ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ತಮ್ಮ ಬಹುದಿನಗಳ ಗೆಳತಿ ಸಾನಿಯಾ ಚಾಂದೋಕ್ ಅವರೊಂದಿಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಆಗಸ್ಟ್ನಲ್ಲಿ ತೀರ ಖಾಸಗಿಯಾಗಿ ಕುಟುಂಬದವರ ಸಮ್ಮುಖದಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮುಂಬೈನ ಮಹಾಲಕ್ಷ್ಮಿ ರೇಸ್ ಕೋರ್ಸ್ನಲ್ಲಿ ಮೆಹಂದಿ ಸಮಾರಂಭವು ಮಾರ್ಚ್ 3 ರಂದು ನಡೆಯಿತು. ಆ ಸಮಾರಂಭದಲ್ಲಿ ಅನೇಕ ದಂತಕಥೆಗಳು. ಸಚಿನ್ ಅವರ ಆಪ್ತರು, ಕ್ರಿಕೆಟಿಗರು ಮತ್ತು ಸೆಲೆಬ್ರಿಟಿಗಳು ಮೆಹಂದಿ ಸಮಾರಂಭದಲ್ಲಿ ಭಾಗವಹಿಸಿದ್ದರು, ಅವರಲ್ಲಿ ರವಿಶಾಸ್ತ್ರಿ, ಯುವರಾಜ್ ಸಿಂಗ್, ಹರ್ಭಜನ್ ಸಿಂಗ್, ಜಹೀರ್ ಖಾನ್, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್ ಮತ್ತು ಅಜಿತ್ ಅಗರ್ಕರ್ ಸೇರಿದರು. ಇದೀಗ ಮದುವೆಗೆ ಅತಿಥಿಗಳ ಮಹಾಪೂರವೇ ಹರಿದುಬಂದಿತ್ತು.
ಮದುವೆಯಲ್ಲಿ ಗಣ್ಯರ ಉಪಸ್ಥಿತಿ
ಅರ್ಜುನ್ ತೆಂಡೂಲ್ಕರ್ ಮತ್ತು ಸಾನಿಯಾ ಚಾಂದೋಕ್ ಅವರ ವಿವಾಹ ಮುಂಬೈನಲ್ಲಿ ನೆರವೇರಿತು. ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಮ್ಮ ಪತ್ನಿಯೊಂದಿಗೆ ಭಾರತದ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು. ಮಾಜಿ ಕ್ರಿಕೆಟಿಗ ಮತ್ತು ಆಯ್ಕೆದಾರ ಅಜಿತ್ ಅಗರ್ಕರ್ ಕೂಡ ತಮ್ಮ ಪತ್ನಿಯೊಂದಿಗೆ ಆಗಮಿಸಿದ್ದರು. ರಾಹುಲ್ ದ್ರಾವಿಡ್ ಅವರ ಪತ್ನಿ ವಿಜೇತಾ ಪೆಂಧಾರ್ಕರ್, ಕಿರಣ್ರೆ, ಅನಿಲ್ ಕುಂಬ್ಳೆ, ಅಜಿಂಕ್ಯ ರಹಾನೆ, ಸುರೇಶ್ ರೈನಾ ಮತ್ತು ವೆಂಕಟೇಶ್ ಪ್ರಸಾದ್ (ಮಾಜಿ ಕ್ರಿಕೆಟಿಗ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ) ಅವರ ಸಮಾರಂಭದಲ್ಲಿ ಭಾಗವಹಿಸಿದ್ದರು.
ವೀಡಿಯೊ | ಮುಂಬೈ: ದಿ ಸೇಂಟ್ ರೆಜಿಸ್ ಹೋಟೆಲ್ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ ಮತ್ತು ಸಾನಿಯಾ ಚಾಂಧೋಕ್ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.#ಅರ್ಜುಂಟೆಂಡೂಲ್ಕರ್
(ಪೂರ್ಣ ವೀಡಿಯೊ PTI ವೀಡಿಯೊಗಳಲ್ಲಿ ಲಭ್ಯವಿದೆ – https://t.co/n147TvrpG7) pic.twitter.com/7nvpSBBa9Z
— ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (@PTI_News) ಮಾರ್ಚ್ 5, 2026
ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಇಂದು ಮುಂಬೈನಲ್ಲಿ ಸಾನಿಯಾ ಚಾಂಧೋಕ್ ಅವರನ್ನು ವಿವಾಹವಾದರು.
ಅರ್ಜುನ್ ಮತ್ತು ಸಾನಿಯಾ ಅವರಿಗೆ ಅಭಿನಂದನೆಗಳು. ಒಟ್ಟಿಗೆ ಸಂತೋಷದ ಜೀವನಕ್ಕಾಗಿ ಶುಭಾಶಯಗಳು. 💐 pic.twitter.com/HhkU9is64F
— 𝐑𝐮𝐬𝐡𝐢𝐢𝐢⁴⁵ (@rushiii_12) ಮಾರ್ಚ್ 5, 2026
ಕ್ರಿಕೆಟಿಗ ಮತ್ತು ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರ ವಿವಾಹದ ಆರತಕ್ಷತೆಗಾಗಿ ಮುಂಬೈಗೆ ಬಂದಿರುವುದು ಅದ್ಭುತವಾಗಿದೆ. ಬ್ರಹ್ಮಣಿ ಮತ್ತು ನಾನು ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಮತ್ತು ಶ್ರೀ ಮುಖೇಶ್ ಅಂಬಾನಿ ಜಿ, ಐಸಿಸಿ ಅಧ್ಯಕ್ಷ ಶ್ರೀ ಜಯ್ ಶಾ ಮತ್ತು ಇತರ ಸ್ನೇಹಿತರನ್ನು ಭೇಟಿಯಾಗಲು ಸಂತೋಷಪಟ್ಟೆವು. pic.twitter.com/WGz6Tt9S40
– ಲೋಕೇಶ್ ನಾರಾ (@naralokesh) ಮಾರ್ಚ್ 5, 2026
ಅರ್ಜುನ್ ತೆಂಡೂಲ್ಕರ್ ಮದುವೆಯಲ್ಲಿ ಎಂಎಸ್ ಧೋನಿ ಮತ್ತು ಪತ್ನಿ ಸಾಕ್ಷಿ #ಎಂಎಸ್ ಧೋನಿ #ಅರ್ಜುಂಟೆಂಡೂಲ್ಕರ್ pic.twitter.com/oyugLm6AXP
– ಅರ್ಜುನ್ (@Arjun13135581) ಮಾರ್ಚ್ 5, 2026
#ವೀಕ್ಷಿಸಿ | ಮುಂಬೈ: ಮಾಜಿ ಭಾರತೀಯ ಕ್ರಿಕೆಟಿಗ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ತಮ್ಮ ಕುಟುಂಬದೊಂದಿಗೆ ಅರ್ಜುನ್ ತೆಂಡೂಲ್ಕರ್ ಮತ್ತು ಸಾನಿಯಾ ಚಾಂಧೋಕ್ ಅವರ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದಾರೆ. pic.twitter.com/fwJdi4ScsA
– ANI (@ANI) ಮಾರ್ಚ್ 5, 2026
ಈ ವಿವಾಹ ಸಮಾರಂಭದಲ್ಲಿ ರಾಜಕೀಯ ವ್ಯಕ್ತಿಗಳು ಕೂಡ ಭಾಗವಹಿಸಿದ್ದರು. ಕೆಲವು ದಿನಗಳ ಹಿಂದೆ ಸಚಿನ್ ತೆಂಡೂಲ್ಕರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡಿದ್ದರು. ಕ್ರೀಡಾ ತಾರೆಯರು, ಕೈಗಾರಿಕೋದ್ಯಮಿಗಳು ಮತ್ತು ಪ್ರಮುಖ ವ್ಯಕ್ತಿಗಳು ಭಾಗವಹಿಸಿದ್ದರು, ಇದು ಕಾರ್ಯಕ್ರಮವನ್ನು ಇನ್ನಷ್ಟು ಅದ್ದೂರಿಯಾಗಿ ಮಾಡಿತು.
#ವೀಕ್ಷಿಸಿ | ಮುಂಬೈ: ಅರ್ಜುನ್ ತೆಂಡೂಲ್ಕರ್ ಮತ್ತು ಸಾನಿಯಾ ಚಾಂಧೋಕ್ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಐಸಿಸಿ ಅಧ್ಯಕ್ಷ ಜಯ್ ಶಾ ಆಗಮಿಸಿದ್ದಾರೆ. pic.twitter.com/sW8xn6fUOX
– ANI (@ANI) ಮಾರ್ಚ್ 5, 2026
ಅರ್ಜುನ್- ಸಾನಿಯಾ ಬಗ್ಗೆ ಕಿರುಪರಿಚಯ
ಅರ್ಜುನ್ ತೆಂಡೂಲ್ಕರ್ ದೇಶಿ ಕ್ರಿಕೆಟ್ನಲ್ಲಿ ಗೋವಾ ಪರ ಆಡುತ್ತಿದ್ದರು, ಐಪಿಎಲ್ನಲ್ಲಿ ಇಷ್ಟು ವರ್ಷ ಮುಂಬೈ ಇಂಡಿಯನ್ಸ್ ಆಡಿದ್ದರು. ಇದೀಗ ಅವರು ಪ್ರಸ್ತುತ ಲಕ್ನೋ ಸೂಪರ್ ಜೈಂಟ್ಸ್ ತಂಡದ ಭಾಗವಾಗಿದ್ದಾರೆ. ಇತ್ತ ಸಾನಿಯಾ, ಮುಂಬೈ ಮೂಲದ ಕೈಗಾರಿಕೋದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಸಾನಿಯಾ ಮುಂಬೈ ಮೂಲದ ಮಿಸ್ಟರ್ ಪಾವ್ಸ್ ಪೆಟ್ ಸ್ಪಾ ಮತ್ತು ಸ್ಟೋರ್ ಎಲ್ಎಲ್ಪಿಯಲ್ಲಿ ನಿಯೋಜಿತ ಪಾಲುದಾರ ಮತ್ತು ನಿರ್ದೇಶಕಿಯೂ ಆಗಿದ್ದಾರೆ. ಹಾಗೆಯೇ ಅರ್ಜುನ್ ತೆಂಡೂಲ್ಕರ್ ಅವರ ಬಾಲ್ಯದ ಗೆಳತಿಯೂ ಆಗಿರುವ ಸಾನಿಯಾ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ನಿಂದ ಪದವಿ ಪಡೆದಿದ್ದಾರೆ.
ಹೆಚ್ಚಿನ ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ