
ದಾವಣಗೆರೆ, ಮಾ.2: ಇರಾನ್ ದೇಶದ ಪೈಲ್ವಾನ್ ಮಿರ್ಜಾ ಅವರು ಕ್ರೀಡಾಭಿಮಾನಿಗಳ ಮನಗೆದ್ದಿದ್ದಾರೆ. ಇತ್ತ ಇರಾನ್-ಇಸ್ರೇಲ್ ನಡುವೆ ಭೀಕರ ಯುದ್ಧ ನಡೆಯುತ್ತಿದ್ದರೂ, ಪೂರ್ವ ನಿಗದಿಯಂತೆ ದಾವಣಗೆರೆಯ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸುವ ಮೂಲಕ ಮಿರ್ಜಾ ಅವರು ಅದ್ಭುತ ಕ್ರೀಡಾ ಪ್ರೇಮ ಮೆರೆದಿದ್ದಾರೆ. ನಗರದ ಬೀರೇಶ್ವರ ದೇವಸ್ಥಾನದ ಸುತ್ತಲೂ ನಡೆದ ಫೈನಲ್ ಕಟ್ಟಡದ ಪುಣೆ ಮೂಲದ ಪೈಲ್ವಾನ್ ರವಿರಾಜ್ ಮತ್ತು ಇರಾನ್ನ ಮಿರ್ಜಾ ಮುಖಾಮುಖಿಯಾಗಿದ್ದರು. ಬರೋಬ್ಬರಿ 43 ನಿಮಿಷಗಳ ಕಾಲ ನಡೆದ ಈ ರೋಚಕ ಹೋರಾಟದಲ್ಲಿ ಇಬ್ಬರು ಪೈಲ್ವಾನರು ತಾಂತ್ರಿಕ ದಾಳಿ-ಪ್ರತಿದಾಳಿಗಳ ಮೂಲಕ ಪ್ರದರ್ಶಿಸಿದರು. ಅಂತಿಮವಾಗಿ ಪಂದ್ಯವು ಸಮಬಲದಲ್ಲಿ ಅಂತ್ಯಗೊಂಡಿತು. ಸ್ಪಷ್ಟ ಜಯಶಾಲಿ ನಿರ್ಧಾರವಾಗದ ಕಾರಣ ಇಬ್ಬರಿಗೂ ತಲಾ 1 ಲಕ್ಷ ರೂಪಾಯಿ ನಗದು ಬಹುಮಾನ ನೀಡಿ ಗೌರವಿಸಲಾಯಿತು. ತಮ್ಮ ದೇಶದ ಪರಿಸ್ಥಿತಿಯಲ್ಲಿ ಇಲ್ಲಿಗೆ ಆಗಮಿಸಿದ ಮಿರ್ಜಾ, “ಹಿಂದುಸ್ತಾನ ಮತ್ತು ಸ್ಥಳೀಯ ಜನರ ಪ್ರೀತಿ ಅದ್ಭುತ” ಎಂದು ಹಾಡಿ ಹೊಗಳಿದ್ದಾರೆ. ಯುದ್ಧದ ಆತಂಕದ ನಡುವೆಯೂ ಕುಸ್ತಿ ಅಖಾಡಕ್ಕಿಳಿದ ಅವರ ಧೈರ್ಯಕ್ಕೆ ದಾವಣಗೆರೆ ಜನತೆ ಚಪ್ಪಾಳೆ ತಟ್ಟಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ