ಮಂಗಳೂರು, ಫೆಬ್ರವರಿ 26: ವಿದ್ಯಾರ್ಥಿನಿಯರನ್ನ ಪ್ರತಿಭಟನೆ ಮಾಡಲು ಪ್ರೇರೇಪಿಸಿದ ಹಿನ್ನೆಲೆ ದಕ್ಷಿಣಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ಮಹಿಳಾ ಡಿಗ್ರಿ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾರನ್ನು ಅಮಾನತು ಮಾಡಿ ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿಯಿಂದ ಆದೇಶ ಹೊರಡಿಸಲಾಗಿದೆ. ತಾಲೂಕು ಸರ್ಕಾರಿ ಆಸ್ಪತ್ರೆ ಬಳಿಯೇ ಡಿಗ್ರಿ ಕಾಲೇಜು ಇದೆ. ಆಸ್ಪತ್ರೆ ಕಾಮಗಾರಿಯಲ್ಲಿ ತರಗತಿಯಲ್ಲಿ ಧೂಳು ಆಗುತ್ತಿದೆ. ಹೀಗಾಗಿ ಕಾಲೇಜಿನ ಅವ್ಯವಸ್ಥೆ ಖಂಡಿಸಿ ಕೆಲ ದಿನಗಳ ಹಿಂದೆ ರಸ್ತೆ ತಡೆ ವಿದ್ಯಾರ್ಥಿನಿಯರಿಂದ ಧರಣಿ ನಡೆದಿದೆ. ಕಾನೂನು ಉಲ್ಲಂಘನೆ, ಪ್ರತಿಭಟನೆಗೆ ಪ್ರೇರಣೆ ಆರೋಪದಡಿ ವೇದಶ್ರೀ ನಿಡ್ಯಾರನ್ನು ಅಮಾನತುಗೊಳಿಸಲಾಗಿದೆ. ಈ ಸಮಸ್ಯೆ ನನಗೆ ಏಕೆ ಹೇಳಿಲ್ಲ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕಿಡಿಕಾರಿದ್ದಾರೆ. ಪ್ರತಿಭಟನೆ ವೇಳೆ ಸ್ಥಳಕ್ಕೆ ಆಗಮಿಸಿದ ವೇಳೆ ಶಾಸಕ ಮತ್ತು ಕಾಲೇಜು ಪ್ರಾಂಶುಪಾಲೆ ಮಧ್ಯೆ ವಾಗ್ವಾದ ಉಂಟಾಗಿದ್ದು, ಇಬ್ಬರ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.