Headlines

ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್​ಗೆ ಸ್ಫೋಟಕ ತಿರುವು: ಮುಡಾ ಮಾಜಿ ಆಯುಕ್ತರಿಂದಲೇ ಮನಿ ಟ್ರ್ಯಾಪ್ ಶಂಕೆ!

ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್​ಗೆ ಸ್ಫೋಟಕ ತಿರುವು: ಮುಡಾ ಮಾಜಿ ಆಯುಕ್ತರಿಂದಲೇ ಮನಿ ಟ್ರ್ಯಾಪ್ ಶಂಕೆ!


ಸ್ನೇಹಮಯಿ ಕೃಷ್ಣ ಆಡಿಯೋ ಬಾಂಬ್ ಸ್ಫೋಟಕ ತಿರುವುಚಿತ್ರದ ಕ್ರೆಡಿಟ್ ಮೂಲ: tv9

ಮೈಸೂರು, ಫೆಬ್ರವರಿ 23: ಸ್ನೇಹಮಯಿ ಕೃಷ್ಣ (ಸ್ನೇಹಮಯಿ ಕೃಷ್ಣ) ಆಡಿಯೋ ಬಾಂಬ್ ಪ್ರಕರಣ ಇದೀಗ ನಾಟಕೀಯ ತಿರುವು ಪಡೆದಿದೆ. ಚಿನ್ನದ ಉದ್ಯಮಿ ವಿನೋದ್ ಮತ್ತು ಮುಡಾ ಮಾಜಿ ಆಯುಕ್ತ ನಟೇಶ್ ಸೇರಿ ಸ್ನೇಹಮಯಿ ಕೃಷ್ಣರನ್ನು ಸಿಲುಕಿಸಲು ಪಕ್ಕಾ ಪ್ಲಾನ್ ರೂಪಿಸಿದ್ದಾರೆ ಎಂಬ ಗಂಭೀರ ಅನುಮಾನಗಳು ಸಿಸಿಬಿ (ಸಿಸಿಬಿ ಪೊಲೀಸ್) ತನಿಖೆಯಲ್ಲಿ ಮೂಡಿವೆ. ಬೆಂಗಳೂರು ಸಿಸಿಬಿ ಅಧಿಕಾರಿಗಳು ವಿನೋದ್ ಮತ್ತು ನಟೇಶ್ ಜೊತೆಗಿರುವ ಹಲವು ಫೋಟೋಗಳನ್ನು ಪತ್ತೆ ಮಾಡಿದ್ದು, ಇದೀಗ ಸ್ನೇಹಮಯಿ ಕೃಷ್ಣರನ್ನು ಟ್ರ್ಯಾಪ್ ಮಾಡುವ ಯತ್ನ ನಡೆದಿತ್ತು ಎಂಬ ಸಂಶಯ ಬಲವಾಗಿದೆ.

ವಿನೋದ್ ಆರಂಭದಲ್ಲಿ ಸ್ನೇಹಮಯಿ ಕೃಷ್ಣರ ವಿಶ್ವಾಸ ಗಳಿಸಿದ್ದರು. ನಟೇಶ್ ಮಾತನಾಡಿದ್ದು ಎನ್ನಲಾದ ಆಡಿಯೋ ಒಂದನ್ನು ಸ್ನೇಹಮಯಿ ಕೃಷ್ಣರಿಗೆ ನೀಡಿದ್ದರು. ಈ ಆಡಿಯೋದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ನಟೇಶ್ ಲಂಚ ನೀಡಿದ ಬಗ್ಗೆ ಮಾತನಾಡಿದ್ದಾರೆ ಎಂದು ವಿನೋದ್ ತಿಳಿಸಿದ್ದಾರೆ. ಲಂಚವಾಗಿ ನೀಡಿದ ಕಾರು ಮತ್ತು ಹಣದ ಚೀಲದ ಬಗ್ಗೆ ಕಥೆ ಹೇಳಿ, ಕಾರಿನ ಫೋಟೋಗಳನ್ನೂ ಸ್ನೇಹಮಯಿ ಕೃಷ್ಣರಿಗೆ ವಿನೋದ್ ಕೊಟ್ಟಿದ್ದರು. ವಿನೋದ್ ಮಾತುಗಳನ್ನು ನಂಬಿದ ಸ್ನೇಹಮಯಿ ಕೃಷ್ಣ, ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅಷ್ಟೇ ಅಲ್ಲದೆ, ಮಾಧ್ಯಮಗಳ ಎದುರು ಸಹ ಆರೋಪಗಳನ್ನು ಪುನರುಚ್ಚರಿಸಿ, ದೂರು ಸಹ ದಾಖಲಿಸಿದ್ದಾರೆ.

ಆದರೆ, ಪ್ರಕರಣದ ತನಿಖೆ ಮುಂದುವರಿದಂತೆ, ಸ್ನೇಹಮಯಿ ಕೃಷ್ಣ ಅವರು ಎಸ್‌ಎಸ್‌ಗೆ ಕ್ಷಮೆಯಾಚಿಸಿ ತಾವು ನೀಡಿದ ದೂರನ್ನು ವಾಪಸ್ ಪಡೆದರು. ಸಿಎಸ್ ಮೇಲಿನ ಆರೋಪಗಳು ಸುಳ್ಳು ಎಂದು ಹೇಳಿದ್ದರು. ಆದರೂ, ನಟೇಶ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ಲಂಚದ ವಿಚಾರ ಸತ್ಯ ಎಂದು ಸ್ನೇಹಮಯಿ ಕೃಷ್ಣ ಸಮರ್ಥಿಸಿಕೊಂಡಿದ್ದರು. ಇದೀಗ ಪ್ರಕರಣದಲ್ಲಿ ಹೊಸ ವಿಚಾರ ಬಯಲಾಗಿದ್ದರೆ, ವಿನೋದ್ ಮತ್ತು ನಟೇಶ್ ಇಬ್ಬರು ಸ್ನೇಹಿತರು ಎಂಬ ಅಂಶ ಬೆಳಕಿಗೆ ಬಂದಿದೆ.

ವಿನೋದ್, ನಟೇಶ್ ಸ್ನೇಹ ಬಯಲು: ಸಿಸಿಬಿ ತನಿಖೆಯ ದಿಕ್ಕೇ ತೋಚದಂತಾಗಿದೆ

ವಿನೋದ್ ಮತ್ತು ನಟೇಶ್ ಸ್ನೇಹ ಬಯಲಾದ ನಂತರ, ಸಿಸಿಬಿ ತನಿಖೆಯ ದಿಕ್ಕು ಬದಲಾಗಿದೆ. ಸ್ನೇಹಮಯಿ ಕೃಷ್ಣರನ್ನು ಬಲೆಗೆ ಬೀಳಿಸಲು ಇವರಿಬ್ಬರು ಉದ್ದೇಶಪೂರ್ವಕವಾಗಿ ಪಿತೂರಿ ನಡೆಸಿದ್ದಾರಾ ಎಂಬ ಅನುಮಾನ ಬಲವಾಗಿದೆ. ವಿಶೇಷವಾಗಿ ವಿನೋದ್, ತಾನು ಸಿಎಸ್ ವಿಚಾರ ಹೇಳಿಯೇ ಇಲ್ಲ ಉಲ್ಟಾ ಹೊಡೆಯುತ್ತಿರುವುದು, ಅವರ ಮಾತುಗಳ ವೈರುಧ್ಯಗಳು ಈಗ ಮತ್ತಷ್ಟು ಸಂಶಯಗಳಿಗೆ ಕಾರಣವಾಗಿವೆ.

ಇದನ್ನೂ ಓದಿ: ಸಿಸಿಬಿ ವಿಚಾರಣೆ ಬಳಿಕ ಉಲ್ಟಾ ಸ್ನೇಹಮಯಿ ಕೃಷ್ಣ: ಶಾಲಿನಿ ರಜನೀಶ್ ಗೆ ಕ್ಷಮೆ ಕೇಳಿದ ಸಾಮಾಜಿಕ ಕಾರ್ಯಕರ್ತ

ಸಿಸಿಬಿ ಅಧಿಕಾರಿಗಳು ವಿನೋದ್ ಮತ್ತು ನಟೇಶ್ ಅವರನ್ನು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಆಡಿಯೋ ಸತ್ಯವಾಗಿದ್ದರೂ, ಸಿಎಸ್ ಮೇಲಿನ ಆರೋಪಗಳು ಸುಳ್ಳು ಎಂದು ಸಾಬೀತುಪಡಿಸಲು ಹೊರಟಿರುವುದು ಈ ಪಿತೂರಿಯ ಭಾಗವಾಗಿರಬಹುದು ಎಂದು ಹೇಳಲಾಗುತ್ತಿದೆ. ಈ ಪ್ರಕರಣದ ಮೂಲವನ್ನು ಭೇದಿಸಲು ಸಿಸಿಬಿ ತೀವ್ರ ತನಿಖೆ ನಡೆಸುತ್ತಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *