Headlines

Raichur: ಓವರ್‌ಟೇಕ್ ದುರಂತ; ಆಟೋದಿಂದ ಕೆಳಗೆ ಬಿದ್ದ ಯುವಕನ ಮೇಲೆ ಹರಿದ ಸಾರಿಗೆ ಬಸ್

Raichur: ಓವರ್‌ಟೇಕ್ ದುರಂತ; ಆಟೋದಿಂದ ಕೆಳಗೆ ಬಿದ್ದ ಯುವಕನ ಮೇಲೆ ಹರಿದ ಸಾರಿಗೆ ಬಸ್



Raichur: ಓವರ್‌ಟೇಕ್ ದುರಂತ; ಆಟೋದಿಂದ ಕೆಳಗೆ ಬಿದ್ದ ಯುವಕನ ಮೇಲೆ ಹರಿದ ಸಾರಿಗೆ ಬಸ್
<p>ರಾಯಚೂರು ನಗರದಲ್ಲಿ ವೇಗವಾಗಿ ಚಲಿಸುತ್ತಿದ್ದ ಆಟೋದಿಂದ ಕೆಳಗೆ ಬಿದ್ದ 21 ವರ್ಷದ ಯುವಕನ ಮೇಲೆ ಬಸ್ ಹರಿದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಓವರ್‌ಟೇಕ್ ಮಾಡುವ ಭರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದ ಸಂಪೂರ್ಣ ದೃಶ್ಯ ಬಸ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p><img><p>ವೇಗವಾಗಿ ಚಲಿಸುತ್ತಿದ್ದ ಆಟೋದಿಂದ ಕೆಳಗೆ ಬಿದ್ದ ಯುವಕನ ಮೇಲೆ ಬಸ್ ಹರಿದ ಪರಿಣಾಮ 21 ವರ್ಷದ ಯುವಕನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಭೀಕರ ಅಪಘಾತದ ದೃಶ್ಯಗಳು ಬಸ್‌ನ ಕ್ಯಾಮೆರಾದಲ್ಲಿ ಸೆರೆಯಾಗಿವೆ.</p><img><p>ರಾಯಚೂರು ನಗರದ ಸ್ಟೇಶನ್ ರಸ್ತೆಯಲ್ಲಿ ಭೀಕರ ಅಪಘಾತ ನಡೆದಿದೆ. ದೇಹದ ಮೇಲೆ ಬಸ್‌ ಚಕ್ರಗಳು ಚಲಿಸಿದ ಪರಿಣಾಮ 21 ವರ್ಷದ ಬಸವರಾಜ್ ಪ್ರಾಣಪಕ್ಷಿ ಕ್ಷಣಾರ್ಧದಲ್ಲೇ ಹಾರಿ ಹೋಗಿದೆ. ಆಟೋ ಹಿಂಭಾಗದ ಆಸನದಲ್ಲಿ ಬಸವರಾಜ್ ಕುಳಿತಿದ್ದನು.</p><img><p>ಆಟೋ ಆಶಾಪುರ ರಸ್ತೆಯಿಂದ ಬಸವೇಶ್ವರ ವೃತ್ತದ ಮಾರ್ಗವಾಗಿ ಹೊರಟಿತ್ತು. ಈ ವೇಳೆ ರಸ್ತೆಯ ಎಡ ಬದಿಯಲ್ಲಿ ಮತ್ತೊಂದು ಆಟೋ ನಿಂತಿತ್ತು. ಈ ವೇಳೆ ಚಲಿಸುತ್ತಿದ್ದ ಆಟೋ ವೇಗವಾಗಿ ಬಲಭಾಗದಲ್ಲಿದ್ದ ಬಸ್‌ ಓವರ್‌ ಟೇಕ್ ಮಾಡಿದೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಆಟೋ ಕೊಂಚ ವಾಲಿದೆ. ಇದರಿಂದ ಹಿಂದೆ ಕುಳಿತಿದ್ದ ಬಸವರಾಜ್ ರಸ್ತೆ ಮೇಲೆ ಬಿದ್ದಿದ್ದಾನೆ.</p><img><p>ಆಟೋ ಹಿಂದೆಯೇ ಬರುತ್ತಿದ್ದ ಬಸ್ ಬಸವರಾಜ್ ಮೇಲೆ ಹರಿದಿದೆ. ಕ್ಷಣಾರ್ಧದಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ಎಲ್ಲಾ ದೃಶ್ಯಗಳು ಬಸ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.</p><p><strong>ಇದನ್ನೂ ಓದಿ: </strong><strong>ಹಟ್ಟಿ ಗೋಲ್ಡ್ ಮೈನ್ಸ್‌ ಎದುರು ಸ್ಫೋಟಕಗಳ ರಾಶಿ!: ಸಿಸಿಟಿವಿಯಲ್ಲಿ ಕಂಡ ನಂಬರ್ ಪ್ಲೇಟ್ ಇಲ್ಲದ ಆ ನಿಗೂಢ ಬೈಕ್ ಯಾರದ್ದು?</strong></p><img><p>ಮೃತ ಬಸವರಾಜ್ ಕುಟುಂಬಸ್ಥರು ಬಸ್ ಚಾಲಕನ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಪಘಾತ ಸಂಬಂಧ ಪೊಲೀಸರು ಬಸ್‌ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸಾರಿಗೆ ಇಲಾಖೆ ಪರಿಹಾರ ನೀಡಬೇಕೆಂದು ಬಸವರಾಜ್ ಕುಟುಂಬಸ್ಥರು ಆಗ್ರಹಿಸಿದ್ದಾರೆ.</p><p><strong>ಇದನ್ನೂ ಓದಿ: </strong><strong>ರಾಯಚೂರು: ರಾಷ್ಟ್ರ ಧ್ವಜ ಮತ್ತು ಭಗವದ್ಗೀತೆಗೆ ಚಪ್ಪಲಿ ಹಾಕಿ ಮೆಟ್ಟಿ ಅವಮಾನ, ಸ್ಟೇಟಸ್ ಶೋಕಿ ತೋರಿದ ಇಬ್ಬರು ಅರೆಸ್ಟ್</strong></p>



Source link

Leave a Reply

Your email address will not be published. Required fields are marked *