ಸ್ನೇಹಮಯಿ ಕೃಷ್ಣ, ಶಾಲಿನಿ ರಜನೀಶ್ಚಿತ್ರದ ಕ್ರೆಡಿಟ್ ಮೂಲ: google
ಬೆಂಗಳೂರು, ಫೆಬ್ರವರಿ 21: ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೇ ಗಂಭೀರ ಆರೋಪಿಸಿದ್ದರು. ಶಾಲಿನಿ ರಜನೀಶ್ ವಿರುದ್ಧ 1.60 ಕೋಟಿ ರೂ. ಮುಡಾ ಮಾಜಿ ಆಯುಕ್ತ ನಟೇಶ್ ಎಸ್ ಎಸ್ ಗೆ ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾರೆ ಎಂದು ಆರೋಪಿಸಿದ್ದು ದೊಡ್ಡ ಮಟ್ಟದಲ್ಲೇ ಸದ್ದು ಮಾಡಿತ್ತು. ಆದರೆ 23 ಗಂಟೆಗೂ ಹೆಚ್ಚು ಕಾಲ ಸಿಸಿಬಿ ವಿಚಾರಣೆ ಬಳಿಕ ಸಾಮಾಜಿಕ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ (ಸ್ನೇಹಮಯಿ ಕೃಷ್ಣ) ಇದೀಗ ಉಲ್ಟಾ ಹೊಡೆದಿದ್ದಾರೆ.
ನಿನ್ನೆಯಷ್ಟೇ ದೂರುದಾರ ಸ್ನೇಹಮಯಿ ಕೃಷ್ಣರನ್ನ ವಶಕ್ಕೆ ಪಡೆದು ಸಿಸಿಬಿ ತೀವ್ರ ವಿಚಾರಣೆ ನಡೆಸಿತ್ತು. ಆಡಿಯೋವನ್ನ ಕೋರ್ಟ್ಗೂ ಸಲ್ಲಿಕೆ ಮಾಡೋಕೂ ಸಜ್ಜಾಗಿದ್ದರು. ಆದರೆ ಕೋರ್ಟ್ಗೆ ಸಲ್ಲಿಸೋಕೆ ಮುಂದಾಗಿದ್ದಂತೆಯೇ ಸಿಬಿಐ ವಶಕ್ಕೆ ಪಡೆದಿತ್ತು. ಜೊತೆಗೆ ಮೈಸೂರಿನ 2 ಮನೆ, ಒಂದು ಕಚೇರಿ ಮೇಲೂ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದರು. ಕೆಲವು ಪ್ರಮುಖ ದಾಖಲೆಗಳನ್ನು ಸೀಜ್ ಮಾಡಿದರು.
ಇದನ್ನೂ ಓದಿ: ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಇದೀಗ ಸಿಸಿಬಿ ವಿಚಾರಣೆ ಬಳಿಕ ತಪ್ಪೊಪ್ಪಿಕೊಂಡಿರೋ ಸ್ನೇಹಮಯಿ ಕೃಷ್ಣ, ಆಡಿಯೋ ನಿಜ, ಆದರೆ ಶಾಲಿನಿ ರಜನೀಶ್ ವಿರುದ್ಧ ಆರೋಪ ಸುಳ್ಳು ಅಂದಿದ್ದಾರೆ. ಮೂಡ ಪ್ರಕರಣಕ್ಕೂ ಇದಕ್ಕೂ ಸಂಬಂಧವಿಲ್ಲ ಅಂತಾ ಸ್ಪಷ್ಟನೆ ಕೊಟ್ಟಿದ್ದಾರೆ.
ಮುಡಾ ಕೇಸ್ಗೂ ಇದಕ್ಕೂ ಸಂಬಂಧವಿಲ್ಲ ಅಂತಿರೋ ದೂರುದಾರ ಸ್ನೇಹಮಯಿ ಕೃಷ್ಣ, ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ನನ್ನ ಆರೋಪ ಸರಿಯೇ ಇದೆ ಅಂತಿದ್ದಾರೆ. ನಟೇಶ್, ವಿನೋದ್ ಮಧ್ಯೆ ಹಣಕಾಸಿನ ವಿಚಾರ ನಡೆದಿತ್ತು. ನನ್ನನ್ನೂ ಬಳಸೋ ಪ್ರಯತ್ನ ಇದೆ ಅಂದಿದ್ದಾರೆ.
ಶಾಲಿನಿ ರಜನೀಶ್ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ
ಸ್ನೇಹಮಯಿ ಕೃಷ್ಣ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ವಿನೋದ್ ಮತ್ತು ನಟೇಶ್ ನಡುವಿನ ಹಣಕಾಸಿನ ವಿವಾದಕ್ಕೆ ಸಂಬಂಧಿಸಿದ ಆಡಿಯೋದಲ್ಲಿ, ಶಾಲಿನಿ ರಜನೀಶ್ ಅವರ ಬಗ್ಗೆ ನೀಡಲಾದ ಮಾಹಿತಿ ಸುಳ್ಳು ಎಂದು ಅವರು ಒಪ್ಪಿಕೊಂಡಿದ್ದಾರೆ. ಹೀಗಾಗಿ ತಮ್ಮ ತಪ್ಪಿಗಾಗಿ ಶಾಲಿನಿ ರಜನೀಶ್ ಗೆ ಕ್ಷಮೆ ಕೋರಿದ್ದಾರೆ.
ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಹಲವು ಅನುಮಾನ!
ಇನ್ನು ಶಾಲಿನಿ ರಜನೀಶ್ ವಿರುದ್ಧ ಆರೋಪದಲ್ಲಿ ಕೋರ್ಟ್ಗೆ ಸಾಕ್ಷಿ ಸಲ್ಲಿಕೆಯಾಗೋದನ್ನ ತಪ್ಪಿಸೋ ಹುನ್ನಾರ ನಡೀತಾ? ಅನ್ನೋ ಅನುಮಾನವೂ ಇದೆ. ಇಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನಟೇಶ್ ಮಾತನಾಡಿದ್ದ ಆಡಿಯೋ ಸಲ್ಲಿಕೆಗೂ ಮುಂದಾಗಿದ್ದರು. ಆದರೆ ಕೋರ್ಟ್ಗೆ ಆಡಿಯೋ ಸಲ್ಲಿಕೆಗೂ ಮುನ್ನವೇ ಸ್ನೇಹಮಯನ್ನ ವಶಕ್ಕೆ ಪಡೆದಿರೋದು ಹಲವು ಅನುಮಾನಕ್ಕೂ ಕಾರಣವಾಗಿತ್ತು.
ಇನ್ನು ಕೇಸ್ ಇಲ್ಲಿಗೆ ಮುಗೀತಾ? ಇಲ್ಲ, ಆಡಿಯೋ ಮಾಡಿದ್ದು ವಿನೋದ್ ನನ್ನ ಸಿಬಿ ಪೊಲೀಸರು ಬಂಧನ ಮಾಡಿದ್ದಾರೆ. ಹಣಕಾಸು ವಿಚಾರದಲ್ಲಿ ನಟೇಶ್ ಮಾತನಾಡಿದ್ದ ಆಡಿಯೋವನ್ನ ಪರಿಶೀಲನೆ ನಡೆಸುತ್ತಿದ್ದಾರೆ. ಸ್ನೇಹಮಯಿ ವಶದ ವಿಚಾರದಲ್ಲಿ ಸಿಎಂ ಸೇರಿ ಹಲವರ ಕೈವಾಡ ಇದೆ ಅಂತಾ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು. ಇದಕ್ಕೆ ತಿರುಗೇಟು ಕೊಟ್ಟ ಸಚಿವ ಪ್ರಿಯಾಂಕ್ ಖರ್ಗೆ, ದ್ವೇಷ ಅನ್ನೋದು ಸರಿಯಲ್ಲ. ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಆಗುತ್ತೆ ಅಂತಾ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇದನ್ನೂ ಓದಿ: ಮುಡಾ ಹಗರಣದ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಬಂಧನ: ಮನೆಯಲ್ಲಿ ಏನೇನು ಸಿಕ್ತು?
ಒಟ್ಟಿನಲ್ಲಿ ಶಾಲಿನಿ ರಜನೀಶ್ ನನ್ನ ವಿರುದ್ಧ ಆರೋಪ ಸುಳ್ಳು ಅಂತಾ ಸ್ನೇಹಮಯಿ ಕೃಷ್ಣ ಇದೀಗ ಉಲ್ಟಾ ಹೊಡೆದಿದ್ದಾರೆ. ಆದರೆ ಮುಡಾ ಮಾಜಿ ಆಯುಕ್ತ ನಟೇಶ್ ಆಡಿಯೋದ ಬಗ್ಗೆ ಸಿಸಿಬಿ ತನಿಖೆ ಮುಂದುವರಿದಿದೆ.
ವರದಿ: ಬೈರೋ ರಿಪೋರ್ಟ್ TV9
ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.