ಮುಸ್ಲಿಂ ಯುವಕರ ವಿವಾದಾತ್ಮಕ ಪೋಸ್ಟ್ ಸ್ಕ್ರೀನ್ಶಾಟ್ಚಿತ್ರದ ಕ್ರೆಡಿಟ್ ಮೂಲ: tv9
ಬಾಗಲಕೋಟೆ, ಫೆಬ್ರವರಿ 25: ಬಾಗಲಕೋಟೆ (ಬಾಗಲಕೋಟ) ಛತ್ರಪತಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲೆಸೆತ ಪ್ರಕರಣದ ಕಾವು ಆರುವ ಮುನ್ನವೇ ಸಾಮಾಜಿಕ ಜಾಲತಾಣ ಪೋಸ್ಟ್ನಿಂದ ಮತ್ತೊಂದು ವಿವಾದ ಸೃಷ್ಟಿಯಾಗಿದೆ. ಕೆಲವು ಮುಸ್ಲಿಂ ಯುವಕರು ಪಂಕಾ ಮಸೀದಿಯ ಭಾವಚಿತ್ರ ಹಾಗೂ ವಿಡಿಯೋವನ್ನು ಹಂಚಿಕೊಂಡು ಪ್ರಚೋದನಕಾರಿ ಪೋಸ್ಟ್ ಮಾಡಿರುವುದು ಗಮನಸೆಳೆದಿದೆ. ’15 ನಿಮಿಷಗಳು ಸುಮ್ಮನಿರಲಿ, ಇಸ್ಲಾಂ ಪವರ್ ತೋರಿಸುತ್ತೇವೆ’ ಎಂಬ ಅರ್ಥದ ಹೇಳಿಕೆಯನ್ನು ಪೋಸ್ಟ್ನಲ್ಲಿ ಉಲ್ಲೇಖಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕೆಲವು ವರ್ಷಗಳ ಹಿಂದೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ನಾಯಕ ಅಕ್ಬರುದ್ದಿನ್ ಒವೈಸಿ ನೀಡಿದ ವಿವಾದಾತ್ಮಕ ಭಾಷಣವನ್ನು ನೆನಪಿಸುತ್ತದೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಪೋಸ್ಟ್ ಬಗ್ಗೆ ಪೊಲೀಸರು ಗಮನ ಹರಿಸಿದ್ದು, ಕಾನೂನು ಕ್ರಮದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಚೋದನಕಾರಿ ಹೇಳಿಕೆಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆಯಿದೆ, ಜವಾಬ್ದಾರಿಯುತವಾಗಿ ವರ್ತಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡುತ್ತಾರೆ.
ಬಾಗಲಕೋಟೆ ಗಲಭೆ ಹಿನ್ನೆಲೆ
ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ಬಾಗಲಕೋಟೆಯಲ್ಲಿ ಫೆಬ್ರವರಿ 19 ರಾತ್ರಿ 10ಗಂಟೆ ವೇಳೆ ಶಿವಾಜಿ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಆಗ ಮೆರವಣಿಗೆ ಮೇಲೆ ಕಲ್ಲುಗಳು ಹಾಗೂ ಚಪ್ಪಲಿ ತೂರಲಾಯಿತು. ಇದು ಹಿಂದೂ ಕಾರ್ಯಕರ್ತರನ್ನು ಕೆರಳಿಸದೆ, ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಿತ್ತು. ನಂತರ ಕಲ್ಲು ತೂರಾಟ ಸಂಬಂಧ 8 ಆರೋಪಿಗಳನ್ನು ಬಂಧಿಸಿದ್ದರು.
ಇದನ್ನೂ ಓದಿ: ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಸಂಘಟನೆ
ಘಟನೆಯು ರಾಜಕೀಯ ಆಯಾಮವನ್ನು ಹೊಂದಿದೆ. ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದರು. ಹಿಂದೂ ಸಮುದಾಯವು ಫೆಬ್ರವರಿ 26 ರಂದು ದೊಡ್ಡ ಮಟ್ಟದ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ