
<p>ಮುಂಬೈ: ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್, ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಹೀಗಿರುವಾಗಲೇ ತಮ್ಮ ವೈಯುಕ್ತಿಕ ಜೀವನಕ್ಕಿಂತ ಮಿಗಿಲಾಗಿ ವೃತ್ತಿಜೀವನ ಮುಖ್ಯ ಎನ್ನುವ ಸಂದೇಶ ಸಾರಿದ್ದಾರೆ. ಈ ಕುರಿತಾದ ಅಪ್ಡೇಟ್ಸ್ ಇಲ್ಲಿದೆ ನೋಡಿ.</p><img><p>ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಇದೀಗ ಬಹುಕಾಲದ ಗೆಳತಿ ಸಾನಿಯಾ ಚಾಂದೋಕ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಮದುವೆ ಮಾರ್ಚ್ 05ರಂದು ನಡೆಯಲಿದೆ.</p><img><p>ಹೀಗಿರುವಾಗಲೇ ಸಚಿನ್ ತೆಂಡೂಲ್ಕರ್ ನಿವಾಸವಾದ ಜಾಮ್ನಗರದಲ್ಲಿ ಪ್ರೀ ವೆಡ್ಡಿಂಗ್ ಸಂಭ್ರಮಾಚರಣೆ ಆರಂಭವಾಗಿದೆ. ಇದೆಲ್ಲದರ ನಡುವೆ ಅರ್ಜುನ್ ತೆಂಡೂಲ್ಕರ್ ತಮ್ಮ ಖಾಸಗಿ ಬದುಕಿಗಿಂತ ಕ್ರಿಕೆಟ್ ಬದುಕು ತುಂಬಾನೆ ಮುಖ್ಯ ಎನ್ನುವ ಸಂದೇಶವನ್ನು ರವಾನಿಸಿದ್ದಾರೆ.</p><img><p>ಹೌದು, ಒಂದು ಕಡೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಅವರ ಹಲ್ದೀ ಹಾಗೂ ಸಂಗೀತ್ ಕಾರ್ಯಕ್ರಮ ಈಗಾಗಲೇ ಶುರುವಾಗಿದೆ. ಹೀಗಿರುವಾಗಲೇ ಅರ್ಜುನ್ ತೆಂಡೂಲ್ಕರ್, ಲಖನೌ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಆಯೋಜಿಸಿದ್ದ ನೂತನ ಜೆರ್ಸಿ ಪ್ರಮೋಷನಲ್ ಫೋಟೋಶೂಟ್ನಲ್ಲಿ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.</p><img><p>ಐಪಿಎಲ್ನ ಲಖನೌ ಸೂಪರ್ ಜೈಂಟ್ಸ್ ತಂಡ 2026ರ ಟೂರ್ನಿಗೂ ಮುನ್ನ ಹೊಸ ಲೋಗೋ ಬಿಡುಗಡೆ ಮಾಡಿದೆ. ಗರುಡ, ಕಿರೀಟ ಹಾಗೂ ಆನೆಯ ಚಿತ್ರಗಳಿರುವ ಲೋಗೋವನ್ನು ತಂಡ ಸಾಮಾಜಿಕ ತಾಣಗಳಲ್ಲಿ ತನ್ನ ಅಧಿಕೃತ ಖಾತೆಗಳ ಮೂಲಕ ಹಂಚಿಕೊಂಡಿದೆ.</p><img><p>ಕಳೆದ ಕೆಲ ವರ್ಷಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದ ಅರ್ಜುನ್ ತೆಂಡೂಲ್ಕರ್, 2026ರ ಐಪಿಎಲ್ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಮುಂಬೈ ಫ್ರಾಂಚೈಸಿಯು 30 ಲಕ್ಷ ರುಪಾಯಿಗೆ ಅರ್ಜುನ್ ತೆಂಡೂಲ್ಕರ್ ಅವರನ್ನು ಲಖನೌ ಫ್ರಾಂಚೈಸಿಗೆ ಟ್ರೇಡ್ ಮಾಡಿತ್ತು.</p><img><p>ತಮ್ಮದೇ ಮದುವೆಯ ಸಂಭ್ರಮಾಚರಣೆಯಿದ್ದರೂ, ವೃತ್ತಿಪರ ವಿಚಾರದಲ್ಲಿ ಬದ್ದತೆ ಹೊಂದಿರುವ ಅರ್ಜುನ್ ತೆಂಡೂಲ್ಕರ್ ಬಗ್ಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>
Source link
ಮದುವೆಯ ಹಲ್ದೀ-ಸಂಗೀತಾ ಕಾರ್ಯಕ್ರಮ ಬಿಟ್ಟು ಲಖನೌ ಜೆರ್ಸಿ ಅನಾವರಣದಲ್ಲಿ ಪಾಲ್ಗೊಂಡ ಅರ್ಜುನ್ ತೆಂಡೂಲ್ಕರ್!