T20 World Cup: ಶ್ರೀಲಂಕಾ ವಿರುದ್ಧದ ನಿರ್ಣಾಯಕ ಪಂದ್ಯದಿಂದ ಬಾಬರ್ ಆಝಂ ಔಟ್

T20 World Cup: ಶ್ರೀಲಂಕಾ ವಿರುದ್ಧದ ನಿರ್ಣಾಯಕ ಪಂದ್ಯದಿಂದ ಬಾಬರ್ ಆಝಂ ಔಟ್


ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ಟಿ20 ಸೂಪರ್ 8 ಸುತ್ತಿನ ನಿರ್ಣಾಯಕ ಪಂದ್ಯ ನಡೆಯುತ್ತಿದೆ. ಪಲ್ಲೆಕೆಲೆಯಲ್ಲಿ ನಡೆಯುತ್ತಿರುವ ಈ ಪಂದ್ಯ ಶ್ರೀಲಂಕಾಗೆ ಕೇವಲ ಔಪಚಾರಿಕವಾಗಿದೆ. ಏಕೆಂದರೆ ಈ ಸುತ್ತಿನಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿರುವ ಶ್ರೀಲಂಕಾ ತಂಡ ಸೆಮಿಫೈನಲ್ ರೇಸ್ ನಿಂದ ಹೊರಬಿದ್ದಿದೆ. ಆದರೆ ಪಾಕಿಸ್ತಾನಕ್ಕೆ ಸೆಮಿಫೈನಲ್ ಗೇರುವ ಅವಕಾಶವಿದೆ. ಹೀಗಾಗಿ ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿದಿರುವ ಪಾಕ್ ತಂಡವು 11 ರಲ್ಲಿ ಬದಲಾಗುತ್ತಿದೆ. ಪ್ರಮುಖವಾಗಿ ಮಾಜಿ ನಾಯಕ ಬಾಬರ್ ಆಝಂರನ್ನು ಈ ನಿರ್ಣಾಯಕ ಪಂದ್ಯದಿಂದ ಹೊರಗಿಡಲಾಗಿದೆ.

ಟಾಸ್ ಗೆದ್ದ ಶ್ರೀಲಂಕಾ

ಈ ಆಟದ ಟಾಸ್ ಗೆದ್ದ ಶ್ರೀಲಂಕಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಪಾಕಿಸ್ತಾನ ತಂಡದಲ್ಲಿ ಮೂರು ಬದಲಾವಣೆಗಳನ್ನು ಮಾಡಲಾಗಿದೆ. ಅದರಂತೆ ಮಾಜಿ ನಾಯಕ ಬಾಬರ್ ಆಝಂ, ಸೈಮ್ ಅಯೂಬ್ ಮತ್ತು ಸಲ್ಮಾನ್ ಮಿರ್ಜಾ ಅವರನ್ನು ಈ ಪಂದ್ಯದಿಂದ ಕೈಬಿಡಲಾಗಿದೆ. ಮತ್ತೊಂದೆಡೆ ಶ್ರೀಲಂಕಾ ಕೂಡ ಎರಡು ಬದಲಾವಣೆಗಳನ್ನು ಮಾಡಿದೆ.

ಪಾಕ್ ಸೆಮೀಸ್ ಗೇರಬೇಕೆಂದರೆ ಏನು ಮಾಡಬೇಕು?

ಪಾಕಿಸ್ತಾನ ತಂಡ ಸೆಮಿಫೈನಲ್‌ಗೆ ಅರ್ಹತೆ ಪಡೆಯಬೇಕೆಂದರೆ, ಶ್ರೀಲಂಕಾ ವಿರುದ್ಧ ಮೊದಲು ಬ್ಯಾಟ್ ಮಾಡಿ 160 ರನ್ ಗಳಿಸಿದರೆ, ಪಂದ್ಯವನ್ನು 64 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳಿಂದ ಗೆಲ್ಲಲಾಗುತ್ತದೆ. ಪಾಕಿಸ್ತಾನ ಮೊದಲು ಬೌಲಿಂಗ್ ಮಾಡಿ, ಶ್ರೀಲಂಕಾವನ್ನು 160 ರನ್‌ಗಳಿಗೆ ಕಟ್ಟಿಹಾಕಿದರೆ, ಪಂದ್ಯವನ್ನು 40+ ಪಂದ್ಯಗಳಲ್ಲಿ ಅಥವಾ 13.1 ಪಂದ್ಯಗಳಲ್ಲಿ ಗೆದ್ದುಕೊಳ್ಳಬೇಕು. ಒಂದು ವೇಳೆ ಪಾಕಿಸ್ತಾನವು ವಿಫಲವಾದರೆ, ನ್ಯೂಜಿಲೆಂಡ್ ಉತ್ತಮ ನೆಟ್ ರನ್ ರೇಟ್ ಆಧಾರದ ಮೇಲೆ ಸೆಮಿಫೈನಲ್ಗೆ ಅರ್ಹತೆ ಪಡೆಯುತ್ತದೆ.

ಉಭಯ ತಂಡಗಳು

ಪಾಕಿಸ್ತಾನ ತಂಡ: ಸಾಹಿಬ್ಜಾದಾ ಫರ್ಹಾನ್, ಫಖರ್ ಜಮಾನ್, ಸಲ್ಮಾನ್ ಅಘಾ (ನಾಯಕ), ಖವಾಜಾ ನಫೆ, ಉಸ್ಮಾನ್ ಖಾನ್ (ವಿಕೆಟ್ ಕೀಪರ್), ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಅಬ್ರಾರ್ ಅಹ್ಮದ್, ಉಸ್ಮಾನ್ ತಾರಿಕ್.

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕಮಿಲ್ ಮಿಶ್ರಾ (ವಿಕೆಟ್ ಕೀಪರ್), ಚರಿತ್ ಅಸಲಂಕ, ಪವನ್ ರತ್ನಾಯಕೆ, ಕಮಿಂದು ಮೆಂಡಿಸ್, ದಸುನ್ ಶನಕ (ನಾಯಕ), ಜನಿತ್ ಲಿಯಾನಗೆ, ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷ್ಣ, ದುಷ್ಮಂತ ಚಮೀರ, ದಿಲ್ಶನ್ ಮಧುಶಂಕ.



Source link

Leave a Reply

Your email address will not be published. Required fields are marked *