Headlines

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ; ಭಾರತದಲ್ಲಿ ಕೋಮುಗಲಭೆ ಸಾಧ್ಯತೆ, ರಾಜ್ಯಗಳಿಗೆ MHA ಹೈ ಅಲರ್ಟ್! | Mha Issues Nationwide Alert Over Communal Tensions After Us Israel Strikes On Iran Mrq

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ; ಭಾರತದಲ್ಲಿ ಕೋಮುಗಲಭೆ ಸಾಧ್ಯತೆ, ರಾಜ್ಯಗಳಿಗೆ MHA ಹೈ ಅಲರ್ಟ್! | Mha Issues Nationwide Alert Over Communal Tensions After Us Israel Strikes On Iran Mrq


Communal violence risk in India: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯ ನಂತರ, ಭಾರತದಲ್ಲಿ ಕೋಮುಗಲಭೆಗಳು ಸಂಭವಿಸುವ ಸಾಧ್ಯತೆಯ ಬಗ್ಗೆ ಕೇಂದ್ರ ಗೃಹ ಸಚಿವಾಲಯವು ರಾಜ್ಯಗಳಿಗೆ ಹೈ ಅಲರ್ಟ್ ಘೋಷಿಸಿದೆ. 

ನವದೆಹಲಿ: ಇತ್ತೀಚೆಗೆ ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಸೇನಾ ದಾಳಿ ನಡೆಸಿದ ಹಿನ್ನೆಲೆಯಲ್ಲಿ, ಭಾರತದಲ್ಲಿ ಕೋಮುಗಲಭೆಗಳು ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಎಚ್ಚರದಿಂದ ಇರುವಂತೆ ಕೇಂದ್ರ ಗೃಹ ಸಚಿವಾಲಯ (MHA) ಎಲ್ಲಾ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆಯ ಪತ್ರ ರವಾನಿಸಿದೆ. ಫೆಬ್ರವರಿ 28 ರಂದು ಕಳುಹಿಸಲಾದ ಈ ಪತ್ರದಲ್ಲಿ, ವಿದೇಶಿ ಬೆಳವಣಿಗೆಗಳು ದೇಶದ ಮೇಲೂ ‘ಸರಣಿ ಪರಿಣಾಮ’ (ripple effects) ಬೀರಬಹುದು ಎಂದು ಎಚ್ಚರಿಸಲಾಗಿದೆ. ಧಾರ್ಮಿಕ ಸಭೆಗಳಲ್ಲಿ ಪ್ರಚೋದನಕಾರಿ ಭಾಷಣಗಳ ಮೂಲಕ ಗಲಭೆ ಸೃಷ್ಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಗೃಹ ಸಚಿವಾಲಯವು ತನ್ನ ಸಲಹೆಯಲ್ಲಿ, ‘ಇರಾನ್ ಪರ ಇರುವ ಮೂಲಭೂತವಾದಿ ಧರ್ಮಗುರುಗಳು ಪ್ರಚೋದನಕಾರಿ ಭಾಷಣ ಮಾಡುವುದನ್ನು’ ಪತ್ತೆ ಹಚ್ಚಿ, ಅವರ ಮೇಲೆ ನಿಗಾ ಇಡುವಂತೆ ರಾಜ್ಯ ಅಧಿಕಾರಿಗಳಿಗೆ ಸೂಚಿಸಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ತಡೆಯಲು ಗುಪ್ತಚರ ಮಾಹಿತಿ ಹಂಚಿಕೆ ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ತೀವ್ರಗೊಳಿಸುವಂತೆ ತಿಳಿಸಿದೆ.

ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್‌ನ ನಗರಗಳು ಮತ್ತು ಸೇನಾ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಿವೆ ಎಂದು ವರದಿಯಾಗಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಹೆಚ್ಚಾಗಿದೆ. ಈ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಗೃಹ ಸಚಿವಾಲಯ ಈ ಎಚ್ಚರಿಕೆ ನೀಡಿದೆ.

ಭಾರತದ ಎಚ್ಚರಿಕೆಯ ಹೆಜ್ಜೆ

ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಭಾರತ, ಎಲ್ಲಾ ಕಡೆಯವರು ಸಂಯಮದಿಂದ ವರ್ತಿಸಬೇಕು ಎಂದು ಒತ್ತಾಯಿಸಿದೆ. ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ತನ್ನ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ ಎಂದು ಹೇಳಿದೆ. ನವದೆಹಲಿಯ ಅಧಿಕಾರಿಗಳು ಈ ಪರಿಸ್ಥಿತಿಯನ್ನು ರಾಜತಾಂತ್ರಿಕ ದೃಷ್ಟಿಯಿಂದ ಮಾತ್ರವಲ್ಲದೆ, ದೇಶದೊಳಗಿನ ಭದ್ರತೆಯ ದೃಷ್ಟಿಯಿಂದಲೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅಂತರಾಷ್ಟ್ರೀಯ ಘಟನೆಗಳಿಂದ ಉಂಟಾಗುವ ಭಾವನಾತ್ಮಕ ಸನ್ನಿವೇಶವನ್ನು ಭಾರತದಲ್ಲಿರುವ ಉಗ್ರಗಾಮಿ ಸಂಘಟನೆಗಳು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಖಮೇನಿ ಸಾವಿನ ಬಳಿಕ ಮತ್ತೆ ಸುದ್ದಿಯಾಗುತ್ತಿದೆ ಇರಾನ್‌ ನಾಯಕನಿಗೆ ಇದ್ದ ಭಾರತದ ಕನೆಕ್ಷನ್

ಹೀಗಾಗಿ, ಸೂಕ್ಷ್ಮ ಸಮಯದಲ್ಲಿ ‘ಕೋಮು ಭಾವನೆಗಳನ್ನು ಕೆರಳಿಸುವ’ ಭಾಷಣ ಮತ್ತು ಧರ್ಮೋಪದೇಶಗಳ ಮೇಲೆ ವಿಶೇಷ ಗಮನ ಹರಿಸುವಂತೆ ರಾಜ್ಯಗಳಿಗೆ ಸೂಚಿಸಲಾಗಿದೆ. ಭಾರತದಂತಹ ವೈವಿಧ್ಯಮಯ ಸಮಾಜದಲ್ಲಿ, ಇಂತಹ ಅಂತರಾಷ್ಟ್ರೀಯ ಘಟನೆಗಳು ದೇಶೀಯ ಸಮುದಾಯಗಳ ಮೇಲೆ ಬೇಗನೆ ಪರಿಣಾಮ ಬೀರುತ್ತವೆ. ಇದನ್ನು ಎಚ್ಚರಿಕೆಯಿಂದ ನಿರ್ವಹಿಸದಿದ್ದರೆ, ಉದ್ವಿಗ್ನತೆ ವೇಗವಾಗಿ ಹೆಚ್ಚಾಗುವ ಅಪಾಯವಿದೆ ಎಂದು ಭದ್ರತಾ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕನ್ನಡಿಗರ ನೆರವಿಗೆ 24*7 ಹೆಲ್ಪ್‌ಲೈನ್, ಕನ್ನಡಿಗರನ್ನು ಸುರಕ್ಷಿತವಾಗಿ ಕರೆತನ್ನಿ: ಕೇಂದ್ರಕ್ಕೆ ರಾಜ್ಯ ಪತ್ರ

YouTube video player



Source link

Leave a Reply

Your email address will not be published. Required fields are marked *