
<p>Uttara Kannada sirsi 22 Year Old Youth Shoots Self Karwar ಜಿಲ್ಲೆಯ Sirsi ತಾಲೂಕಿನ ಇಟಗುಳಿ ಸಮೀಪದ ಮುಡೇಸರದಲ್ಲಿ 22 ವರ್ಷದ ಯುವಕನೊಬ್ಬ ನಾಡ ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ.</p><p> </p><img><p>ಉತ್ತರ ಕನ್ನಡ ಜಿಲ್ಲೆಯ ಕಾರವಾರ ಭಾಗದಲ್ಲಿ ಹೃದಯ ಕಲುಕುವ ಘಟನೆ ಬೆಳಕಿಗೆ ಬಂದಿದೆ. Karwar ಜಿಲ್ಲೆಯ Sirsi ತಾಲೂಕಿನ ಇಟಗುಳಿ ಸಮೀಪದ ಮುಡೇಸರದಲ್ಲಿ 22 ವರ್ಷದ ಯುವಕನೊಬ್ಬ ನಾಡ ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ.</p><img><p>ಆತ್ಮ*ಹತ್ಯೆ ಮಾಡಿಕೊಂಡ ಯುವಕನನ್ನು ರವೀಶ್ ಮಾದೇವ ನಾಯ್ಕ (22) ಎಂದು ಗುರುತಿಸಲಾಗಿದೆ. ಮದ್ಯ ವ್ಯಸನಿಯಾಗಿದ್ದ ರವೀಶ್ ಕೂಲಿ ಕೆಲಸ ಮಾಡುತ್ತಿದ್ದನು. ಇತ್ತೀಚೆಗೆ ಪ್ರೇಮ ವೈಫಲ್ಯದಿಂದ ಮನನೊಂದು ಇದ್ದನೆಂಬ ಮಾಹಿತಿ ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.</p><img><p>ಮನೆಯ ಪಕ್ಕದಲ್ಲಿರುವ ಅರಣ್ಯ ಪ್ರದೇಶಕ್ಕೆ ತೆರಳಿದ್ದ ರವೀಶ್, ಅಲ್ಲೇ ನಾಡ ಬಂದೂಕಿನಿಂದ ತನ್ನ ಮೇಲೆ ಗುಂಡು ಹಾರಿಸಿಕೊಂಡಿದ್ದಾನೆ. ಗುಂಡಿನ ಸದ್ದು ಕೇಳಿ ಸ್ಥಳೀಯರು ಓಡಿಬಂದಾಗ ಘಟನೆ ಬೆಳಕಿಗೆ ಬಂದಿದೆ.</p><img><p>ಘಟನೆಯ ಸಂಬಂಧ Sirsi Rural Police Station ನಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರಿದಿದೆ.</p>
Source link
ಮದ್ಯದ ಮತ್ತಿನಲ್ಲಿ ನಾಡ ಬಂದೂಕಿನಿಂದ ಗುಂಡು ಹೊಡೆದುಕೊಂಡು ಶಿರಸಿ ಯುವಕ ಸಾವು