
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಪ್ರಧಾನಿ ಮೋದಿ ಅವರು ಅಮೆರಿಕದ ಮಾತುಗಳಿಗೆ ಮೂಕರಂತೆ ತಲೆಯಾಡಿಸುವ ಮೂಲಕ ಭಾರತದ ವ್ಯೂಹಾತ್ಮಕ ಸ್ವಾತಂತ್ರ್ಯವನ್ನು ಬೇರೊಂದು ರಾಷ್ಟ್ರದ ಪಾದದಡಿ ಇಟ್ಟಿದ್ದಾರೆ. ರಷ್ಯಾ ಹಾಗೂ ಇರಾನ್ನಂಥ ದೇಶಗಳೊಂದಿಗಿನ ಭಾರತದ ದೀರ್ಘ ಕಾಲೀನ ಇಂಧನ ಸಹಭಾಗಿತ್ವ ಹಾಳುಗೆಡವಿದ್ದಾರೆ ಎಂದು ಟೀಕಿಸಿದ್ದಾರೆ.
ಜವಾಹರಲಾಲ್ ನೆಹರೂ ಅವರ ಪ್ರಕಾರ ‘ವಿದೇಶಾಂಗ ನೀತಿಯು ಆರ್ಥಿಕ ನೀತಿಯ ಪರಿಣಾಮವಾಗಿದೆ’. ನೆಹರೂ ಅವರು 7-8 ದಶಕಗಳ ಹಿಂದೆಯೇ ನೀಡಿದ್ದ ಎಚ್ಚರಿಕೆ ಇಂದು ಅಕ್ಷರಶಃ ಸತ್ಯವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇತ್ತೀಚೆಗೆ ತಮ್ಮ ಪುಸ್ತಕದಲ್ಲಿ ಮಾಜಿ ಸೇನಾಧಿಕಾರಿ ಜನರಲ್ ಎಂ.ಎಂ.ನರವಣೆ ಅವರು ಭಾರತದ ವಿದೇ ಶಾಂಗ ನೀತಿ ನಿರ್ಧಾರಗಳಲ್ಲಿ ತಿಳಿವಳಿಕೆಯ ಕೊರತೆ ಬಗ್ಗೆ ಗಂಭೀರ ಆತಂಕ ವ್ಯಕ್ತಪಡಿಸಿದ್ದರು ಎಂದಿದ್ದಾರೆ.