ಮಲ್ಲಿಕಾರ್ಜುನ ಮುತ್ಯಾಚಿತ್ರದ ಕ್ರೆಡಿಟ್ ಮೂಲ: ಗೂಗಲ್
ಯಾದಗಿರಿ, ಫೆಬ್ರವರಿ 26: ಅಪ್ರಾಪ್ತ ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿದ ಹಿನ್ನೆಲೆ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ಸೇರಿದೆ. ಬಂಧನ ಭೀತಿ ಹಿನ್ನೆಲೆ ಪ್ರಕರಣ ದಾಖಲಾಗಿದ್ದು ಮುತ್ಯಾ ನಾಪತ್ತೆ, ತಲೆಮರೆಸಿಕೊಂಡಿರುವ ಸುದ್ದಿ ಹರಿದಾಡಿವೆ. ಘಟನೆಯ ಬಗ್ಗೆ ಮಕ್ಕಳ ಆಯೋಗ ಕೂಡ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಕಾರಣ ಸ್ವಯಂ ಘೋಷಿತ ದೇವಮಾನವನಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಪೊಲೀಸರಿಂದ ಸ್ಥಳ ಮಹಜರು
ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ ತಾಲೂಕಿನ ಗೋಗಿ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲು ಹಿನ್ನೆಲೆ ಮಹಲ್ ರೋಜಾದಲ್ಲಿರುವ ಮಠದಲ್ಲಿ ಸ್ಥಳ ಮಹಜರು ಕಾರ್ಯ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಸಮ್ಮುಖದಲ್ಲಿ ಮುತ್ಯಾ ಮಠದ ಎಲ್ಲಾ ಕೋಣೆಗಳಲ್ಲಿ ಮಹಜರು ನಡೆಸಲಾಯಿತು. ಪ್ರಕರಣದ ತನಿಖೆಗೆ ಶಹಾಪುರ ಸಿಪಿಐ ಶರಣಗೌಡ ನ್ಯಾಮಣ್ಣನವರ ನೇಮಕ ಮಾಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಮಲ್ಲಿಕಾರ್ಜುನ ಮುತ್ಯಾಗೆ ತಪಾಸಣೆ ನೋಟಿಸ್ ನೀಡಲಿದ್ದಾರೆ.
ಇದನ್ನೂ ಓದಿ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಮಕ್ಕಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು
ಭಕ್ತರ ಆತಂಕ
ಮಲ್ಲಿಕಾರ್ಜುನ ಮುತ್ಯಾನ ಮೇಲೆ ಪೋಕ್ಸೋ ಕೇಸ್ ಹಿನ್ನಲೆ ಮಠದ ಭಕ್ತರ ದಂಡೇ ಆಗಮಿಸುತ್ತಿದೆ. ಮುತ್ಯಾನ ಆಶೀರ್ವಾದದಿಂದ ನಮಗೆ ಒಳ್ಳೆಯದಾಗಿದೆ. ಅವರು ಆ ರೀತಿ ಕೆಲಸ ಮಾಡುವ ವ್ಯಕ್ತಿ ಅಲ್ಲ. ಮುತ್ಯಾ ಮತ್ತು ಮಠಕ್ಕೆ ಕಳಂಕ ತರುವ ಕೆಲಸ ನಡೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವನ್ನು ತಪ್ಪಾಗಿ ಬಿಂಬಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ತಾವು ಪೊಲೀಸ್ ದೂರು ನೀಡುತ್ತೇವೆ, ಕ್ರಮವಾಗದಿದ್ದರೆ ಮುಂದೇನು ಎಂಬ ಬಗ್ಗೆ ನಿರ್ಧಾರ ಮಾಡೋದಾಗಿ ಭಕ್ತರು.
‘ಮುತ್ಯಾ ಎಲ್ಲೂ ಪರಾರಿ ಆಗಿಲ್ಲ’
ವೈರಲ್ ಆಗಿರುವ ವಿಡಿಯೋದಲ್ಲಿರುವ ಅಪ್ರಾಪ್ತ ಬಾಲಕಿ ಪೋಷಕರಾದ ಮಲ್ಲಿಕಾರ್ಜುನ್ ಮುತ್ಯಾರು. ಹೀಗಾಗಿ ಮಠಕ್ಕೆ ಬಂದಾಗ ಬಾಲಕಿ ಜತೆ ಸಹೋದರನ ರೀತಿ ಪ್ರೀತಿ ತೋರಿದ್ದಾರೆ. ಮಗಳು ಖುಷಿಯಿಂದ ಇದ್ದ ಕಾರಣಕ್ಕೆ ಕುಟುಂಬ ಸಮೇತ ಮಠಕ್ಕೆ ಬಂದ ಬಾಲಕಿ ತಂದೆಯೇ ವಿಡಿಯೋ ಮಾಡಿದ್ದಾರೆ. ಆದರೆ ವಿಡಿಯೋವನ್ನು ಕೆಟ್ಟ ದೃಷ್ಟಿಯಿಂದ ಬಿಂಬಿಸಲಾಗಿದೆ. ನನ್ನ ಸಹೋದರನ ವಿರುದ್ಧ ಕೇಸ್ ದಾಖಲಿಸಿರುವುದನ್ನು ಖಂಡಿಸುತ್ತೇವೆ. ಮುತ್ಯಾ ಎಲ್ಲೂ ಪರಾರಿ ಆಗಿಲ್ಲ, ಬೇರೆ ಬೇರೆ ಮಠಗಳಿಗೆ ಹೋಗ್ತಿದ್ದಾರೆ. ನಾವು ತಪ್ಪು ಮಾಡಿಲ್ಲ ಎಂದ ಮೇಲೆ ಯಾಕೆ ಪರಾರಿ ಆಗುತ್ತೇವೆ ಎಂದು ಮಲ್ಲಿಕಾರ್ಜುನ ಮುತ್ಯಾ ಸಹೋದರ ಪರಶುರಾಮ ಮುತ್ಯಾ ಟಿವಿ9ಗೆ ದಿನಾಂಕ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.