ಬೆಂಗಳೂರು, (ಫೆಬ್ರವರಿ 23): ಕರ್ನಾಟಕ ಸಾರಿಗೆ ನಿಗಮಗಳ ನೌಕರರ ಮುಷ್ಕರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ (ಕರ್ನಾಟಕ ಸರ್ಕಾರ) ವಿರುದ್ಧ ವೈದ್ಯರು (ವೈದ್ಯರು) ಸಿಡಿದೆದ್ದಿದ್ದಾರೆ. ಔಷಧ ಸರಬರಾಜು, ವೈದ್ಯರು ನೇಮಕ, ಬಡ್ತಿ ಸಹಿತ ನಾನಾ ಬೇಡಿಕೆ ಸಲ್ಲಿಸುವಂತೆ ಮುಷ್ಕರ (ಸ್ಟ್ರೈಕ್) ನಡೆಸಲು ಮುಂದಾಗಿದ್ದಾರೆ. ಹೌದು…ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮಾರ್ಚ್ 11 ರಿಂದ ಮುಷ್ಕರ ಆರಂಭವಾಗಲಿದೆ. ಹೀಗಾಗಿ ಮಾರ್ಚ್ 11ರಿಂದ 15ರವರೆಗೆ ಎಲ್ಲಾ ಜಿಲ್ಲಾ ಆಸ್ಪತ್ರೆ(ಜಿಲ್ಲಾ ಆಸ್ಪತ್ರೆಗಳು) ತಾಲೂಕಾಸ್ಪತ್ರೆ, ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಪ್ಪು ಪಟ್ಟಿ ಧರಿಸಿ ಮುಷ್ಕರ ನಡೆಸಲು ಮುಂದಾಗಿದೆ. ಹೀಗಾಗಿ ಮುಂದಿನ ತಿಂಗಳು ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ (ಆರೋಗ್ಯ ತುರ್ತು) ಉಂಟಾಗುವ ಸಾಧ್ಯತೆಯಿದೆ.