೆಯ ಕೊನೆಯ ದಿನ ಶುಕ್ರವಾರ ಭಾರತೀಯ ಯುವ ಕಾಂಗ್ರೆಸ್ ಪಕ್ಷದ 10 ಕಾರ್ಯಕರ್ತರು ಅಂಗಿ ತೆಗೆದು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದೂ ಕೂಡ ಸಾಕಷ್ಟು ಪ್ರಚಾರ ಪಡೆದಿದೆ. ಸಮಿತ್ ನಡೆಯುತ್ತಿರುವ ಸ್ಥಳದಲ್ಲಿ ಹತ್ತು ಮಂದಿ ದಿಢೀರನೇ ಶರ್ಟ್ ಬಿಚ್ಚಿ, ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಐ ಸಮಿಟ್ ನಲ್ಲಿ ಪ್ರಧಾನಿಗಳು ದೇಶವನ್ನು ಮಾರಿದ್ದಾರೆ ಎಂದು ಪ್ರತಿಭಟಿಸಿದ್ದಾರೆ.

ಆದರೆ, ಯುವ ಕಾಂಗ್ರೆಸ್ಸಿಗರ ಈ ವಿನೂತನ ಪ್ರತಿಭಟನೆ ಎಲ್ಲರಿಗೂ ಪಥ್ಯವಾಗಿಲ್ಲ. ದೇಶ ವಿದೇಶ ಸಮಿತಿಯಲ್ಲಿ ಭಾಗವಹಿಸಲು ಬಂದಿರುವ ಅತಿಥಿಗಳ ಮುಂದೆ ನಡೆದ ಈ ಪ್ರತಿಭಟನೆ ಹಲವರಿಗೆ ಅಸಮಾಧಾನ ತಂದಿದೆ. ದೇಶವನ್ನು ಬೆಚ್ಚಲು ಕಾಂಗ್ರೆಸ್ ಯತ್ನಿಸಿ, ತಾನೇ ಬೆತ್ತಲೆ ಎಂದು ಕೆಲವರು ಟೀಕಿಸಿದ್ದಾರೆ.

ಇದನ್ನೂ ಓದಿ: ದೇಶವೇ ತಲೆತಗ್ಗಿಸುವ ಕೆಲಸ; ಎಐ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಆಕ್ರೋಶ

‘ಪ್ರತಿಭಟನೆ ನಡೆಸಲು ಇದು ಸರಿಯಾದ ಸ್ಥಳ ಎಂಬುದು ಒಬ್ಬ ಸಂದರ್ಶಕನಾಗಿ ನನ್ನ ಅನಿಸಿಕೆ. ಇದರಿಂದ ದೇಶಕ್ಕೆ ಕೆಟ್ಟ ಪ್ರಚಾರ ಸಿಗುತ್ತದೆ. ಅಂತಾರಾಷ್ಟ್ರೀಯ ಕಾರ್ಯಕ್ರಮವೊಂದು ನಡೆಯುತ್ತಿದೆ, ಮತ್ತು ಎಐ ಬಗ್ಗೆ ಮಾತನಾಡುತ್ತಿರುವ ಸ್ಥಳದಲ್ಲಿ ಪ್ರತಿಭಟನೆ ನಡೆಯುವುದು ಸರಿಯಲ್ಲ. ಪ್ರಧಾನಿಗಳ ವಿರುದ್ಧ ಘೋಷಣೆಗಳನ್ನು ಕೂಗುವಾಗ ನಾನು ಬೂತ್ ನಲ್ಲೇ ನಿಂತಿದ್ದೆ. ಜಗಳ ಹುಟ್ಟುಹಾಕುವುದೇ ಈ ಪ್ರತಿಭಟನೆಯ ಉದ್ದೇಶದಿಂದ ಎಂದನಿಸುತ್ತದೆ’ ಎಂದು ಸುಮಿತ್ ಪಟನಿ ಎಂಬವರು ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆಗೆ ಬಂದ ಕೆಲ ಪ್ರತಿಕ್ರಿಯೆಗಳು

ಬಹಳಷ್ಟು ಜನರು ಇದೆ ಅಭಿಪ್ರಾಯವನ್ನು ಪುನರುಚ್ಚರಿಸಿದ್ದಾರೆ. ಜಗತ್ತು ಭಾರತದ ಬೆಳವಣಿಗೆ ಕಾಣಲು ಸೇರಿದೆ, ಕಾಂಗ್ರೆಸ್ ಪಕ್ಷವು ಕಲಹ ಹುಟ್ಟುಹಾಕಲು ಅಸಕ್ತವಾಗಿದೆ ಎಂದು ಜುಬಿನ್ ಅಶಾರಾ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಚಿವ ಪೀಯೂಶ್ ಗೋಯಲ್ ಅವರು ವಿಪಕ್ಷದ ಈ ವರ್ತನೆಯನ್ನು ಬಲವಾಗಿ ಖಂಡಿಸಿದ್ದಾರೆ.

ಇದನ್ನೂ ಓದಿ: ಭಾರತ-ಅಮೆರಿಕ ಮಧ್ಯ ವ್ಯಾಪಾರ ಒಪ್ಪಂದ ಏಪ್ರಿಲ್ ನಿಂದ ಚಾಲನೆ ಸಾಧ್ಯತೆ; ಓಮನ್, ಬ್ರಿಟನ್ ಒಪ್ಪಂದಗಳು ಏಪ್ರಿಲ್ ನಲ್ಲೇ?

‘ಕಾಂಗ್ರೆಸ್ನ ಹತಾಶೆ ಮತ್ತು ಅಹಂಕಾರದ ಪ್ರದರ್ಶನ ಇದು. ಮಿಸ್ಟರ್ ರಾಹುಲ್ ಗಾಂಧಿಯವರೆ, ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ಭಾರತವನ್ನು ಹಿಯಾಳಿಸುವುದು ನಿಮ್ಮ ವಿರೋಧದ ಧ್ವನಿ ಎಂದಾಯಿತು. ನೀವು ಒಂದೆಡೆ ಇತ್ತೀಚಿನ ಟ್ರೆಡ್ ಡೀಲ್ಗಳ ಬಗ್ಗೆ ಸುಳ್ಳುಗಳನ್ನು ಹೇಳುತ್ತಾ, ಭಾರತದ ಅಭಿವೃದ್ಧಿಗೆ ಭಂಗ ತರುತ್ತಿದ್ದೀರಿ. ಇನ್ನೊಂದೆಡೆ ನಿಮ್ಮ ಸೈನಿಕರು ಐ ಸಮಿಟ್ ನಲ್ಲಿ ಬಟ್ಟೆ ಬಿಚ್ಚಿ, 140 ಕೋಟಿ ಜನರಿಗೆ ಮುಜುಗರ ತಂದಿದ್ದಾರೆ. ಈ ಪ್ರತಿಭಟನೆಯು ನಿಮ್ಮ ಹಾಗೂ ನಿಮ್ಮ ಪಕ್ಷದ ದೃಷ್ಟಿಯ ಕೊರತೆಯನ್ನು ಎತ್ತಿ ತೋರಿಸಿದೆ’ ಎಂದು ಪೀಯೂಶ್ ಗೋಯಲ್ ಟ್ವೀಟ್ ಮಾಡಿದ್ದಾರೆ.

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *