ಬೆಂಗಳೂರು, ಮಾರ್ಚ್ 04: ರಾಜ್ಯ ಕಾಂಗ್ರೆಸ್ನಲ್ಲಿ ಕುರ್ಚಿ ಕಾದಾಟದ ನಡುವೆ ವಿದೇಶಕ್ಕೆ ಹಾರಿದ್ದ ಶಾಸಕರು ವಿದೇಶ ಪ್ರವಾಸ ಮುಗಿಸಿ ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್ಪೋರ್ಟ್ಗೆ ಹೆಚ್.ಡಿ.ತಮ್ಮಯ್ಯ, ದೇವೇಂದ್ರಪ್ಪ, ಪುಟ್ಟರಂಗಶೆಟ್ಟಿ ಸೇರಿದಂತೆ ಹಲವು ಕಾಂಗ್ರೆಸ್ ಶಾಸಕರು ಮಧ್ಯರಾತ್ರಿ ಆಗಮಿಸಿದ್ದಾರೆ. ಈಗಾಗಲೇ ಶಾಸಕರು ಮಾಧ್ಯಮಗಳ ಕ್ಯಾಮರಾ ಕಾಣುವಂತೆ ತರಾತುರಿಯಲ್ಲಿ ಕಾರು ಹತ್ತಿ ತೆಳಿದ್ದಾರೆ. ಅಧ್ಯಯನ ಮಾಡಲು ಹೋಗಿದ್ದಾಗಿ ಶಾಸಕ ದೇವೇಂದ್ರಪ್ಪ ಹೇಳಿದ್ದಾರೆ, ಅದೆಲ್ಲಾ ಸುಳ್ಳು ಎಂದು ಸಿರುಗುಪ್ಪ ಶಾಸಕ ಬಿಎಂ ನಾಗರಾಜ್ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.