ಬೆಂಗಳೂರು–ಅಶೋಕಪುರಂ ಮೆಮು ರೈಲು ವಿಳಂಬ, ಬಿಡದಿಯಲ್ಲಿ ಪ್ರಯಾಣಿಕರ ಪ್ರತಿಭಟನೆ, ಲಘು ಲಾಠಿ ಚಾರ್ಜ್! | Bengaluru Ashokapuram Memu Train Delayed By 90 Minutes Passengers Protest At Bidadi Station

ಬೆಂಗಳೂರು–ಅಶೋಕಪುರಂ ಮೆಮು ರೈಲು ವಿಳಂಬ, ಬಿಡದಿಯಲ್ಲಿ ಪ್ರಯಾಣಿಕರ ಪ್ರತಿಭಟನೆ, ಲಘು ಲಾಠಿ ಚಾರ್ಜ್! | Bengaluru Ashokapuram Memu Train Delayed By 90 Minutes Passengers Protest At Bidadi Station



ಬೆಂಗಳೂರು–ಅಶೋಕಪುರಂ ಮೆಮು ರೈಲು ವಿಳಂಬ, ಬಿಡದಿಯಲ್ಲಿ ಪ್ರಯಾಣಿಕರ ಪ್ರತಿಭಟನೆ, ಲಘು ಲಾಠಿ ಚಾರ್ಜ್! | Bengaluru Ashokapuram Memu Train Delayed By 90 Minutes Passengers Protest At Bidadi Station

ಬೆಂಗಳೂರು–ಅಶೋಕಪುರಂ ಮೆಮು ರೈಲು ತಾಂತ್ರಿಕ ದೋಷದಿಂದ ಸುಮಾರು ಒಂದೂವರೆ ಗಂಟೆ ವಿಳಂಬವಾದ ಹಿನ್ನೆಲೆಯಲ್ಲಿ, ಬಿಡದಿ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ತೀವ್ರ ಪ್ರತಿಭಟನೆ ನಡೆಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ.

ಬೆಂಗಳೂರು–ಅಶೋಕಪುರಂ ನಡುವಿನ ಮೆಮು (MEMU) ರೈಲು ಸುಮಾರು ಒಂದೂವರೆ ಗಂಟೆಗಳ ಕಾಲ ವಿಳಂಬವಾದ ಘಟನೆ ಸೋಮವಾರ ಪ್ರಯಾಣಿಕರಲ್ಲಿ ಭಾರೀ ಅಸಮಾಧಾನಕ್ಕೆ ಕಾರಣವಾಯಿತು. ತಾಂತ್ರಿಕ ದೋಷದಿಂದ ರೈಲು ಮಾರ್ಗದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ರೈಲು ಮಧ್ಯದಲ್ಲೇ ನಿಂತುಕೊಂಡಿದ್ದು, ಸಮಯಕ್ಕೆ ತಲುಪಬೇಕಿದ್ದ ನೂರಾರು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.

ರೈಲು ಅಧಿಕಾರಿಗಳ ವಿರುದ್ಧ ಪ್ರತಿಭಟನೆ

ವಿಳಂಬದಿಂದ ಬೇಸತ್ತ ಪ್ರಯಾಣಿಕರು ಬಿಡದಿ ರೈಲ್ವೆ ನಿಲ್ದಾಣದಲ್ಲಿ ರೈಲು ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು. ಕೆಲವರು ಟ್ರ್ಯಾಕ್‌ಗೆ ಇಳಿದು ಘೋಷಣೆಗಳನ್ನು ಕೂಗುತ್ತಾ ತಕ್ಷಣ ಪರ್ಯಾಯ ರೈಲು ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು. “ಒಂದೂವರೆ ಗಂಟೆಗಳಾದರೂ ರೈಲು ಮುಂದುವರಿಯದೆ ನಿಂತಿರುವುದು ಅಸಹನೀಯ. ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಮಹಿಳೆಯರು ಸಂಕಷ್ಟದಲ್ಲಿದ್ದಾರೆ” ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು.

ರೈಲು ಟ್ರ್ಯಾಕ್ ಸಮಸ್ಯೆಯಿಂದ ನಿಂತಿರುವುದಾಗಿ ತಿಳಿಸಿದ ರೈಲ್ವೆ ಅಧಿಕಾರಿಗಳು, ಅರ್ಧಗಂಟೆಯೊಳಗೆ ದೋಷ ಸರಿಪಡಿಸಿ ರೈಲು ಸಂಚಾರ ಪುನಾರಂಭಿಸುವ ಭರವಸೆ ನೀಡಿದರು. ಈ ವೇಳೆ ಪ್ರಯಾಣಿಕರು ಮತ್ತು ಅಧಿಕಾರಿಗಳ ನಡುವೆ ತೀವ್ರ ವಾಗ್ವಾದ ನಡೆಯಿತು. ಪರಿಸ್ಥಿತಿ ನಿಯಂತ್ರಣ ತಪ್ಪುವ ಲಕ್ಷಣ ಕಂಡಾಗ ಬಿಡದಿ ಪೊಲೀಸರು ಸ್ಥಳಕ್ಕೆ ಧಾವಿಸಿ ಟ್ರ್ಯಾಕ್ ಒಳಗೆ ಇಳಿದಿದ್ದ ಪ್ರತಿಭಟನಾಕಾರರನ್ನು ತೆರವುಗೊಳಿಸಲು ಲಘು ಲಾಠಿ ಚಾರ್ಜ್ ನಡೆಸಿದರು.

ಶಾಶ್ವತ ಪರಿಹಾರಕ್ಕೆ ಆಗ್ರಹ

ಲಘು ಲಾಠಿ ಚಾರ್ಜ್ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಟ್ರ್ಯಾಕ್ ದೋಷವನ್ನು ಸರಿಪಡಿಸುವ ಕಾರ್ಯ ಆರಂಭಿಸಲಾಯಿತು. ರೈಲ್ವೆ ಅಧಿಕಾರಿಗಳು ಪ್ರಯಾಣಿಕರ ಸುರಕ್ಷತೆಯೇ ಮೊದಲ ಆದ್ಯತೆ ಎಂದು ಸ್ಪಷ್ಟಪಡಿಸಿ, ಶೀಘ್ರದಲ್ಲೇ ರೈಲು ಸಂಚಾರವನ್ನು ಪುನಃ ಆರಂಭಿಸುವುದಾಗಿ ತಿಳಿಸಿದರು. ಆದರೆ, ಮತ್ತೆ ಮತ್ತೆ ಇಂತಹ ವಿಳಂಬಗಳು ಸಂಭವಿಸುತ್ತಿರುವುದಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕು ಎಂದು ಪ್ರಯಾಣಿಕರು ಆಗ್ರಹಿಸಿದರು. ಈ ಘಟನೆಯಿಂದ ಬೆಂಗಳೂರು–ಮೈಸೂರು ಮಾರ್ಗದ ಪ್ರಯಾಣಿಕರು ಕೆಲಕಾಲ ಅಸ್ತವ್ಯಸ್ತತೆಗೆ ಒಳಗಾಗಿದ್ದು, ರೈಲ್ವೆ ವ್ಯವಸ್ಥೆಯ ಮೇಲಿನ ಅಸಮಾಧಾನ ಮತ್ತೆ ವ್ಯಕ್ತವಾಯಿತು.



Source link

Leave a Reply

Your email address will not be published. Required fields are marked *