ದಾವಣಗೆರೆ: ಹಾನಿಕಾರಕ ಇಂಜೆಕ್ಷನ್ ಹಾಕಿಕೊಂಡು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ದಾವಣಗೆರೆ: ಹಾನಿಕಾರಕ ಇಂಜೆಕ್ಷನ್ ಹಾಕಿಕೊಂಡು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಪ್ರಾತಿನಿಧಿಕ ಚಿತ್ರಚಿತ್ರ ಕ್ರೆಡಿಟ್ ಮೂಲ: deccanchronicle

ದಾವಣಗೆರೆ, ಫೆಬ್ರವರಿ 22: ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿ (ವಿದ್ಯಾರ್ಥಿ) ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ (ಆತ್ಮಹತ್ಯೆ) ಮಾಡಿಕೊಂಡಿರುವಂತಹ ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿ ಇರುವ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ನ್ಯಾಶನಲ್ ಹಾಸ್ಟೆಲ್ ನಲ್ಲಿ ನಡೆದಿದೆ. ಮಹಾರಾಷ್ಟ್ರದ ಸತಾರ್ ಜಿಲ್ಲೆಯ ಕರಾಡ್ ನಿವಾಸಿ ಸಿದ್ಧಾರ್ಥ ತ್ರಯಂಬಕೆ (30) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣಾ ಪ್ರಕರಣ ನಡೆದಿದೆ.

ವೈದ್ಯಕೀಯ ವಿದ್ಯಾರ್ಥಿ ಸಿದ್ಧಾರ್ಥ ತ್ರಯಂಬಕೆ ಡರ್ಮಾಟಾಲಾಜಿ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದಾರೆ. ಹಾನಿಕಾರಕ ಇಂಜೆಕ್ಷನ್ ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿನ್ನೆ ಮಧ್ಯಾಹ್ನದಿಂದ ರೂಮ್ ಲಾಕ್ ಆಗಿದ್ದ ಅನುಮಾನ ಬಂದು ಕೊಠಡಿ ಬಾಗಿಲು ಒಡೆದು ಒಳಗೆ ಹೋದಾಗ ಆತ್ಮಹತ್ಯೆ ವಿಚಾರ ಬೆಳಕಿಗೆ ಬಂದಿದೆ. ಸದ್ಯ ಮೃತ ವಿದ್ಯಾರ್ಥಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ತಾಯಿ ನಿಧನದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಮಗನ ರಕ್ಷಣೆ

ತಾಯಿ ನಿಧನದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಮಗನ ರಕ್ಷಣೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ನಡೆದಿದೆ. ಬಾವಿಗೆ ಬಿದ್ದಿದ್ದ ಬಾಬು ಪಾಂಡು ಸಾಂಬರೇಕರ(41)ರ ಹೆಲ್ಫ್ ಲೈನ್ ಎಮರ್ಜೆನ್ಸಿ ರೆಸ್ಕ್ಯೂ ಫೌಂಡೇಶನ್ ಕಾರ್ಯನಿರ್ವಹಣೆಯ ರಕ್ಷಣೆ ಮಾಡಲಾಗಿತ್ತು.

ಇದನ್ನೂ ಓದಿ: ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಮೃತರ ಸಂಬಂಧ ಹೇಳಿದ್ದೇನು?

ಬಾವಿಯೊಳಗೆ ಜಿಗಿಯುತ್ತಿದ್ದಂತೆ ಬಾಬು ಕೇಬಲ್ ಅಡಿ ಸಿಲುಕಿದ್ದ. ಇದನ್ನು ಗಮನಿಸಿದ್ದ ಸ್ಥಳೀಯರಿಂದ ಹೆಲ್ಫ್ ಲೈನ್ ಎಮರ್ಜೆನ್ಸಿ ರೆಸ್ಕ್ಯೂ ಫೌಂಡೇಶನ್ ಮುಖ್ಯಸ್ಥ ಬಸವರಾಜ್ ಹಿರೇಮಠಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ಆಗಮಿಸಿ ರಕ್ಷಣೆ ಮಾಡಿದ್ದಾರೆ. ರಕ್ಷಣೆ ವೇಳೆ ಸಾಯಲು ಬಿಡಿ ಎಂದು ಬಾಬು ಸಾಂಬರೇಕರ ಗೋಗರೆದಿದ್ದಾರೆ.

ಇದನ್ನೂ ಓದಿ: ಮಹಿಳಾ ಅಧಿಕಾರಿ ಮನೆಯಲ್ಲಿ ಹಿಡನ್ ಕ್ಯಾಮರಾ ಇಟ್ಟಿದ್ದ ಪ್ರಕರಣ: ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ ಹೆಚ್ಚು ಬೆತ್ತಲೆ ವಿಡಿಯೋ!

15 ದಿನಗಳ ಹಿಂದೆ ಅನಾರೋಗ್ಯದಿಂದ ಬಾಬು ತಾಯಿ ಇದ್ದರು. ತಾಯಿ ಕಳೆದುಕೊಂಡು ಖಿನ್ನತೆಗೆ ಒಳಗಾಗಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *