ಬೆಂಗಳೂರು, (ಫೆಬ್ರವರಿ 23): ಕಾಂಗ್ರೆಸ್ ನಲ್ಲಿ (ಕಾಂಗ್ರೆಸ್) ನಾಯಕತ್ವ ಬದಲಾವಣೆ ಕಿಚ್ಚು ಕಾವೇರಿದೆ. ಸಿಎಂ ಸಿದ್ದರಾಮಯ್ಯ (ಸಿದ್ದರಾಮಯ್ಯ) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಬಣಗಳ ನಡುವೆ ತಂತ್ರ, ರಣತಂತ್ರ ಜೋರಾಗೇ ನಡೆಯುತ್ತಿವೆ. ಇದರ ಮಧ್ಯೆ ದಲಿತ ನಾಯಕರು ಸಿಎಂ ಕೂಗು ಕೇಳಿಬಂದಿದ್ದು, ಮೊನ್ನೆ ಅಷ್ಟೇ ದಲಿತ ನಾಯಕರು ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಗೊಂದಲ ಪರಿಹರಿಸಿ ಮುಂದಿನ ನಾಯಕತ್ವವನ್ನು ನಿರ್ಧರಿಸಿ ಎಂಬ ಮನವಿ ಮಾಡಲಾಗಿದೆ. ಈ ಅಧಿಕಾರ ಹಸ್ತಾಂತರದ ರಾಜಕೀಯ ಚಟುವಟಿಕೆಗಳ ನಡುವೆ ಸಂಪುಟ ಪುನಾರಚನೆ (ಸಚಿವ ಸಂಪುಟ ಪುನಾರಚನೆ) ಕೂಗು ಕೇಳಿಬಂದಿದೆ. ಮೊದಲ ಬಾರಿಗೆ ಗೆದ್ದಿರುವ ಕಾಂಗ್ರೆಸ್ ನ 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದು, ಸಂಪುಟ ವಿಸ್ತರಣೆ ಮಾಡಿ, ನಮಗೆ ಅವಕಾಶ ಕೊಡಿ ಎಂದು ಧ್ವನಿ ಎತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಕರ್ನಾಟಕ ಪ್ರವಾದಲ್ಲಿರುವಾಗಲೇ ಸಂಪುಟ ಪುನರ್ ರಚನೆ ದಾಳ ಉರುಳಿಸಿದ್ದು, ಭಾರೀ ಸಂಚಲನ ಮೂಡಿಸಿದೆ.
ಶಾಸಕರು ಬರೆದಿರುವ ಪತ್ರದ ಸಾರಾಂಶ
ಕಾಂಗ್ರೆಸ್ ನಿಂದ ಮೊದಲ ಬಾರಿ 38 ಶಾಸಕರು ಆಯ್ಕೆಯಾಗಿದ್ದಾರೆ. ಈ ಮೂಲಕ ಯುವಕರ ಅವಶ್ಯಕತೆ ಇದೆ ಎಂದು ಜನ ಹೇಳಿದ್ದಾರೆ. ಮೊದಲ ಬಾರಿ ಗೆದ್ದವರಿಗೆ ಸಚಿವ ಸ್ಥಾನ ನೀಡಿ ಜನಾದೇಶಕ್ಕೆ ಮನ್ನಣೆ ನೀಡಿ. ಯುವಕರಿಗೆ ಅವಕಾಶ ನೀಡುವುದು ಈ ಕ್ಷಣದ ಬೇಡಿಕೆಯಾಗಿದೆ. ಮೊದಲ ಬಾರಿ ಗೆದ್ದಿರುವ ಐವರು ಶಾಸಕರಿಗೆ ಸಚಿವ ಸ್ಥಾನ ನೀಡಿ. ಬೇರೆ ಸರ್ಕಾರದಲ್ಲಿ ಮೊದಲ ಬಾರಿ ಶಾಸಕರು ಸಿಎಂ ಆಗಿದ್ದಾರೆ. ಹೊಸಬರಿಗೆ ಅವಕಾಶ ನೀಡಿದ್ರೆ ಮುಂದಿನ ಚುನಾವಣೆ ಗೆಲ್ಲಲು ಸಹಕಾರಿಯಾಗಲಿದೆ. ಪಕ್ಷ ನಿಷ್ಠೆ, ಸೈದ್ಧಾಂತಿಕವಾಗಿ ಗಟ್ಟಿಯಾಗಿರುವವರಿಗೆ ಅವಕಾಶ ನೀಡಿ ಎಂದು ಶಾಸಕರು ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ.
ಇದನ್ನು ಓದಿ: ಅಧಿಕಾರ ಹಂಚಿಕೆ ಬಿಕ್ಕಟ್ಟು: ಕಾಂಗ್ರೆಸ್ ನಲ್ಲಿ ರೂಪುಗೊಳ್ಳುತ್ತಿದೆಯಾ ಮತ್ತೊಂದು ಪವರ್ ಸೆಂಟರ್!
ಹೈಕಮಾಂಡ್ಗೆ ಪತ್ರ ಬರೆದ ಕೈ ಶಾಸಕರು
ಶಾಸಕರಾದ ಎ.ಎಸ್.ಪೊನ್ನಣ್ಣ, ಭೀಮಸೇನ ಚಿಮ್ಮನಕಟ್ಟಿ, ಪ್ರದೀಪ್ ಈಶ್ವರ್, ಇಕ್ಬಾಲ್ ಹುಸೇನ್, ಎನ್.ಟಿ.ಶ್ರೀನಿವಾಸ, ಅಶೋಕ್ ಕುಮಾರ್ ರೈ, ಎನ್.ಶ್ರೀನಿವಾಸ, ದರ್ಶನ್ ಧ್ರುವನಾರಾಯಣ, ಶಿವಗಂಗಾ ಬಸವರಾಜು, ವಿಶ್ವಾಸ್ ವೈದ್ಯ, ನಾರಾ ಭರತ್ ರೆಡ್ಡಿ, ಪ್ರಕಾಶ್ ಕೋಳಿವಾಡ, ಕೆ.ಎಸ್.ಆನಂದ, ಮಂಥರ್ ಪಾಟೀಲ್, ಗೌಡ ಚಪ್ಪಾರೆಡ್ಡಿ ಡಿ.ರವಿಶಂಕರ್, ನಯನಾ ಮೋಟಮ್ಮ, ರಾಜಾವೇಣುಗೋಪಾಲ ನಾಯಕ, ಮಹೇಂದ್ರ ತಮ್ಮಣ್ಣನವರ್, ಎ.ಸಿ.ಶ್ರೀನಿವಾಸ, ಅಶೋಕ್ ಮನಗೂಳಿ, ಪಿ.ರವಿಕುಮಾರ್, ಬಾಬಾಸಾಹೇಬ್ ಪಾಟೀಲ್ ಸೇರಿ 31 ಶಾಸಕರು ಪತ್ರ ಬರೆದಿದ್ದಾರೆ.
ಸಂಪುಟ ಪುನರ್ ರಚನೆಯ ದಾಳ
ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಮತ್ತು ಗೊಂದಲಗಳು ಜೋರಾಗಿರುವ ಸಮಯದಲ್ಲೇ ದಲಿತ ಸಿಎಂ ಕೂಗು ಕೇಳಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ದಲಿತ ಸಿಎಂ ಕಾಂಗ್ರೆಸ್ನಿಂದ ಮಾತ್ರ’ ಎಂಬ ಸಂದೇಶ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಡಿಕೆ, ಸಿಎಂ ಪಟ್ಟದ ಜೋರಾಗಿ ಸಿದ್ದರಾಮಯ್ಯ ದಲಿತ ಸಿಎಂ ದಾಳ ಉರುಳಿಸಿದ್ರಾ ಎಂಬ ಚರ್ಚೆ ಶುರುವಾಗಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಈ ಎಲ್ಲಾ ಬೆಳವಣಿಗೆಗಳ ನಡುವೆ ಫಸ್ಟ್ ಟೈಮ್ ಶಾಸಕರ ಪತ್ರ ಕಾಂಗ್ರೆಸ್ ನಲ್ಲಿ ಹಲ್ ಚಲ್ ಎಬ್ಬಿಸಿದ್ದು, ಇದು ಯಾವ ಸ್ವರೂಪ ಪಡೆದುಕೊಳ್ಳಲಿದೆ ಎನ್ನುವುದೇ ಕುತೂಹಲ ಮೂಡಿಸಿದೆ.
ಒಟ್ಟಿನಲ್ಲಿ ಕಾಂಗ್ರೆಸ್ ಕೋಟೆಯಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಕಾವೇರಿದ ಮಧ್ಯೆ ದಲಿತ ಸಿಎಂ, ಸಂಪುಟ ಪುನಾರಚನೆ ಕೂಗು ಜೋರಾಗಿದ್ದರೆ, ಕರ್ನಾಟಕ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಹೀಗಾಗಿ ಈ ಎಲ್ಲಾ ವಿದ್ಯಮಾನಗಳು ಯಾವ ಹಂತಕ್ಕೆ ಹೋಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ