2026 ರ ಟಿ20 ರಿಂದ ಎರಡನೇ ಸೆಮಿಫೈನಲ್ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಮಾರ್ಚ್ 5 ರಂದು. ಈ ಆಟ ಗೆದ್ದ ತಂಡಕ್ಕೆ ಫೈನಲ್ ಟಿಕೆಟ್ ಸಿಕ್ಕರೆ, ಸೋತ ತಂಡಕ್ಕೆ ಟಿ20 ರಿಂದ ಗೇಟ್ಪಾಸ್ ಸಿಗಲಿದೆ. ಹೀಗಾಗಿ ಇಂತಹ ಮಹತ್ವದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಇಶಾನ್ ಕಿಶನ್, ಅಭಿಷೇಕ್ ಶರ್ಮಾ ಮತ್ತು ಅಕ್ಷರ್ ಪಟೇಲ್ ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಭಗವಂತನ ಆಶೀರ್ವಾದ ಪಡೆದಿದ್ದಾರೆ.
ವಾಸ್ತವವಾಗಿ ಪ್ರಮುಖ ಪಂದ್ಯಗಳಿಗೆ ಮೊದಲು ಭಾರತೀಯ ಆಟಗಾರರು ದೇವಾಲಯಗಳಿಗೆ ಭೇಟಿ ನೀಡುವುದು ವಾಡಿಕೆ. ಅದರಂತೆ ಇಶಾನ್ ಕಿಶನ್, ಅಭಿಷೇಕ್ ಶರ್ಮಾ ಮತ್ತು ಅಕ್ಷರ್ ಪಟೇಲ್ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಮೂವರು ಆಟಗಾರರು ಟೀಂ ಇಂಡಿಯಾದ ಪ್ಲೇಯಿಂಗ್ 11 ನಲ್ಲಿ ಆಡುವವರಾಗಿದ್ದಾರೆ. ಅದರಲ್ಲೂ ಕಳಪೆ ಫಾರ್ಮ್ ನಿಂದ ಬಳಲುತ್ತಿರುವ ಅಭಿಷೇಕ್ ಶರ್ಮಾಗೆ ಸೆಮಿಫೈನಲ್ ಕಾಳಗ ನಿರ್ಣಾಯಕವಾಗಿದೆ. ಇತ್ತ ಉತ್ತಮ ಫಾರ್ಮ್ನಲ್ಲಿರುವ ಇಶಾನ್ ಕಿಶನ್ ಮತ್ತು ಆಲ್ರೌಂಡರ್ ಆಗಿ ನಿರ್ಣಾಯಕ ಪಾತ್ರ ವಹಿಸುತ್ತಿರುವ ಅಕ್ಷರ್ ಪಟೇಲ್ ಕೂಡ ಭಗವಂತನ ದರ್ಶನ ಪಡೆದರು.
2026 ರ ಟಿ20 ಪ್ರಾರಂಭವಾಗುವ ಮೊದಲು ಕುಲದೀಪ್ ಯಾದವ್ ಮತ್ತು ವರುಣ್ ಚಕ್ರವರ್ತಿ ಕೂಡ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಗಣೇಶನ ಆಶೀರ್ವಾದ ಪಡೆದಿದ್ದರು. ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಸೂಪರ್ 8 ಪಂದ್ಯಕ್ಕೂ ಮುನ್ನ ಕೋಲ್ಕತ್ತಾದ ಕಾಳಿಘಾಟ್ ಕಾಳಿ ದೇವಸ್ಥಾನದಲ್ಲಿ ಅಕ್ಷರ್ ಪಟೇಲ್ ಮತ್ತು ಅಭಿಷೇಕ್ ಶರ್ಮಾ ಪೂಜೆ ಸಲ್ಲಿಸಿದ್ದರು. ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವಿಶಾ ಶೆಟ್ಟಿ ಕೂಡ.
ಹೆಚ್ಚಿನ ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ