ಚಿಕ್ಕಬಳ್ಳಾಪುರ, (ಮಾರ್ಚ್ 01): ಅಮೆರಿಕ – ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ (ಅಯತೊಲ್ಲಾ ಖಮೇನಿ) ಸಾವಿನ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದ (ಅಲಿಪುರ ಗ್ರಾಮ) ನೀರವ ಮೌನ ಆವರಿಸಿದೆ. ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. 3 ದಿನಗಳ ಕಾಲ `ಬ್ಲಾಕ್ ಡೇ` (ಕರಾಳ ದಿನ) ಆಚರಣೆ ಮಾಡಲು ತೀರ್ಮಾನಿಸಲಾಗಿದೆ.
ಬೇಬಿ ಅಪ್ ಇರಾನ್ ಆಟೊಲೇ ಕರೆಸಿಕೊಳ್ಳುವ ಅಲೀಪುರ ಗ್ರಾಮಕ್ಕೆ 1986 ರಲ್ಲಿ ಖಮೇನಿ ಭೇಟಿ ನೀಡಿದ್ದರು. ಹೆಸ್ರಲ್ಲಿ ಆಸ್ಪತ್ರೆ ಸಹ ಈ ಗ್ರಾಮದಲ್ಲಿದೆ. ಖಮೇನಿ ಅಂದ್ರೆ ಜನರಿಗೆ ಪೂಜ್ಯ ಮತ್ತು ಗೌರವ ಭಾವ. ಆದ್ದರಿಂದ ಅವರ ಸಾವಿನ ಸುದ್ದಿಯಿಂದ ಅಲೀಪುರ ಸ್ತಬ್ಧವಾಗಿದೆ. ಇನ್ನೂ ಅಲೀಪುರದ ಕೆಲವರು ಧಾರ್ಮಿಕ ಶಿಕ್ಷಣ ಪಡೆಯುವ ಸಲುವಾಗಿ ಇರಾನ್ ನಲ್ಲಿ ನೆಲೆಸಿದ್ದಾರೆ. ಕೆಲ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದಾರೆ. ಇರಾನ್ನಲ್ಲಿ ಯುದ್ಧ (ಇರಾನ್ನಲ್ಲಿ ಯುದ್ಧ) ಸಂಭವಿಸಿದಾಗಲೆಲ್ಲಾ ಭಾರತೀಯ ಜನರ ಹೃದಯ ಕಲುಕುತ್ತದೆ. ತಮ್ಮವರಿಗೆ ಏನಾಯ್ತೋ ಅನ್ನೋ ಆತಂಕ ಮನೆ ಮಾಡುತ್ತೆ. ಸದ್ಯ ಅಲೀಪುರ ಗ್ರಾಮ ಮೌನಕ್ಕೆ ಜಾರಿದ್ದು, ಸ್ಥಳೀಯ ಜನ ಕಣ್ಣೀರು ಹಾಕುತ್ತಿದ್ದಾರೆ.