ಬೆಂಗಳೂರಿನಿಂದ ವಿದೇಶಕ್ಕೆ ಹೋಗುವ, ಬರುವ ಒಟ್ಟು 24 ವಿಮಾನಗಳು ರದ್ದು: ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

ಬೆಂಗಳೂರಿನಿಂದ ವಿದೇಶಕ್ಕೆ ಹೋಗುವ, ಬರುವ ಒಟ್ಟು 24 ವಿಮಾನಗಳು ರದ್ದು: ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ


ದೇವನಹಳ್ಳಿ, ಮಾ.2 : ಇರಾನ್ ಮತ್ತು ಇಸ್ರೇಲ್ ನಡುವೆ ತಾರಕಕ್ಕೇರಿರುವ ಯುದ್ಧ ಪಶ್ಚಿಮ ಏಷ್ಯಾದ ವಾಯುನೆಲೆಗಳನ್ನು ಮುಚ್ಚಲಾಗಿದೆ. ಇದರ ನೇರ ಪರಿಣಾಮ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬೀರಿದ್ದು, ಇಂದು ಸಹ ಸರಣಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರಿನಿಂದ ವಿದೇಶಕ್ಕೆ ತೆರಳಬೇಕಿದ್ದ 09 ವಿಮಾನಗಳು ಹಾಗೂ ವಿದೇಶದಿಂದ ಆಗಮಿಸಬೇಕಿದ್ದ 15 ವಿಮಾನಗಳು ಸೇರಿದಂತೆ ಒಟ್ಟು 24 ವಿಮಾನಗಳ ಸಂಚಾರವನ್ನು ಇಂದು ರದ್ದುಗೊಳಿಸಲಾಗಿದೆ. ಅಬುಧಾಬಿ, ಜಿದ್ದಾ, ದೋಹಾ, ದುಬೈ ಮತ್ತು ಬಹ್ರೇನ್ ಸೇರಿದಂತೆ ಮಧ್ಯಪ್ರಾಚ್ಯದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ವಿಮಾನಗಳು ರದ್ದಾಗಿವೆ. ಏರ್ ಇಂಡಿಯಾ, ಎಮಿರೇಟ್ಸ್, ಇಂಡಿಗೋ ಮತ್ತು ಖತಾರ್ ಏರ್ವೇಸ್ ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ. ರದ್ದಾದ ವಿಮಾನಗಳಲ್ಲಿ ಟಿಕೆಟ್ ಬುಕ್ ಮಾಡಿದ ಪ್ರಯಾಣಿಕರಿಗೆ ಟಿಕೆಟ್ ಮರು ಬುಕ್ಕಿಂಗ್ ಅಥವಾ ಪೂರ್ಣ ಹಣ ವಾಪಸು (ಮರುಪಾವತಿ) ಪಡೆಯಲು ವಿಮಾನಯಾನ ಸಂಸ್ಥೆಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಯುದ್ಧದ ಪರಿಸ್ಥಿತಿಯಿಂದಾಗಿ ವಿಮಾನಗಳ ಹಾರಾಟ ಅನಿಶ್ಚಿತವಾಗಿದೆ. ಹೀಗಾಗಿ ಪ್ರಯಾಣಿಕರು ತಮ್ಮ ವಿಮಾನದ ಸ್ಥಿತಿಗತಿಯನ್ನು (ಫ್ಲೈಟ್ ಸ್ಥಿತಿ) ಅಧಿಕೃತವಾಗಿ ಖಚಿತಪಡಿಸಿಕೊಳ್ಳದೆ ವಿಮಾನ ನಿಲ್ದಾಣಕ್ಕೆ ಬರಬಾರದು ಎಂದು ಆಡಳಿತ ಮಂಡಳಿ ವಿನಂತಿಸಿದೆ. ಸಹಾಯಕ್ಕಾಗಿ ಸಾಮಾಜಿಕ ಜಾಲತಾಣ ಮತ್ತು ಏರ್‌ಪೋರ್ಟ್‌ನಲ್ಲಿ ಹೆಲ್ಪ್‌ಡೆಸ್ಕ್ ತೆರೆಯಲಾಗಿದೆ. ಇನ್ನು ದುಬೈನಲ್ಲಿ ಒಟ್ಟು 100 ಮಂದಿ ಕನ್ನಡಿಗರು ಸಿಲುಕಿದ್ದಾರೆ. ಬಳ್ಳಾರಿಯ 32 ಮಂದಿ, ಬೆಂಗಳೂರಿನ 25 ಮಂದಿ, ದಾವಣಗೆರೆ 9 ಮಂದಿ, ಚಿಕ್ಕಮಗಳೂರಿನ 5 ಮಂದಿ, ವಿಜಯಪುರದ 4 ಮಂದಿ, ಕೊಡಗಿನ 4 ಮಂದಿ, ದಕ್ಷಿಣ ಕನ್ನಡದ 3 ಮಂದಿ, ಶಿವಮೊಗ್ಗದ 3 ಮಂದಿ, ರಾಯಚೂರಿನ 3 ಮಂದಿ, ಚಿಕ್ಕಬಳ್ಳಾಪುರದ ಮಂದಿಯಲ್ಲಿ 2 ಮಂದಿ, ಚಿತ್ರದುರ್ಗದ 2 ಮಂದಿ, ಕಲಬುರಗಿಯ ಮಂದಿಗೆ 2 ಮಂದಿ, ಉಡುಪಿಯ 21 ಮಂದಿ, ತು,ಮಕೂರಿನ ಮಂದಿಯನ್ನು ಗುರುತಿಸಿದ್ದಾರೆ. ಇದರ ಬಹ್ರೇನ್‌ನಲ್ಲಿ ಒಟ್ಟು 9 ಮಂದಿ ಸಿಲುಕಿದ್ದಾರೆ. ಹಾಸನದ 4 ಮಂದಿ ಉಡುಪಿಯ 3 ಮಂದಿ ಕೊಡಗಿನ 1 ಮಂದಿ, ಮತ್ತೆ ಒಬ್ಬರ ಜಿಲ್ಲೆ ಯಾವುದು ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *