ಬಂಗಾರ ಮೈಮೇಲಿದ್ರೆ ಜೀವಕ್ಕೆ ಕುತ್ತು: ಚಿನ್ನಕ್ಕಾಗಿ ವೃದ್ಧೆಯ ಕಿವಿಯನ್ನೆ ಕತ್ತರಿಸಿದ ಕಳ್ಳರ ಗ್ಯಾಂಗ್

ಬಂಗಾರ ಮೈಮೇಲಿದ್ರೆ ಜೀವಕ್ಕೆ ಕುತ್ತು: ಚಿನ್ನಕ್ಕಾಗಿ ವೃದ್ಧೆಯ ಕಿವಿಯನ್ನೆ ಕತ್ತರಿಸಿದ ಕಳ್ಳರ ಗ್ಯಾಂಗ್



ಬಂಗಾರ ಮೈಮೇಲಿದ್ರೆ ಜೀವಕ್ಕೆ ಕುತ್ತು: ಚಿನ್ನಕ್ಕಾಗಿ ವೃದ್ಧೆಯ ಕಿವಿಯನ್ನೆ ಕತ್ತರಿಸಿದ ಕಳ್ಳರ ಗ್ಯಾಂಗ್
<p>ಚಿನ್ನದ ಆಭರಣಕ್ಕಾಗಿ ದುಷ್ಕರ್ಮಿಗಳು ಒಂಟಿ ವೃದ್ಧೆಯ ಮೇಲೆ ಹಲ್ಲೆ ಮಾಡಿ ಆಕೆಯ ಚಿನ್ನದ ಬೆಂಡೋಲೆಗಾಗಿ ಕಿವಿಯನ್ನೇ ಕತ್ತರಿಸಿದಂತಹ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೂವಳ್ಳಿಯಲ್ಲಿ ನಡೆದಿದೆ.&nbsp;</p><img><p>ಕೋಲಾರ : ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದ್ದು, ಇದರಿಂದಾಗಿ ಈಗ ಚಿನ್ನ ಧರಿಸುವವರ ಸುರಕ್ಷತೆಯ ಬಗ್ಗೆ ಆತಂಕ ಮೂಡಿದೆ. ದುಬಾರಿ ಚಿನ್ನವನ್ನು ಮೈ ಮೇಲೆ ಹಾಕಿ ರಸ್ತೆಯಲ್ಲಿ ನಡೆಯಲು ಸಾಧ್ಯವಾಗದಂತಹ ಘಟನೆಗಳು ಅಲ್ಲಲ್ಲಿ ಕೇಳಿ ಬರುತ್ತಿದೆ. ಹಾಗೆಯೇ ಈಗ ಕೋಲಾರದಲ್ಲಿ ದುಷ್ಕರ್ಮಿಗಳು ಚಿನ್ನದ ಕಿವಿಯೋಲೆ ಧರಿಸಿದ್ದ ವೃದ್ಧೆಯ ಕಿವಿಯನ್ನೇ ಕಿತ್ತೊಯ್ದಿದ್ದಾರೆ.</p><img><p>ಕಿವಿಯೋಲೆಗಾಗಿ ವೃದ್ದೆಯ ಕಿವಿಯನ್ನೆ ಕಳ್ಳರ ಗ್ಯಾಂಗ್ ಕತ್ತರಿಸಿ ಕ್ರೌರ್ಯ ಮೆರೆದಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಹೂವಳ್ಳಿಯಲ್ಲಿ ಈ ಘಟನೆ ನಡೆದಿದೆ.</p><img><p>ರತ್ನಮ್ಮ ಎಂಬ 70 ವರ್ಷದ ವೃದ್ಧೆಯ ಮೇಲೆ ದಾಳಿ ಮಾಡಿದ ಕಳ್ಳರ ಗ್ಯಾಂಗ್ ಅವರ ಕಿವಿಯನ್ನೇ ಕತ್ತರಿಸಿ ಕಿವಿಯೋಲೆ ಹಾಗೂ ಅವರ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾರೆ.</p><img><p>ರತ್ನಮ್ಮ ಅವರು ಒಂಟಿ ಮನೆಯಲ್ಲಿ ವಾಸವಾಗಿದ್ದರು. ತಡ ರಾತ್ರಿ ಒಂಟಿ ಮನೆ ಮೇಲೆ ದಾಳಿ ಮಾಡಿರುವ ಕಿಡಿಗೇಡಿಗಳು ಅವರ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.</p><p><strong>ಇದನ್ನೂ ಓದಿ: </strong><strong>ಮನೆಯಲ್ಲೇ ನಿದ್ದೆಗೆ ಜಾರಿದ ಮಗು : ಕಾಣೆಯಾಗಿದ್ದಾನೆ ಅಂತ ಊರೆಲ್ಲಾ ಹುಡುಕಿ ಬೆಸ್ತು ಬಿದ್ದ ಕುಟುಂಬ</strong></p><img><p>ಸುಮಾರು 25 ಗ್ರಾಂ ಚಿನ್ನದ ಸರ ಹಾಗೂ ಕಿವಿಯೋಲೆ ಕದ್ದು ದುಷ್ಕರ್ಮಿಗಳು ಪರಾರಿಯಾಗಿದ್ದು, ಕಿವಿಯೋಲೆಗಾಗಿ ಈ ಪಾಪಿಗಳು ವೃದ್ಧೆಯ ಕಿವಿಯನ್ನೇ ಕತ್ತರಿಸಿ ಕ್ರೌರ್ಯ ಮೆರೆದಿದ್ದಾರೆ. ಸ್ಥಳಕ್ಕೆ ಕೋಲಾರ ಎಸ್ಪಿ ಕನ್ನಿಕಾ ಸಿಕ್ರಿವಾಲ್ ಭೇಟಿ ನೀಡಿದ್ದು, ಕಳ್ಳರ ಗ್ಯಾಂಗ್‌ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p><strong>ಇದನ್ನೂ ಓದಿ: </strong>ಬಹ್ರೇನ್‌ನಲ್ಲಿ ಕತಾರ್ ನೌಕಾಪಡೆ ಸಿಬ್ಬಂದಿ ನೆಲೆಸಿದ್ದ ಕಟ್ಟಡಗಳ ಮೇಲೆ ಇರಾನ್ ದಾಳಿ</p>



Source link

Leave a Reply

Your email address will not be published. Required fields are marked *